Saturday, December 23, 2023

ಭದ್ರಾವತಿ:ಸೆಳೆದ ವೈಕುಂಠನಾಥನ ದರ್ಶನ

 


ಭದ್ರಾವತಿ: ಪ್ರತಿವರ್ಷದಂತೆ ಈ ವರ್ಷ ಸಹ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶನಿವಾರ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು.

     ಬೆಳಗ್ಗೆ ೪.೩೦ರಿಂದಲೇ ವೈಕುಂಠನಾಥನ ದರ್ಶನ ಆರಂಭಗೊಂಡಿದ್ದು, ಈ ಬಾರಿ ಸಹ ಸ್ವಾಮಿಯ ದರ್ಶನ ಭಕ್ತರ ಕಣ್ಮನ ಸೆಳೆಯುತ್ತಿದೆ. ದೇವಾಲಯದ ಪ್ರಧಾನ ಅರ್ಚಕರಾದ ವೇ||ಬ್ರ|| ಶ್ರೀ ರಂಗನಾಥ ಶರ್ಮ ಅವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳುವ ಮೂಲಕ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು.

      ಉಪವಿಭಾಗಾಧಿಕಾರಿ ಜಿ.ಎಚ್ ಸತ್ಯನಾರಾಯಣ, ತಹಸೀಲ್ದಾರ್ ಕೆ.ಆರ್ ನಾಗರಾಜು, ಡಿ. ದೇವರಾಜ ಅರಸು ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ಅನುರಾಧ ಪಟೇಲ್, ದೇವಾಲಯದ ಸಹಾಯಕ ಅರ್ಚಕ ಶ್ರೀನಿವಾಸ್, ದೇವಾಲಯ ವ್ಯವಸ್ಥಾಪನ ಸಮಿತಿ  ಅಧ್ಯಕ್ಷ ಮಾರುತಿ, ಪದಾಧಿಕಾರಿಗಳಾದ ಆಶಾ ಪುಟ್ಟಸ್ವಾಮಿ, ಗಿರಿನಾಯ್ಡು, ವಿಶ್ವೇಶ್ವರಗಾಯಕ್ವಾಡ್, ಉಪ ತಹಸೀಲ್ದಾರ್ ಮಂಜಾನಾಯ್ಕ, ಎ.ಟಿ.ಬಸವರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment