Sunday, December 31, 2023

ಜ.೨ರಂದು ೧೦ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ : ಎಂ.ಎಸ್ ಸುಧಾಮಣಿ

 ೧೦ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಜ.೨ರಂದು ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂಎಸ್ ಸುಧಾಮಣಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
    ಭದ್ರಾವತಿ : ೧೦ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಜ.೨ರಂದು ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂಎಸ್ ಸುಧಾಮಣಿ ತಿಳಿಸಿದರು.
    ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಸಮ್ಮೇಳನ ಆಯೋಜಿಸಲಾಗಿದೆ ಅಂದು ಬೆಳಿಗ್ಗೆ  ೧೦ಗಂಟೆಗೆ ಭದ್ರಾ ಕಾಲೋನಿ ಭದ್ರಾ ಪ್ರೌಢಶಾಲೆ ೯ನೇ ತರಗತಿ ವಿದ್ಯಾರ್ಥಿನಿ ಸಿಂಚನ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಶ್ರೀ ಸತ್ಯಸಾಯಿ ಪ್ರೌಢಶಾಲೆ ೮ನೇ ತರಗತಿ ವಿದ್ಯಾರ್ಥಿನಿ ಕೆ.ಆರ್ ಸೇವಂತಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
    ಶಾಸಕ ಡಿಕೆ ಸಂಗಮೇಶ್ವರ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕಸಾಪ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದರು.
    ಇದಕ್ಕೂ ಮೊದಲು ಬೆಳಿಗ್ಗೆ ೯.೩೦ಕ್ಕೆ ಪ್ರಶಾಂತಿ ಸೇವಾ ಟ್ರಸ್ಟ್ ಜಂಟಿ ಕಾರ್ಯದರ್ಶಿ ಶಿವಪ್ಪ ರಾಷ್ಟ್ರಧ್ವಜಾರೋಹಣ, ಸಂಚಾರಿ ಪೊಲೀಸ್ ಠಾಣಾಧಿಕಾರಿ ಶಾಂತಲ ನಾಡಧ್ವಜಾರೋಹಣ ಹಾಗು ಎಂ.ಎಸ್ ಸುಧಾಮಣಿ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ.
    ಉದ್ಘಾಟನೆ ಸಮಾರಂಭದ ನಂತರ ಕವಿಗೋಷ್ಠಿ, ಕಥಾಗೋಷ್ಠಿ ಮತ್ತು ಪ್ರಚಲಿತ ವಿದ್ಯಾಮಾನಗಳು ಕುರಿತ ಗೋಷ್ಠಿ ನಡೆಯಲಿವೆ. ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ಶಿಕ್ಷಣ ಸಂಯೋಜಕ ರವಿಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಸಮಾಜ ಸೇವಕ ವೆಂಕಟರಮಣಶೇಟ್, ಸಿದ್ದಪ್ಪ ಮತ್ತು ಎಚ್.ಪಿ ಪ್ರಸನ್ನ ಉಪಸ್ಥಿತರಿರುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕೋಡ್ಲು ಯಜ್ಞಯ್ಯ, ಜೆ. ಉಮಾಪತಿ, ಎಚ್. ತಿಮ್ಮಪ್ಪ, ಗಂಗರಾಜ್, ಬಿ. ಕಾಂತಪ್ಪ, ತಿಪ್ಪಮ್ಮ ಮತ್ತು ಬಿ.ಎಸ್ ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment