Friday, April 14, 2023

ಮೇಣದ ಬತ್ತಿ, ಪಂಜು ಬೆಳಗಿಸಿ ಜಾಥಾ ಮೂಲಕ ಮತದಾನ ಜಾಗೃತಿ, ಅರಿವು

ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ಶುಕ್ರವಾರ ಸಂಜೆ ಭದ್ರಾವತಿ ನಗರಸಭೆ ಮುಂಭಾಗದಿಂದ ರಂಗಪ್ಪ ವೃತ್ತದವರೆಗೆ ಜಾಥಾ ಮೂಲಕ ಮತದಾರರಿಗೆ ಮತದಾನದ ಜಾಗೃತಿ ಮತ್ತು ಅರಿವು ಮೂಡಿಸುವ ಸ್ವೀಪ್ ಕಾರ್ಯಕ್ರಮ ನಡೆಯಿತು.
    ಭದ್ರಾವತಿ, ಏ. ೧೪ : ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ಶುಕ್ರವಾರ ಸಂಜೆ ನಗರಸಭೆ ಮುಂಭಾಗದಿಂದ ರಂಗಪ್ಪ ವೃತ್ತದವರೆಗೆ ಜಾಥಾ ಮೂಲಕ ಮತದಾರರಿಗೆ ಮತದಾನದ ಜಾಗೃತಿ ಮತ್ತು ಅರಿವು ಮೂಡಿಸುವ ಸ್ವೀಪ್ ಕಾರ್ಯಕ್ರಮ ನಡೆಯಿತು.
    ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ರವಿಚಂದ್ರ ನಾಯಕ ನೇತೃತ್ವದಲ್ಲಿ ಮೇಣದ ಬತ್ತಿ ಹಾಗು ಪಂಜು ಬೆಳಗುವ ಮೂಲಕ ಜಾಥಾ ನಡೆಸಿ ಜಾಗೃತಿ ಮತ್ತು ಅರಿವು ಮೂಡಿಸಲಾಯಿತು.
    ಜಾಥಾದಲ್ಲಿ ನಗರಸಭೆ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಮತದಾನ ಜಾಗೃತಿ ಮೂಡಿಸುವ ಫಲಕಗಳನ್ನು ಹಿಡಿದು ಸಾಗಿದರು. ತಹಸೀಲ್ದಾರ್ ಸುರೇಶ್ ಆಚಾರ್, ಪೌರಾಯುಕ್ತ ಮನುಕುಮಾರ್,  ಪೊಲೀಸ್ ನಗರ ವೃತ್ತ ನಿರೀಕ್ಷಕ ಬಿ.ಪಿ ಶಾಂತಿನಾಥ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಭದ್ರಾವತಿ : ವಿವಿಧೆಡೆ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜನ್ಮದಿನ

ಭದ್ರಾವತಿ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ತಾಲೂಕು ಛಲವಾದಿಗಳ(ಪ.ಜಾ) ಸಮಾಜದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೨ನೇ ಜನ್ಮದಿನ ಆಚರಿಸಲಾಯಿತು.
    ಭದ್ರಾವತಿ, ಏ. ೧೪ : ನಗರದ ವಿವಿಧೆಡೆ ಶುಕ್ರವಾರ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೨ನೇ ಜನ್ಮ ದಿನ ಆಚರಿಸಲಾಯಿತು.
    ತಾಲೂಕು ಛಲವಾದಿಗಳ(ಪ.ಜಾ) ಸಮಾಜ :
    ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ತಾಲೂಕು ಛಲವಾದಿಗಳ(ಪ.ಜಾ) ಸಮಾಜದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೨ನೇ ಜನ್ಮದಿನ ಆಚರಿಸಲಾಯಿತು.
    ಸಮಾಜದ ಅಧ್ಯಕ್ಷ ಚನ್ನಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಉದ್ಯಮಿ ಬಿ.ಕೆ ಜಗನ್ನಾಥ್, ಶಿಕ್ಷಕರಾದ ಎ. ತಿಪ್ಪೇಸ್ವಾಮಿ, ತ್ರಿವೇಣಿ, ನಾಗರಾಜ್, ನಗರಸಭೆ ಉಪಾಧ್ಯಕ್ಷೆ ಬಿ.ಪಿ ಸರ್ವಮಂಗಳ ಭೈರಪ್ಪ, ಸದಸ್ಯರಾದ ಉದಯ್‌ಕುಮಾರ್, ಅನ್ನಪೂರ್ಣ ಉಪಸ್ಥಿತರಿದ್ದರು.
    ಸಮಾಜದ ಮುಖಂಡರಾದ ಡಿ. ನರಸಿಂಹಮೂರ್ತಿ ನಿರೂಪಿಸಿದರು. ಎಚ್.ಎಂ ಮಹಾದೇವಯ್ಯ, ಜಂಬೂಸ್ವಾಮಿ ಪ್ರಾರ್ಥಿಸಿದರು. ಸಮಾಜದ ಪ್ರಮುಖರಾದ ಲೋಕೇಶ್, ಚಿಕ್ಕರಾಜು, ಹುಚ್ಚಯ್ಯ, ನಾಗೇಶ್, ಸತೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಭದ್ರಾವತಿ ಪೀಪಲ್ ಲಿಬರೇಷನ್ ಸಂಘ(ಬಿಪಿಎಲ್)ದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್‌ರವರ ಜನ್ಮದಿನ ಆಚರಿಸಲಾಯಿತು.
    ಬಿಪಿಎಲ್ ಸಂಘ :
    ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಭದ್ರಾವತಿ ಪೀಪಲ್ ಲಿಬರೇಷನ್ ಸಂಘ(ಬಿಪಿಎಲ್)ದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್‌ರವರ ಜನ್ಮದಿನ ಆಚರಿಸಲಾಯಿತು.
ಸಂಘದ ಅಧ್ಯಕ್ಷ ಎನ್. ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಪ್ರಧಾನ ಕಾರ್ಯದರ್ಶಿ ಶ್ಯಾಮ್ ಹಾಗು ಪದಾಧಿಕಾರಿಗಳು ಪಾಲ್ಗೊಂಡಿದ್ದರು.
    ತಾಲೂಕು ಬಿಜೆಪಿ ಮಂಡಲ:
  ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೨ನೇ ಜನ್ಮದಿನ ನಗರದ ಹೊಸಸೇತುವೆ ರಸ್ತೆ ಕೆಎಸ್‌ಆರ್‌ಟಿಸಿ ಬಸ್ ಘಟಕದ ಹಿಂಭಾಗದಲ್ಲಿರುವ ತಾಲೂಕು ಬಿಜೆಪಿ ಮಂಡಲ ಕಾರ್ಯಾಲಯದಲ್ಲಿ ನಡೆಯಿತು.
    ಮಂಡಲದ ಅಧ್ಯಕ್ಷ ಜಿ. ಧರ್ಮ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ವಿಧಾನಸಭಾ ಅಭ್ಯರ್ಥಿ ಮಂಗೋಟೆ ರುದ್ರೇಶ್, ಚುನಾವಣಾ ಪ್ರಭಾರಿ ಅಶೋಕ್ ಮೂರ್ತಿ,  ಚುನಾವಣಾ ಸಂಚಾಲಕ ಎಂ. ಮಂಜುನಾಥ್, ಸಹ ಸಂಚಾಲಕ ಎಂ.ಎಸ್ ಸುರೇಶಪ್ಪ, ಚಂದ್ರು, ಧನುಷ್ ಬೋಸ್ಲೆ, ಚಂದ್ರಪ್ಪ, ರಾಜಶೇಖರ್ ಉಪ್ಪಾರ, ಬಿ.ಎಸ್ ಶ್ರೀನಾಥ್ ಆಚಾರ್, ಸಿ. ರಾಘವೇಂದ್ರ, ಪ್ರದೀಪ್, ಕವಿತಾ ಸುರೇಶ್, ಕವಿತಾ ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೨ನೇ ಜನ್ಮದಿನ ಭದ್ರಾವತಿ ಹೊಸಸೇತುವೆ ರಸ್ತೆ ಕೆಎಸ್‌ಆರ್‌ಟಿಸಿ ಬಸ್ ಘಟಕದ ಹಿಂಭಾಗದಲ್ಲಿರುವ ತಾಲೂಕು ಬಿಜೆಪಿ ಮಂಡಲ ಕಾರ್ಯಾಲಯದಲ್ಲಿ ನಡೆಯಿತು.

ಎಲ್ಲರೂ ನೆನಪಿಸಿಕೊಳ್ಳಬೇಕಾದ ಮಹಾನ್ ಚೇತನ ಬಾಬಾ ಸಾಹೇಬ್ ಅಂಬೇಡ್ಕರ್ : ಸುರೇಶ್

ಭದ್ರಾವತಿಯಲ್ಲಿ ಶುಕ್ರವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ  ಭಾರತ ರತ್ನ, ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೨ನೇ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಏ. ೧೪: ದೇಶದಲ್ಲಿ ಎಲ್ಲರೂ ಸಮಾನವಾಗಿ ಬದುಕಲು ನೆರವಾಗುವಂತೆ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸಂವಿಧಾನ ರಚಿಸಿದ್ದು, ಅಂಬೇಡ್ಕರ್ ಎಲ್ಲರೂ ನೆನಪಿಸಿಕೊಳ್ಳಬೇಕಾದ ಮಹಾನ್ ವ್ಯಕ್ತಿ ಎಂದು ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಸುರೇಶ್ ಹೇಳಿದರು.
    ಅವರು ಶುಕ್ರವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೨ನೇ ಜನ್ಮ ದಿನಾಚರಣೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಅಂಬೇಡ್ಕರ್‌ರವರು ಕೇವಲ ದಲಿತ, ಶೋಷಿತರಿಗೆ ಸೀಮಿತವಾದ ವ್ಯಕ್ತಿಯಾಗಿಲ್ಲ. ಸಮಾಜದಲ್ಲಿ ಎಲ್ಲಾ ಧರ್ಮ, ಜಾತಿ ಸಮುದಾಯದವರನ್ನು ಒಗ್ಗೂಡಿಸಿ ಸಮಸಮಾಜ ನಿರ್ಮಾಣ ಮಾಡಿದವರು. ನಾವೆಲ್ಲರೂ ಇಂದು ಒಗ್ಗಟ್ಟಾಗಿ ಬದುಕಲು ಕಾರಣಕರ್ತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮೂಲಕ ಅವರ ಜನ್ಮದಿನ ಆಚರಿಸಲಾಗುತ್ತಿದೆ. ಅಂಬೇಡ್ಕರ್ ಅವರ ವಿಚಾರಧಾರೆಗಳು ಎಲ್ಲರಿಗೂ ತಲುಪಬೇಕೆಂದರು.
    ವೇದಿಕೆಯಲ್ಲಿ ಬಾಪೂಜಿ ಹರಿಜನ ಸೇವಾ ಸಂಘ, ದಲಿತ ನೌಕರರ ಒಕ್ಕೂಟ, ತಾಲೂಕು ಕುರುಬ ಸಮಾಜ, ಮೋಚಿ ಮಹಿಳಾ ಸಮಾಜ, ಸೆಂಟರ್ ಆಪ್ ಇಂಡಿಯಾ ಟ್ರೆಂಡ್ ಯೂನಿಯನ್, ಅರುಂಧತಿಯಾರ್ ಕ್ಷೇಮಾಭಿವೃದ್ಧಿ ಸಂಘ, ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ), ಆದಿ ದ್ರಾವಿಡ (ತಮಿಳ್) ಹಿತ ರಕ್ಷಣಾ ಸಮಿತಿ, ನಾಡಪ್ರಭು ಕೆಂಪೇಗೌಡ ಹಿತ ರಕ್ಷಣಾ ವೇದಿಕೆ, ತೆಲುಗು ಕ್ರಿಶ್ಚಿಯನ್ ಅಸೋಸಿಯೇಷನ್, ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್(ಎಐಟಿಯುಸಿ), ಜಯಕರ್ನಾಟಕ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ(ಪ್ರವಿಣ್ ಶೆಟ್ಟಿ ಬಣ), ಪೌರ ಸೇವಾ ನೌಕರರ ಸಂಘ, ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘ, ಡಾ. ಬಿ.ಆರ್ ಅಂಬೇಡ್ಕರ್ ಯುವ ಜನ ವೇದಿಕೆ, ಪ್ರಜಾರಾಜ್ಯ ದಲಿತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
    ಇದಕ್ಕೂ ಮೊದಲು ಅಂಬೇಡ್ಕರ್ ವೃತ್ತದಿಂದ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ತಾಲೂಕು ಕಛೇರಿ ರಸ್ತೆ ಮೂಲಕ ಹೊಸಸೇತುವೆ ರಸ್ತೆಯಿಂದ ಸಭಾ ವೇದಿಕೆವರೆಗೂ ಬೃಹತ್ ಬೈಕ್‌ರ‍್ಯಾಲಿ ನಡೆಸಲಾಯಿತು.
    ರ‍್ಯಾಲಿಯಲ್ಲಿ ಪ್ರಮುಖರಾದ ಬಾಲಕೃಷ್ಣ, ಮುರುಳಿ, ರಾಜೇಂದ್ರ, ಎಚ್. ರವಿಕುಮಾರ್, ವೆಂಕಟೇಶ್, ಬಿ. ಜಗದೀಶ್, ಇ.ಪಿ ಬಸವರಾಜ್, ಧರ್ಮರಾಜ್, ಸಿ. ಜಯಪ್ಪ, ಕೃಷ್ಣನಾಯ್ಕ, ಐಸಾಕ್ ಲಿಂಕನ್, ಎಸ್. ಉಮಾ, ರೇಖಾ, ಹನುಮಮ್ಮ, ಕಾಣಿಕ್‌ರಾಜ್, ನಿತ್ಯಾನಂದ, ಕುಪ್ಪಸ್ವಾಮಿ, ಭಾಸ್ಕರ್‌ಬಾಬು, ಡಿ. ರಾಜು, ಹಾವು ಮಂಜ,  ಮಹೇಶ್(ಜೆಪಿಎಸ್), ಲೋಕೇಶ್, ಜಗದೀಶ್, ವರುಣ್‌ಗೌಡ, ಎ. ತಿಪ್ಪೇಸ್ವಾಮಿ, ಮಂಜುನಾಥ್, ರವಿಕುಮಾರ್(ವಿಐಎಸ್‌ಎಲ್) ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.


ಭದ್ರಾವತಿಯಲ್ಲಿ ಶುಕ್ರವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೨ನೇ ಜನ್ಮ ದಿನಾಚರಣೆ ಅಂಗವಾಗಿ ಬೃಹತ್ ಬೈಕ್ ರ‍್ಯಾಲಿ ನಡೆಸಲಾಯಿತು.