ಮೇ.೧೯ರ ಸಿಂಡಿಕೇಟ್ಸಭೆಯಲ್ಲಿ ಕ್ರಮ ಕೈಗೊಳ್ಳುವ ಭರವಸೆ
ಭದ್ರಾವತಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಿಂಡಿಕೇಟ್ ನಿರ್ಣಯಗಳ ಮತ್ತು ಕುಲಪತಿಗಳ ಆದೇಶಗಳ ಅನುಷ್ಠಾನಕ್ಕೆ ಆಗ್ರಹಿಸಿ ಕುವೆಂಪು ವಿಶ್ವನಿದ್ಯಾನಿಲಯ ವಿಲೀನೀಕರಣಗೊಂಡ ಅಧ್ಯಾಪಕೇತರ ನೌಕರರ ವೇದಿಕೆ ವತಿಯಿಂದ ಉಪಾಧ್ಯಕ್ಷ ಎಂ.ಎಂ ಸ್ವಾಮಿ ಸೋಮವಾರ ಏಕಾಂಗಿಯಾಗಿ ಸತ್ಯಾಗ್ರಹ ನಡೆಸಿದರು.
ಭದ್ರಾವತಿ, ಮೇ. ೧೫ : ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಿಂಡಿಕೇಟ್ ನಿರ್ಣಯಗಳ ಮತ್ತು ಕುಲಪತಿಗಳ ಆದೇಶಗಳ ಅನುಷ್ಠಾನಕ್ಕೆ ಆಗ್ರಹಿಸಿ ಕುವೆಂಪು ವಿಶ್ವನಿದ್ಯಾನಿಲಯ ವಿಲೀನೀಕರಣಗೊಂಡ ಅಧ್ಯಾಪಕೇತರ ನೌಕರರ ವೇದಿಕೆ ವತಿಯಿಂದ ಉಪಾಧ್ಯಕ್ಷ ಎಂ.ಎಂ ಸ್ವಾಮಿ ಸೋಮವಾರ ಏಕಾಂಗಿಯಾಗಿ ಸತ್ಯಾಗ್ರಹ ನಡೆಸಿದರು.
ಎಂ.ಎಂ ಸ್ವಾಮಿ ಸತ್ಯಾಗ್ರಹ ಆರಂಭಿಸಿದ ಹಿನ್ನಲೆಯಲ್ಲಿ ತಕ್ಷಣ ಸ್ಪಂದಿಸಿದ ವಿಶ್ವವಿದ್ಯಾಲಯದ ಕುಲಪತಿಗಳು ಸಿಂಡಿಕೇಟ್ ಸದಸ್ಯರ ಮತ್ತು ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಮಾತುಕತೆ ನಡೆಸಿ ಮೇ.೧೯ರಂದು ನಡೆಯಲಿರುವ ಸಿಂಡಿಕೇಟ್ ಸಭೆಯಲ್ಲಿ ಸಿಂಡಿಕೇಟ್ ನಿರ್ಣಯ ಮತ್ತು ಕುಲಪತಿಗಳ ಆದೇಶದ ಮೇರೆಗೆ ಉಳಿದ ವಿಲೀನೀಕರಣ ನೌಕರರಿಗೂ ಸೇವಾ-ಸೌಲಭ್ಯಗಳ ವಿಸ್ತರಣೆ ಮಂಜೂರಾತಿ ಆದೇಶ ನೀಡುವ ಸಂಬಂಧ ಸಿಂಡಿಕೇಟ್ ಸಭೆಯಲ್ಲಿ ವಾಸ್ತವಾಂಶಗಳನ್ನು ಮತ್ತು ಸತ್ಯಾಂಶಗಳನ್ನು ಪ್ರಸ್ತುತ ಪಡಿಸಲು ಅವಕಾಶ ನೀಡುವುದಾಗಿ ಹಾಗು ಸೇವಾ-ಸೌಲಭ್ಯಗಳ ವಿಸ್ತರಣೆ ಮಂಜೂರಾತಿ ಆದೇಶ ನೀಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಎಂ.ಎಂ ಸ್ವಾಮಿ ಸತ್ಯಾಗ್ರಹ ಹೋರಾಟ ತಾತ್ಕಾಲಿಕವಾಗಿ ಮುಂದೂಡಿದ್ದಾರೆ.