ರಾಜ್ಯಪಾಲರಿಗೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಮನವಿ
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪರವರು ಮುಸ್ಲಿಂ ಧರ್ಮ ಹಾಗು ದೇವರ ಕುರಿತು ಬಾಯಿಗೆ ಬಂದಂತೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುತ್ತಿದ್ದು, ಇವರನ್ನು ತಕ್ಷಣ ಬಂಧಿಸಿ ಕಾರಾಗೃಹದಲ್ಲಿಸಬೇಕೆಂದು ಆಗ್ರಹಿಸಿ ಮರ್ಕರ್ಜಿ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್, ಅಹಲೆ ಸುನ್ನತ್-ಉಲ್-ಜಮಾತೆ ಭದ್ರಾವತಿ ತಾಲೂಕು ಶಾಖೆವತಿಯಿಂದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಮಾ. ೨೧ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪರವರು ಮುಸ್ಲಿಂ ಧರ್ಮ ಹಾಗು ದೇವರ ಕುರಿತು ಬಾಯಿಗೆ ಬಂದಂತೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುತ್ತಿದ್ದು, ಇವರನ್ನು ತಕ್ಷಣ ಬಂಧಿಸಿ ಕಾರಾಗೃಹದಲ್ಲಿಸಬೇಕೆಂದು ಆಗ್ರಹಿಸಿ ಮರ್ಕರ್ಜಿ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್, ಅಹಲೆ ಸುನ್ನತ್-ಉಲ್-ಜಮಾತೆ ತಾಲೂಕು ಶಾಖೆವತಿಯಿಂದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಪ್ರಮುಖರು ಮಾತನಾಡಿ, ದೇಶದಲ್ಲಿ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಸೇರಿದಂತೆ ಎಲ್ಲಾ ಧರ್ಮದವರು ಒಗ್ಗಟ್ಟಾಗಿ ಸಮಾನತೆ, ಸೌಹಾರ್ದತೆ ಭಾರತೀಯ ಸಂಸ್ಕೃತಿ ಮೈಗೂಡಿಸಿಕೊಂಡು ಬದುಕುತ್ತಿದ್ದು, ಈ ನಡುವೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪರವರು ಮುಸ್ಲಿಂ ಧರ್ಮ ಹಾಗು ದೇವರ ಕುರಿತು ಬಾಯಿಗೆ ಬಂದಂತೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದು, ಇವರು ಕೋಮುವಾದಿ ಸಂಸ್ಕೃತಿಯನ್ನು ಮೈಗೂಡಿಸಿಕೊಂಡಿದ್ದಾರೆಯೋ ಅಥವಾ ಭಾರತೀಯ ಸಂಸ್ಕೃತಿಯನ್ನು ಮೈಗೂಡಿಸಿಕೊಂಡಿದ್ದಾರೆಯೋ ಎಂಬುದು ತಿಳಿಯುತ್ತಿಲ್ಲ. ನೆಮ್ಮದಿಯಿಂದ ಬದುಕುತ್ತಿರುವ ನಮ್ಮ ನಡುವೆ ಕೋಮು ಸಂಘರ್ಷ ಉಂಟಾಗಲು ಕಾರಣರಾಗಿರುತ್ತಾರೆಂದು ಆರೋಪಿಸಿದರು.
ತಮ್ಮ ಸ್ವಾರ್ಥಕ್ಕಾಗಿ ಇವರು ಹಿಂದುತ್ವ ಹೆಸರಿನಲ್ಲಿ ಬಾಯಿ ಬಂದಂತೆ ಮಾತನಾಡುತ್ತಿದ್ದು, ಈ ಹಿನ್ನಲೆಯಲ್ಲಿ ಇವರನ್ನು ತಕ್ಷಣ ಬಂಧಿಸಿ ಕಾರಾಗೃಹದಲ್ಲಿಸಿ ಎಲ್ಲರೂ ನೆಮ್ಮದಿಯಾಗಿ ಬದುಕು ವಾತಾವರಣ ಕಲ್ಪಿಸಿಕೊಡುವಂತೆ ಕೋರಿದರು.
ಇದಕ್ಕೂ ಮೊದಲು ನಗರದ ರಂಗಪ್ಪ ವೃತ್ತದಿಂದ ತಾಲೂಕು ಕಛೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಮರ್ಕರ್ಜಿ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್, ಅಹಲೆ ಸುನ್ನತ್-ಉಲ್-ಜಮಾತೆ ತಾಲೂಕು ಶಾಖೆ ಅಧ್ಯಕ್ಷ ಮುರ್ತುಜಾ ಖಾನ್ ನೇತೃತ್ವ ವಹಿಸಿದ್ದರು. ಪ್ರಮುಖರಾದ ಮಹಮದ್ ಸನ್ನಾವುಲ್ಲಾ, ಅಮೀರ್ಜಾನ್, ಬಾಬಾ ಜಾನ್, ದಿಲ್ದಾರ್, ಎ. ಮಸ್ತಾನ್, ಮುಕ್ರಮ್ ಖಾನ್, ಇಬ್ರಾಹಿಂ ಖಾನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.