ಆಟವಾಡುತ್ತಿದ್ದ ಬಾಲಕನೋರ್ವನ ಮೇಲೆ ಬೃಹತ್ ಗಾತ್ರದ ಕಬ್ಬಿಣದ ಗೇಟ್ ಮುರಿದು ಬಿದ್ದಿರುವ ಘಟನೆ ಭದ್ರಾವತಿ ನಗರದ ಮಿಲ್ಟ್ರಿಕ್ಯಾಂಪ್ನಲ್ಲಿರುವ ಪೊಲೀಸ್ ವಸತಿ ಗೃಹದ ಮುಖ್ಯದ್ವಾರದ ಬಳಿ ನಡೆದಿದ್ದು, ತೀವ್ರ ಗಾಯಗೊಂಡಿರುವ ಬಾಲಕನ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.
ಭದ್ರಾವತಿ: ಆಟವಾಡುತ್ತಿದ್ದ ಬಾಲಕನೋರ್ವನ ಮೇಲೆ ಬೃಹತ್ ಗಾತ್ರದ ಕಬ್ಬಿಣದ ಗೇಟ್ ಮುರಿದು ಬಿದ್ದಿರುವ ಘಟನೆ ನಗರದ ಮಿಲ್ಟ್ರಿಕ್ಯಾಂಪ್ನಲ್ಲಿರುವ ಪೊಲೀಸ್ ವಸತಿ ಗೃಹದ ಮುಖ್ಯದ್ವಾರದ ಬಳಿ ನಡೆದಿದೆ.
ಪೊಲೀಸ್ ಹೆಡ್ ಕಾನ್ಸ್ಟೇಬಲ್ ರೂಪೇಶ್ರವರ ೮ ವರ್ಷದ ಬಾಲಕ ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಖಾಸಗಿ ಆಸ್ಪತ್ರೆ ಚಿಕಿತ್ಸೆಗೆ ದಾಖಲಿಸಲಾಯಿತು.
ಈ ದುರ್ಘಟನೆಗೆ ಕಳಪೆ ಗುಣಮಟ್ಟದ ಕಬ್ಬಿಣದ ಗೇಟ್ ಅಳವಡಿಸಿರುವುದೇ ಕಾರಣ ಎಂದು ಬಾಲಕನ ತಂದೆ ರೂಪೇಶ್ ಆರೋಪಿಸಿದ್ದಾರೆ. ಸಂಬಂಧಿಸಿದವರು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡುವಂತೆ ಆಗ್ರಹಿಸಿದ್ದಾರೆ.
No comments:
Post a Comment