Friday, December 1, 2023

ಐಓಸಿಎಲ್ ಗ್ಯಾಸ್ ಕಂಪನಿಯಲ್ಲಿ ಕನ್ನಡ ರಾಜ್ಯೋತ್ಸವ

ಭದ್ರಾವತಿ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿ ಐಓಸಿಎಲ್ ಗ್ಯಾಸ್ ಕಂಪನಿಯಲ್ಲಿ ಶ್ರೀ ಚೌಡೇಶ್ವರಿ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
    ಭದ್ರಾವತಿ : ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿ ಐಓಸಿಎಲ್ ಗ್ಯಾಸ್ ಕಂಪನಿಯಲ್ಲಿ ಶ್ರೀ ಚೌಡೇಶ್ವರಿ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
    ನಾಡ ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಮಾತೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸಿಹಿ ಹಂಚಿ ಸಂಭ್ರಮಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಕಂಪನಿ ಅಧಿಕಾರಿಗಳು, ಸಿಬ್ಬಂದಿಗಳು, ಪ್ರಭಾಕರ್, ಸಾಧಿಕ್ ಸೇರಿದಂತೆ ಚಾಲಕರು, ಭದ್ರತಾ ಸಿಬ್ಬಂದಿ ಗಣೇಶ್, ಸ್ಥಳೀಯರು ಪಾಲ್ಗೊಂಡಿದ್ದರು.

No comments:

Post a Comment