Friday, April 7, 2023

ವಿಐಎಸ್‌ಎಲ್ ನಿವೃತ್ತ ಕಾರ್ಮಿಕ, ಕ್ರೀಡಾಪಟು ರಾಮಣ್ಣ ಶೆಟ್ಟಿ ನಿಧನ

ರಾಮಣ್ಣ ಶೆಟ್ಟಿ 
    ಭದ್ರಾವತಿ, ಏ. ೭ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕ, ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರಾಮಣ್ಣ ಶೆಟ್ಟಿ(೭೨) ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಇದ್ದರು. ರಾಮಣ್ಣ ಶೆಟ್ಟಿ ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಇವರು ಕ್ರೀಡಾಪಟುಗಳಾಗಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದರು. ಇವರ ಅಂತ್ಯಕ್ರಿಯೆ ಶುಕ್ರವಾರ ಹುತ್ತಾ ಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
    ಇವರ ನಿಧನಕ್ಕೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರು, ಕ್ರೀಡಾಪಟುಗಳು, ತಾಲೂಕು ಬಿಜೆಪಿ ಮಂಡಲ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

ಗಾಂಜಾ ಮಾರಾಟ : ೩ ಜನರ ಬಂಧನ

೭ ಸಾವಿರ ರು. ಮೌಲ್ಯದ ೧೯೫ ಗ್ರಾಂ. ಗಾಂಜಾ ವಶ

ಭದ್ರಾವತಿ ಹೊಳೆಹೊನ್ನೂರು ರಸ್ತೆಯ ಲಕ್ಷ್ಮೀ ಸಾಮಿಲ್ ಹಿಂಭಾಗದ ಖಾಲಿ ಜಾಗದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಅಡ್ಡೆಯೊಂದರ ಮೇಲೆ ಹಳೇನಗರ ಠಾಣೆ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ.
    ಭದ್ರಾವತಿ, ಏ. ೭ : ನಗರದ ಹೊಳೆಹೊನ್ನೂರು ರಸ್ತೆಯ ಲಕ್ಷ್ಮೀ ಸಾಮಿಲ್ ಹಿಂಭಾಗದ ಖಾಲಿ ಜಾಗದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಅಡ್ಡೆಯೊಂದರ ಮೇಲೆ ಹಳೇನಗರ ಠಾಣೆ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ.
    ೩ ಜನ ಅಪರಿಚಿತರು ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಗುರುವಾರ ಮಧ್ಯಾಹ್ನ ಠಾಣಾಧಿಕಾರಿ ಶರಣಪ್ಪ ನೇತೃತ್ವದ ತಂಡ ದಾಳಿ ನಡೆಸಿದ್ದು, ೩ ಜನರನ್ನು ಬಂಧಿಸಿ ಸುಮಾರು ೭ ಸಾವಿರ ರು. ಮೌಲ್ಯದ ೧೯೫ ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ, ರು.೬೯೦ ನಗದು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆ.೧೯ರಿಂದ ೨ ದಿನ ತೇರಾಕೋಟಿ ಶ್ರೀರಾಮನಾಮಜಪದ ಯಜ್ಞ

 ಭಕ್ತರಿಗೆ ಉಚಿತವಾಗಿ ಟಿಪ್ಪಣಿ ಪುಸ್ತಕ ವಿತರಣೆ

    ಭದ್ರಾವತಿ, ಏ. ೭ : ಸದ್ಗುರು ಶ್ರೀ ಬ್ರಹ್ಮಚೈತನ್ಯ ಮಹಾರಾಜರ ಹಾಗೂ ಸದ್ಗುರು ಶ್ರೀ ಬ್ರಹ್ಮಾನಂದ ಮಹಾರಾಜರ ಅನುಗ್ರಹದಿಂದ ಶ್ರೀದತ್ತಾವಧೂತ ಗುರುಗಳ ಮಾರ್ಗದರ್ಶನದಲ್ಲಿ ನಗರದಲ್ಲಿ ಆ.೧೯ ಮತ್ತು ೨೦ರಂದು ತೇರಾಕೋಟಿ ಶ್ರೀರಾಮನಾಮಜಪದ ಯಜ್ಞ ಆಯೋಜಿಸಲಾಗಿದೆ.
    ಇದರ ಅಂಗವಾಗಿ ಲೋಕ ಕಲ್ಯಾಣಾರ್ಥವಾಗಿ ಭಕ್ತರು ಪ್ರತಿನಿತ್ಯ ಶ್ರೀರಾಮನಾಮ ಜಪ ಕೈಗೊಳ್ಳುವಂತೆ ಹಾಗು ತೇರಾಕೋಟಿ ಶ್ರೀರಾಮನಾಮಜಪದ ಯಜ್ಞದಂದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.
    ಪ್ರತಿನಿತ್ಯ ಜಪಸಂಖ್ಯೆ ಬರೆದುಕೂಳ್ಳಲು ಟಿಪ್ಪಣಿ ಪುಸ್ತಕವನ್ನು ಮುದ್ರಿಸಲಾಗಿದ್ದು, ಇದನ್ನು ಭಕ್ತರಿಗೆ ಉಚಿತವಾಗಿ ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ: ೮೬೬೦೬೦೦೮೨೭, ೯೬೩೨೬೨೩೩೦೩ ಅಥವಾ ೯೯೮೦೩೨೩೭೩೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಾಮ ಸಾಧಕ ಸಮಿತಿ ತಿಳಿಸಿದೆ.