Sunday, February 19, 2023

ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಗದ್ದಿಗೆಯಲ್ಲಿ ವಿಜೃಂಭಣೆಯಿಂದ ಮಹಾಶಿವರಾತ್ರಿ ಆಚರಣೆ

ಭದ್ರಾವತಿ ತಾಲೂಕಿನ ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಗದ್ದಿಗೆ ಮಠ ಹಾಗು ಶ್ರೀ ಶಕ್ತಿ ಮಹಾಗಣಪತಿ ದೇವಾಲಯದಲ್ಲಿ ಮಹಾಶಿವರಾತ್ರಿ ವಿಜೃಂಭಣೆಯಿಂದ ಜರುಗಿತು.
 ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಗದ್ದಿಗೆಯಲ್ಲಿ ವಿಜೃಂಭಣೆಯಿಂದ ಮಹಾಶಿವರಾತ್ರಿ ಆಚರಣೆ
ಭದ್ರಾವತಿ, ಫೆ. ೧೯ : ತಾಲೂಕಿನ ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಗದ್ದಿಗೆ ಮಠ ಹಾಗು ಶ್ರೀ ಶಕ್ತಿ ಮಹಾಗಣಪತಿ ದೇವಾಲಯದಲ್ಲಿ ಮಹಾಶಿವರಾತ್ರಿ ವಿಜೃಂಭಣೆಯಿಂದ ಜರುಗಿತು. 
ಮಠದಲ್ಲಿರುವ ಶ್ರೀ ಮರುಳಸಿದ್ದೇಶ್ವರ ಗದ್ದಿಗೆಗೆ ಹಾಗು ಶ್ರೀ ಶಕ್ತಿ ಮಹಾಗಣಪತಿ ಮತ್ತು ಶಿವನ ವಿಗ್ರಹಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಹೋಮ-ಹವನ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಶಿವಲಿಂಗಕ್ಕೆ ಕ್ಷೀರಾಭಿಷೇಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. 

ಭದ್ರಾವತಿ ತಾಲೂಕಿನ ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಗದ್ದಿಗೆ ಮಠ ಹಾಗು ಶ್ರೀ ಶಕ್ತಿ ಮಹಾಗಣಪತಿ ದೇವಾಲಯದಲ್ಲಿ ಮಹಾಶಿವರಾತ್ರಿ ವಿಜೃಂಭಣೆಯಿಂದ ಜರುಗಿತು. ಭಾನುವಾರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. 
    ಭಾನುವಾರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನದ ಮುಖ್ಯ ಅರ್ಚಕ ತಿಪ್ಪೇಸ್ವಾಮಿ(ರುದ್ರೇಶ್ ಶಾಸ್ತ್ರಿ), ಶ್ರೀ ಮರುಳಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಕಾರ್ಯದರ್ಶಿ ವಾಗೀಶ್, ಶಿವಣ್ಣ(ಹೋಟೆಲ್), ಪ್ರಕಾಶ್, ಧನರಾಜ್, ಮೇಘನಾಥನ್, ಶಿವಕುಮಾರ್, ರಾಮಲಿಂಗಮ್, ಶಾರದಬಾಯಿ, ದೇವರಾಜ್, ಉಮೇಶ್ವರಪ್ಪ(ಮಾಸ್ಟರ್), ಪಾಪುರಾವ್, ಜಿಂಗಯ್ಯ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಮುಖಂಡರು, ಗಣ್ಯರು, ಜೇಡಿಕಟ್ಟೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಪಾಲ್ಗೊಂಡಿದ್ದರು. 

ವಿಐಎಸ್‌ಎಲ್ ಉಳಿಸಲು ಪೇಜಾವರ ಶ್ರೀಗಳಿಗೆ ಕಾರ್ಮಿಕರ ನಿಯೋಗ ಮೊರೆ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ಸಂಬಂಧ ಕಾರ್ಖಾನೆ ಮುಂಭಾಗ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಭಾನುವಾರ ೩೨ನೇ ದಿನ ಪೂರೈಸಿತು. ಈ ನಡುವೆ ಕಾರ್ಮಿಕರ ನಿಯೋಗ ಪ್ರಧಾನಿ ಮಂತ್ರಿಗಳ ಮನವೊಲಿಸಲು ಉಡುಪಿ ಪೇಜಾವರ ಶ್ರೀಗಳ ಮೊರೆ ಹೋಗಿದ್ದಾರೆ.
    ಭದ್ರಾವತಿ, ಫೆ. ೧೯ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ಸಂಬಂಧ ಕಾರ್ಖಾನೆ ಮುಂಭಾಗ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಭಾನುವಾರ ೩೨ನೇ ದಿನ ಪೂರೈಸಿತು. ಈ ನಡುವೆ ಕಾರ್ಮಿಕರ ನಿಯೋಗ ಪ್ರಧಾನಿ ಮಂತ್ರಿಗಳ ಮನವೊಲಿಸಲು ಉಡುಪಿ ಪೇಜಾವರ ಶ್ರೀಗಳ ಮೊರೆ ಹೋಗಿದ್ದಾರೆ.
    ಈಗಾಗಲೇ ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲನಂದನಾಥ ಸ್ವಾಮೀಜಿಯವರಿಗೂ, ಚಿಕ್ಕಮಗಳೂರು ಗೌರಿಗದ್ದೆ ದತ್ತಾಶ್ರಮದ ಶ್ರೀ ವಿನಯ ಗುರೂಜೀಯವರಿಗೂ ಮನವಿ ಸಲ್ಲಿಸಲಾಗಿದೆ.
    ಭಾನುವಾರ ಉಡುಪಿ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಗಳು ಪ್ರತಿಕ್ರಿಯಿಸಿ ಸೋಮವಾರ ಉಡುಪಿಗೆ ಆಗಮಿಸುತ್ತಿರುವ ಭಾರತೀಯ ಜನತಾಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ(ಜೆ.ಪಿ ನಡ್ಡಾ)ರವರೊಂದಿಗೆ ಚರ್ಚಿಸುವ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
    ಕಾರ್ಮಿಕರ ನಿಯೋಗದಲ್ಲಿ ಪ್ರಮುಖರಾದ ನರಸಿಂಹಚಾರ್, ಅಮೃತ್, ಚಂದ್ರಕಾಂತ್, ರಾಕೇಶ್, ಅರುಣ್, ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಗುತ್ತಿಗೆ ಕಾರ್ಮಿಕರ ೩೩ನೇ ದಿನದ ಹೋರಾಟಕ್ಕೆ ಉಡುಪಿ ಪೇಜಾವರ ಶ್ರೀಗಳ ಬೆಂಬಲ :
ಉಡುಪಿ ಪೇಜಾವರ ಶ್ರೀಗಳು ಸೋಮವಾರ ನಗರಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ೩ ಗಂಟೆಗೆ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಆಗಮಿಸಲಿದ್ದಾರೆ. ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ಸೂಚಿಸಿ ಮಾತನಾಡಲಿದ್ದಾರೆ.

ಫೆ.೨೧ರಂದು ನಗರಕ್ಕೆ ಪಂಚರತ್ನ ಯಾತ್ರೆ : ಯಶಸ್ವಿಗೊಳಿಸಲು ಮನವಿ

ಜೆಡಿಎಸ್ ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್

ಭದ್ರಾವತಿಗೆ ಫೆ.೨೧ರಂದು ಪಂಚರತ್ನ ಯಾತ್ರೆ ಆಗಮಿಸುತ್ತಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್ ಮಾಹಿತಿ ನೀಡಿದರು.
    ಭದ್ರಾವತಿ, ಫೆ. ೧೯ : ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಮುಖ ೫ ಅಂಶಗಳನ್ನು ಒಳಗೊಂಡ ಪಂಚರತ್ನ ಯಾತ್ರೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ  ಸಂಚರಿಸುತ್ತಿದ್ದು, ಫೆ.೨೧ರಂದು ಬೆಳಿಗ್ಗೆ ೯ ಗಂಟೆಗೆ ತಾಲೂಕಿಗೆ ಆಗಮಿಸಲಿದೆ ಎಂದು ಜಾತ್ಯತೀತ ಜನತಾದಳ ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್ ತಿಳಿಸಿದರು.
    ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಸತಿಯ ಆಸರೆ, ಶಿಕ್ಷಣವೇ ಆಧುನಿಕ ಶಕ್ತಿ, ಆರೋಗ್ಯ ಸಂಪತ್ತು, ಯುವ ನವ ಮಾರ್ಗ ಹಾಗು ಮಹಿಳಾ ಸಬಲೀಕರಣ ಮತ್ತು ರೈತ ಚೈತನ್ಯ ಒಟ್ಟು ೫ ಪ್ರಮುಖ ಅಂಶಗಳನ್ನು ಪಂಚರತ್ನ ಯಾತ್ರೆ ಒಳಗೊಂಡಿದೆ. ಈಗಾಗಲೇ ಯಾತ್ರೆ ರಾಜ್ಯಾದ್ಯಂತ ಸಂಚರಿಸಿ ರಾಜ್ಯದ ಜನರಲ್ಲಿ ಆತ್ಮವಿಶ್ವಾಸ ಮೂಡಿಸುತ್ತಿದೆ. ಇದೀಗ ಕ್ಷೇತ್ರಕ್ಕೆ ಆಗಮಿಸುತ್ತಿದ್ದು, ಯಾತ್ರೆ ಸಂಪೂರ್ಣ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದರು.
    ತಾಲೂಕಿನ ಗಡಿಭಾಗ ಕಾರೇಹಳ್ಳಿಗೆ ಆಗಮಿಸಲಿರುವ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಲಾಗುವುದು. ನಂತರ ಯಾತ್ರೆ ಕೆಂಪೇಗೌಡ ನಗರ, ಬಾರಂದೂರು, ಕೆಂಚೇನಹಳ್ಳಿ, ಮಾವಿನಕೆರೆ, ತಾಷ್ಕೆಂಟ್‌ನಗರ, ಯರೇಹಳ್ಳಿ, ಮಾರುತಿನಗರ, ಶಿವನಿಕ್ರಾಸ್, ಗೌರಾಪುರ, ಬಸವನಗುಡಿ, ಕೆ.ಎಚ್ ನಗರ, ಅಂತರಗಂಗೆ, ಕಾಚಗೊಂಡನಹಳ್ಳಿ, ಅಶ್ವಥ್‌ನಗರ, ಶಿವಾಜಿ ವೃತ್ತ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಅಂಡರ್‌ಬ್ರಿಡ್ಜ್, ಹೊಸ ಸೇತುವೆ, ಕೆಎಸ್‌ಆರ್‌ಟಿಸಿ ಬಸ್ ಡಿಪೋ ವೃತ್ತ, ಕಂಚಿಬಾಗಿಲು ವೃತ್ತ ಮೂಲಕ ಕನಕಮಂಟಪ ಮೈದಾನ ತಲುಪಲಿದೆ. ಸಂಜೆ ೪ ಗಂಟೆಗೆ ಕನಕಮಂಟಪ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.


    ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್  ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದ ಅಪ್ಪಾಜಿ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿರುವರು ಎಂದರು.
ವೇದಿಕೆ ಕಾರ್ಯಕ್ರಮ ಮುಕ್ತಾಯಗೊಂಡ ನಂತರ ತಾಲೂಕಿನ ನವುಲೆ ಬಸವಾಪುರ ಗ್ರಾಮದಲ್ಲಿ ಗ್ರಾಮವಾಸ್ತವ್ಯ ನಡೆಯಲಿದೆ. ಫೆ.೨೨ರಂದು ತಾಲೂಕಿನ ಸಿ.ಎನ್  ರಸ್ತೆ ಮೂಲಕ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಪ್ರವೇಶಿಸಲಿದೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.
    ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಗ್ರಾಮಾಂತರ ಘಟಕದ ಅಧ್ಯಕ್ಷ ಕೆ. ಧರ್ಮಕುಮಾರ್, ಪ್ರಮುಖರಾದ ಮುರ್ತುಜಾಖಾನ್, ಮಧುಸೂಧನ್, ಉಮೇಶ್, ಮೈಲಾರಪ್ಪ, ಲೋಕೇಶ್ವರ್ ರಾವ್ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.