ಭದ್ರಾವತಿ, ಏ. ೨೧: ಹೊಸಮನೆ ಸಾಯಿನಗರದಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಈ ಸಂಬಂಧ ಪೊಲೀಸರು ತೀವ್ರ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಕೊಲೆಯಾದ ಯುವಕ ಕೋಡಿಹಳ್ಳಿ ನಿವಾಸಿ ನವೀನ್(೨೮) ಎಂದು ಗುರುತಿಸಲಾಗಿದೆ. ಕೊಲೆ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಹರಡಿದ್ದು, ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಹಾಗು ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರವಾದ ಮಾಹಿತಿ ತಿಳಿದು ಬರಬೇಕಾಗಿದೆ.
ಕ್ಷೇತ್ರದಲ್ಲಿ ಚುನಾವಣೆ ಸಂದರ್ಭದಲ್ಲಿ ಗುಂಪು ಘರ್ಷಣೆ, ಹಲ್ಲೆ, ಬೆದರಿಕೆ ಸೇರಿದಂತೆ ಇನ್ನಿತರ ಕಾನೂನು ಬಾಹಿರ ಕೃತ್ಯಗಳು ಸಾಮಾನ್ಯವಾಗಿ ಬಿಟ್ಟಿವೆ. ಈ ನಡುವೆ ಮಕ್ಕಳು, ಮಹಿಳೆಯರು, ಪೋಷಕರು ಆತಂಕದಲ್ಲಿ ಬದುಕುವಂತಾಗಿದೆ.