Thursday, December 14, 2023

ಡಿ.೧೬ರಂದು `ಅನನ್ಯ ಕ್ರೀಡೋತ್ಸವ'

    ಭದ್ರಾವತಿ: ನಗರದ ಅಪ್ಪರ್ ಹುತ್ತಾ ಅನನ್ಯ ಶಿಕ್ಷಣ ಸಂಸ್ಥೆ ಅನನ್ಯ ನರ್ಸರಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ವತಿಯಿಂದ ಡಿ.೧೬ರಂದು `ಅನನ್ಯ ಕ್ರೀಡೋತ್ಸವ' ಆಯೋಜಿಸಲಾಗಿದ್ದು, ಏಷ್ಯನ್ ಪ್ಯಾರಾ ಒಲಂಪಿಕ್ ಕ್ರೀಡಾಕೂಟದ ಕಂಚಿನ ಪದಕ ವಿಜೇತೆ ವೃತ್ತಿ ಜೈನ್ ಉದ್ಘಾಟಿಸಲಿದ್ದಾರೆ.
    ಶಾಲಾ ಆವರಣದಲ್ಲಿ ಬೆಳಿಗ್ಗೆ ೮.೪೫ಕ್ಕೆ ಆರಂಭಗೊಳ್ಳಲಿರುವ ಕ್ರೀಡೋತ್ಸವದಲ್ಲಿ ವಿದ್ಯಾಸಂಸ್ಥೆ ಅಧ್ಯಕ್ಷ ಡಾ. ಕೆ. ನಾಗರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ ೨ ಗಂಟೆಗೆ ವಿದ್ಯಾರ್ಥಿಗಳ ಪೋಷಕರಿಗೂ ವಿಶೇಷ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಕ್ರೀಡೋತ್ಸವ ಯಶಸ್ವಿಗೊಳಿಸುವಂತೆ ಆಡಳಿತ ಮಂಡಳಿ ಕೋರಿದೆ.

No comments:

Post a Comment