ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ೫೭ನೇ ದಿನದ ಹೋರಾಟಕ್ಕೆ ಕಾರುಣ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಗುರುವಾರ ಬೆಂಬಲ ಸೂಚಿಸಲಾಯಿತು.
ಭದ್ರಾವತಿ, ಮೇ. ೧೬ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ೫೭ನೇ ದಿನದ ಹೋರಾಟಕ್ಕೆ ಕಾರುಣ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಗುರುವಾರ ಬೆಂಬಲ ಸೂಚಿಸಲಾಯಿತು.
ಸಂಜೆ ಜನ್ನಾಪುರ ಪ್ರಮುಖ ರಸ್ತೆಗಳಲ್ಲಿ ವಿಐಎಸ್ಎಲ್ ಕಾರ್ಖಾನೆ ಉಳಿಸುವ ಸಂಬಂಧ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಹಾಕುವ ಮೂಲಕ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಗಳ ವಿರುದ್ಧ ಪ್ರತಿಭಟಿಸಲಾಯಿತು. ನಂತರ ಮೇಣದ ಬತ್ತಿ ಬೆಳಗಿಸಿ ಬೆಂಬಲ ವ್ಯಕ್ತ ಪಡಿಸಲಾಯಿತು.
ಟ್ರಸ್ಟ್ ಪದಾದಿಕಾರಿಗಳಾದ ಕೆ. ನಾಗರಾಜ್, ಸುರೇಶ್ ಕುಮಾರ್, ಟಿ. ಬಾಸ್ಕರ್, ಎನ್. ನಾಗವೇಣಿ, ಆರ್. ಮಂಜುಳಾ, ಜೆ. ಕಾಂತಾ, ಕಾರ್ತಿಕ್, ವಿಲ್ಸನ್ ಬಾಬು ಸೆಬಾಸ್ಟಿಯನ್, ಕವಿತಾ, ಸಂಜೀವಿನಿ ಹಿರಿಯ ನಾಗರೀಕರ ಆರೈಕೆ ಕೇಂದ್ರದ ಸವಿತಾ, ಗುತ್ತಿಗೆ ಕಾರ್ಮಿಕರ ಸಂಘದ ಪ್ರಮುಖರಾದ ಸುರೇಶ್, ಎಂ. ನಾರಾಯಣ, ಆರ್. ಸ್ಪೂರ್ತಿ, ಸರವಣ, ಪ್ರಶಾಂತ್, ರಮೇಶ್ ಸೇರಿದಂತೆ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು.