Friday, April 28, 2023

ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಸ್ನೇಹಮಿಲನ, ಪಕ್ಷ ಸೇರ್ಪಡೆ

ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್ ಪರವಾಗಿ ವ್ಯಾಪಕ ಪ್ರಚಾರ

ಭದ್ರಾವತಿಯಲ್ಲಿ ಕಾಂಗ್ರೆಸ್-ಜೆಡಿಎಸ್ ತೊರೆದು ಹಲವು ಮಂದಿ ಸಂಸದ ಬಿ.ವೈ ರಾಘವೇಂದ್ರ ಸಮ್ಮುಖದಲ್ಲಿ ಶುಕ್ರವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು
    ಭದ್ರಾವತಿ, ಏ. ೨೮: ಈ ಬಾರಿ ಕ್ಷೇತ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂಬ ಗುರಿಯೊಂದಿಗೆ ಭಾರತೀಯ ಜನತಾ ಪಕ್ಷ ವ್ಯಾಪಕ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಶುಕ್ರವಾರ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ವಿವಿಧ ಸಮಾಜಗಳ ಸ್ನೇಹ ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮತ್ತೊಂದೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಪ್ರಮುಖರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
    ವೀರಶೈವ ಲಿಂಗಾಯತ, ಒಕ್ಕಲಿಗ, ಮಡಿವಾಳ, ದೇವಾಂಗ, ಮರಾಠ ಮತ್ತು ಭಾವಸಾರ ಸೇರಿದಂತೆ ವಿವಿಧ ಸಮುದಾಯಗಳ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ ಪಾಲ್ಗೊಂಡು ಆಯಾ ಸಮುದಾಯಗಳ ಮುಖಂಡರುಗಳ ಜೊತೆ ಚರ್ಚಿಸಿದರು. ಈ ಬಾರಿ ಚುನಾವಣೆಯಲ್ಲಿ ಅಭ್ಯರ್ಥಿ ಮಂಗೋಟೆ ರುದ್ರೇಶ್‌ರವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
    ಕಾಂಗ್ರೆಸ್-ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ :
    ಕಾಂಗ್ರೆಸ್-ಜೆಡಿಎಸ್ ತೊರೆದು ಹಲವು ಮಂದಿ ಬಿ.ವೈ ರಾಘವೇಂದ್ರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ವಿನೋದ್, ಉಪಾಧ್ಯಕ್ಷ ನವೀನ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ತಾಲೂಕು  ಪ್ರಧಾನ ಕಾರ್ಯದರ್ಶಿ ಗಣೇಶ್, ಅಖಿಲ ಕರ್ನಾಟಕ ಚಾರೋಡಿ ಮೇಸ್ತ ಸಮಾಜದ ಜಿಲ್ಲಾಧ್ಯಕ್ಷ ಕೆ. ಮೋಹನ್, ಮಂಜುನಾಥ ಸಾಮಿಲ್ ಬಾಬಣ್ಣ,    ವೆಂಕಟೇಶ್ವರ ಸಾಮಿಲ್, ಮರಾಠ ಸಮಾಜದ ಮುಖಂಡ ಗಣೇಶ್ ರಾವ್ ಹಾಗೂ ಜೆಡಿಎಸ್ ಪಕ್ಷ ತೊರೆದು ಹಿರಿಯೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಟಿ ಪ್ರಸನ್ನ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲುಯಜ್ಞಯ್ಯ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಾಲೇರ ಶೇಖರಪ್ಪ, ಬಿ. ರವಿ, ಮುರಳಿಧರ್, ಎಂಪಿಎಂ ಯೂನಿಯನ್ ಮಾಜಿ ಕಾರ್ಯದರ್ಶಿ ಬಿ. ಪ್ರಶಾಂತ್, ಅಶೋಕ್ ರಾವ್, ಬೀರಪ್ಪ, ಸಾರಿಕಾ, ಜ್ಯೋತಿ, ಸಂಗೀತ, ವೇದಮೂರ್ತಿ, ಎಚ್.ಬಿ ರಾಮಪ್ಪ, ಬಸವರಾಜ್ ತಾರಿಕಟ್ಟೆ, ಯದು, ಜಗದೀಶ್, ಜೈಶೀಲ, ಭೈರಪ್ಪ, ಸೇರಿದಂತೆ ಇನ್ನಿತರರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ  ಹಾಗು ಪಕ್ಷದ ತತ್ವ-ಸಿದ್ಧಾಂತ ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
    ಅಭ್ಯರ್ಥಿ ಮಂಗೋಟೆ ರುದ್ರೇಶ್, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ಪಕ್ಷದ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಚುನಾವಣಾ ಪ್ರಭಾರಿ ಅಶೋಕ್ ಮೂರ್ತಿ, ಮುಖಂಡರಾದ ಉತ್ತರ ಕಾಂಡ್ ಜಿತೇಂದ್ರಸಿಂಗ್, ಸಿ. ಮಂಜುಳ, ಪವಿತ್ರ ರಾಮಯ್ಯ, ಜಿ. ಆನಂದಕುಮಾರ್, ವಾದಿರಾಜ್, ಚನ್ನೇಶ್, ಕೂಡ್ಲಿಗೆರೆ ಹಾಲೇಶ್, ತೀರ್ಥಯ್ಯ, ರಾಮಚಂದ್ರ, ಸಿದ್ದಲಿಂಗಯ್ಯ, ಮಂಜುನಾಥ್ ಕದಿರೇಶ್, ಕವಿತಾ ರಾವ್, ಬಿ.ಎಂ ಸಂತೋಷ್ ಮತ್ತು ಗೋಕುಲ ಕೃಷ್ಣ, ಬಿ.ಎಸ್ ಶ್ರೀನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಛಲವಾದಿ ಸಮಾಜ, ಮಹಾಸಭಾದಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಬೆಂಬಲ

ಯಾವುದೇ ಒಬ್ಬ ವ್ಯಕ್ತಿ ನಿರ್ಧಾರಕ್ಕೆ ಸಮುದಾಯದವರು ಬದ್ಧರಾಗಿಲ್ಲ : ಮುಖಂಡರ ಸ್ಪಷ್ಟನೆ

ಭದ್ರಾವತಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಛಲವಾದಿ ಸಮಾಜ ಹಾಗು ತಾಲೂಕು ಛಲವಾದಿ ಮಹಾಸಭಾ ಪ್ರಮುಖರು ಮಾತನಾಡಿದರು.
      ಭದ್ರಾವತಿ, ಏ. ೨೮: ಛಲವಾದಿ ಸಮಾಜದವರು ಯಾವುದೇ ಒಬ್ಬ ವ್ಯಕ್ತಿ ನಿರ್ಧಾರಕ್ಕೆ ಬದ್ಧರಾಗಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದು, ಮೊದಲಿನಿಂದಲೂ ರಾಜಕೀಯವಾಗಿ ಸೂಕ್ತ ನಿರ್ಧಾರ ಕೈಗೊಂಡು ಸಮಾಜದ ಹಿತಕಾಪಾಡುವವರನ್ನು ಬೆಂಬಿಸಿಕೊಂಡು ಬರಲಾಗುತ್ತಿದೆ ಎಂದು ತಾಲೂಕು ಛಲವಾದಿ ಸಮಾಜ ಹಾಗು ತಾಲೂಕು ಛಲವಾದಿ ಮಹಾಸಭಾ ಪ್ರಮುಖರು ಹೇಳಿದರು. 
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು, ರಾಜಕೀಯವಾಗಿ ಸಮಾಜದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ವೈಯಕ್ತಿಕವಾಗಿ ಯಾವುದೇ ಪಕ್ಷಕ್ಕೆ ಬೆಂಬಲ ನೀಡಲಿ. ಆದರೆ ಸಮಾಜದ ಹೆಸರಿನಲ್ಲಿ ಬೆಂಬಲ ನೀಡುವುದು ಬೇಡ ಎಂದರು. 
ಮೊದಲಿನಿಂದಲೂ ಸಮಾಜದ ಹಿತಕಾಪಾಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಬೆಂಬಲಿಸಿಕೊಂಡು ಬರಲಾಗುತ್ತಿದೆ. ಪ್ರಸ್ತುತ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಛಲವಾದಿ ಸಮಾಜದ ಬೆಳವಣಿಗೆಗೆ ಹೆಚ್ಚಿನ ರೀತಿಯಲ್ಲಿ ಸಹಕರಿಸುತ್ತಿದ್ದು, ಈ ಹಿನ್ನಲೆಯಲ್ಲಿ ಅವರನ್ನು ಬೆಂಬಲಿಸಲು ಸಮಾಜ ನಿರ್ಧರಿಸಿದೆ. ಇದೆ ರೀತಿ ಛಲವಾದಿ ಮಹಾಸಭಾ ಸಹ ಸಂಗಮೇಶ್ವರ್‌ರವರನ್ನು ಬೆಂಬಲಿಸಲಿದೆ ಎಂದರು. 
ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಪ್ರಮುಖರಾದ ಚನ್ನಪ್ಪ, ಜಯರಾಜ್, ಎಸ್.ಎಸ್ ಭೈರಪ್ಪ, ಅರುಣ್, ಡಿ. ನರಸಿಂಹಮೂರ್ತಿ, ಸರ್ವಮಂಗಳ, ಮಹೇಶ್, ಸೀನಪ್ಪ ನಂಜಾಪುರ, ಪುಟ್ಟರಾಜ್, ರಾಜು, ಅದಿತ್ಯಶಾಮ್, ಲಕ್ಷ್ಮಣಪ್ಪ, ಗೋಪಾಲ್, ಲೋಕೇಶ್, ಕೆಂಪರಾಜ್, ಎಚ್.ಎಂ ಮಹಾದೇವಯ್ಯ, ಲೋಕೇಶ್(ಕೆಪಿಟಿಸಿಎಲ್) ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.