Sunday, December 31, 2023

ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ರಕ್ತದಾನ ಶಿಬಿರ

ಭದ್ರಾವತಿ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜು ರಕ್ತನಿಧಿ ಸಹಯೋಗದೊಂದಿಗೆ ಭಾನುವಾರ ರಕ್ತದಾನ ಶಿಬಿರ ನಡೆಯಿತು.
    ಭದ್ರಾವತಿ: ನಗರದ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜು ರಕ್ತನಿಧಿ ಸಹಯೋಗದೊಂದಿಗೆ ಭಾನುವಾರ ರಕ್ತದಾನ ಶಿಬಿರ ನಡೆಯಿತು.
ಪೊಲೀಸ್ ಉಪಾಧೀಕ್ಷಕ (ಡಿ.ವೈ.ಎಸ್.ಪಿ) ನಾಗರಾಜ್ ಸೇರಿದಂತೆ ಪೇಪರ್‌ಟೌನ್ ಠಾಣೆ ಪೊಲೀಸರು ಹಾಗು ಸಾರ್ವಜನಿಕರು ರಕ್ತದಾನ ಮಾಡಿದರು.
    ಠಾಣಾ ನಿರೀಕ್ಷಕಿ ನಾಗಮ್ಮ,, ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಾಧಿಕಾರಿಗಳಾದ ಡಾ. ಸಯ್ಯದ್ ಮೀರ್ ಮಹಮದ್, ಡಾ. ಹರ್ಷವರ್ಧನ್, ಡಾ. ಸುಚಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಂಚಾರಿ ಪೊಲೀಸ್ ಇಲಾಖೆ ಠಾಣೆ ಸಿಬ್ಬಂದಿ ಹಾಲೇಶಪ್ಪನವರು ಹಲವಾರು ವರ್ಷಗಳಿಂದ ರಕ್ತದಾನ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವತಃ ಸುಮಾರು ೪೦ ಬಾರಿ ರಕ್ತದಾನ ಮಾಡಿದ್ದು, ಉಪವಿಭಾಗದ ವ್ಯಾಪ್ತಿಯ ಠಾಣೆಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸುವಲ್ಲಿ ಯಶಸ್ವಿಯಾಗಿದ್ದಾರೆ.

No comments:

Post a Comment