ಭದ್ರಾವತಿ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿರುವ ಭದ್ರಾ ಪ್ರೌಢ ಶಾಲೆಯಲ್ಲಿ ೧೯೯೨-೯೩ನೇ ಸಾಲಿನ ಹಳೇಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು.
ಭದ್ರಾವತಿ: ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿರುವ ಭದ್ರಾ ಪ್ರೌಢ ಶಾಲೆಯಲ್ಲಿ ೧೯೯೨-೯೩ನೇ ಸಾಲಿನ ಹಳೇಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು.
ಸುಮಾರು ೩೦ ವರ್ಷಗಳ ನಂತರ ವಿದ್ಯಾರ್ಥಿ ಸ್ನೇಹಿತರೆಲ್ಲರೂ ಒಂದೆಡೆ ಸೇರಿ ಸಂಭ್ರಮಾಚರಣೆ ನಡೆಸುವ ಮೂಲಕ ತಮಗೆ ವಿದ್ಯೆ ಹೇಳಿಕೊಟ್ಟ ಶಿಕ್ಷಕರಿಗೆ ಗುರುವಂದನೆ ಸಲ್ಲಿಸಿ ತಮ್ಮ ಹಿಂದಿನ ಅನುಭವಗಳನ್ನು ಹಂಚಿಕೊಂಡರು. ಮುಖ್ಯ ಶಿಕ್ಷಕ ಸಿ.ಎಸ್.ನಾಗರಾಜ, ನಿವೃತ್ತ ಶಿಕ್ಷಕರಾದ ಚನ್ನಪ್ಪ ಮತ್ತು ಶಂಕರಪ್ಪ ಸೇರಿದಂತೆ ಶಿಕ್ಷಕ ಹಾಗು ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.
೧೯೯೨-೯೩ ನೇ ಸಾಲಿನ ವಿದ್ಯಾರ್ಥಿಯಾದ ಪ್ರಸ್ತುತ ಮೈಸೂರು ನಿವಾಸಿ ಕಾಂತರಾಜ್ ಶಾಲೆಗೆ ೧ ಲಕ್ಷ ರು. ಮೌಲ್ಯದ ಬೆಂಚ್ ಮತ್ತು ಡೆಸ್ಕ್ ಗಳನ್ನು ದೇಣಿಗೆಯಾಗಿ ನೀಡಿದರು.
ದೇವೆಂದ್ರ ಸ್ವಾಗತಿಸಿ, ಎಸ್. ಚಂದ್ರಯ್ಯ ಮತ್ತು ಜಯರಂಗ ನಿರೂಪಿಸಿದರು. ರಮೇಶ್ ವಿ. ವಂದಿಸಿದರು.
No comments:
Post a Comment