Saturday, December 16, 2023

ವಿಶಿಷ್ಟ ಚೇತನರಿಗೆ ಪೋಷಕರ ಸಹಕಾರ ಅತಿ ಮುಖ್ಯ : ಎ.ಕೆ ನಾಗೇಂದ್ರಪ್ಪ

ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಕೇಂದ್ರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ ಹಾಗು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ೨೦೦೩ ರಿಂದ ೨೦೦೬ನೇ ಸಾಲಿನ ಹಳೇಯ ವಿದ್ಯಾರ್ಥಿಗಳ ಸ್ನೇಹ ಬಳಗದ ಸಹಯೋಗದೊಂದಿಗೆ ವಿಶಿಷ್ಟಚೇತನರಿಗೆ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು.
    ಭದ್ರಾವತಿ: ವಿಶಿಷ್ಟ ಚೇತನರಿಗೆ ಪೋಷಕರ ಸಹಕಾರ ಅತಿ ಅವಶ್ಯಕವಾಗಿದ್ದು, ಇದರಿಂದ ವಿಶಿಷ್ಟ ಚೇತನರ ಆತ್ಮಬಲ ಮತ್ತಷ್ಟು ಹೆಚ್ಚುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು.
    ಅವರು ಶನಿವಾರ ನಗರದ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಕೇಂದ್ರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ ಹಾಗು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ೨೦೦೩ ರಿಂದ ೨೦೦೬ನೇ ಸಾಲಿನ ಹಳೇಯ ವಿದ್ಯಾರ್ಥಿಗಳ ಸ್ನೇಹ ಬಳಗದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶಿಷ್ಟಚೇತನರಿಗೆ ಅಗತ್ಯ ಸಾಮಗ್ರಿ ವಿತರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
    ಸಮಾಜದ ಎಲ್ಲರೂ ವಿಶಿಷ್ಟ ಚೇತನರ ನೆರವಿಗೆ ಮುಂದಾಗಬೇಕು. ಅವರಿಗೆ ಇನ್ನೂ ಹೆಚ್ಚಿನ ಆತ್ಮಸ್ಥೈರ್ಯ ತುಂಬುವ ಕಾರ್ಯ ನಡೆಯಬೇಕು ಎಂದರು.    
    ಕ್ಷೇತ್ರ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ ಮಾತನಾಡಿ, ವಿಶಿಷ್ಟಚೇತನರ ಬಗ್ಗೆ ಅನುಕಂಪ ಪಡುವುದರಿಂದ ಉಪಯೋಗವಾಗುವುದಿಲ್ಲ. ಬದಲಾಗಿ ಅವರಿಗೆ ಅಗತ್ಯವಿರುವ ಸಹಾಯ, ಸಹಕಾರ ನೀಡುವುದು ಮುಖ್ಯ. ಎಲ್ಲರು ತಮ್ಮ ಸಂಪಾದನೆಯಲ್ಲಿ ಅಲ್ಪ ಮೊತ್ತದ ಹಣ ಈ ರೀತಿಯ ಸೇವಾ ಕಾರ್ಯಗಳಿಗೆ ಬಳಸಿದರೆ ಮಾನವತ್ವ ವೃದ್ಧಿಸುತ್ತದೆ ಎಂದರು.
    ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್ ಮಾತನಾಡಿ, ಹಣವಿದ್ದರಿಗೆ ಮತ್ತಷ್ಟು ಹಣಮಾಡುವ ಆಸೆ ಇರುತ್ತದೆ. ಆದರೆ ಉತ್ತಮ ಮಾನವೀಯ ಮೌಲ್ಯ ಹೊಂದಿದವರಿಂದ ಮಾತ್ರ ಸೇವಾ ಕಾರ್ಯಗಳನ್ನು ಮಾಡಲು ಸಾಧ್ಯ ಎಂದರು.
    ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧಕ್ಷೆ ಎಸ್. ಉಮಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಗೌಡ್ರು, ಶ್ರೀ ಸತ್ಯಸಾಯಿ ಶಿಕ್ಷಣ ಸಂಸ್ಥೆ ಶಿಕ್ಷಣ ಸಂಯೋಜಕ ಪರಮೇಶ್ವರಪ್ಪ, ಸರ್.ಎಂ.ವಿ ಕಾಲೇಜಿನ ೨೦೦೩ ರಿಂದ ೨೦೦೬ನೇ ಸಾಲಿನ ಸ್ನೇಹ ಬಳಗದ ಸದಸ್ಯರಾದ ಸುಬ್ರಮಣ್ಯ, ವೀರೇಂದ್ರ ಪಾಟೀಲ್, ಹೇಮ, ಶ್ರೀಕಾಂತ್, ಶರತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕಾರ್ಯಕ್ರಮದಲ್ಲಿ ಸ್ನೇಹಬಳಗದ ವತಿಂದ ವಿಶಿಷ್ಟಚೇತನ ವಿದ್ಯಾರ್ಥಿಗಳಿಗೆ ಅಗತ್ಯ ಸಾಮಾಗ್ರಿಗಳನ್ನು ವಿತರಿಸಲಾಯಿತು. ಲತಾ ಪ್ರಾರ್ಥಿಸಿದರು. ಟಿ.ಎನ್ ಪ್ರತಿಭಾ ಸ್ವಾಗತಿಸಿದರು. ರೇಣುಕಾ ಸಿ.ಜಿ. ನಿರೂಪಿಸಿ ಡಿ.ಎಚ್ ತೀರ್ಥಪ್ಪ ವಂದಿಸಿದರು.

No comments:

Post a Comment