Thursday, May 18, 2023

ಬಜರಂಗದಳದಿಂದ ಕಾಲೇಜು ವಿದ್ಯಾರ್ಥಿನಿಯರಿಗೆ ಕೇರಳ ಸ್ಟೋರಿ ಉಚಿತ ಪ್ರದರ್ಶನ ವ್ಯವಸ್ಥೆ

ಭದ್ರಾವತಿ ಸಿ.ಎನ್ ರಸ್ತೆಯಲ್ಲಿರುವ ನೇತ್ರಾವತಿ ಚಿತ್ರಮಂದಿರದಲ್ಲಿ ಕೇರಳ ಸ್ಟೋರಿ ಚಲನಚಿತ್ರ ಪ್ರದರ್ಶನಗೊಳ್ಳುತ್ತಿದ್ದು, ಬಜರಂಗದಳ ವತಿಯಿಂದ ಕಾಲೇಜುವಿದ್ಯಾರ್ಥಿನಿಯರಿಗೆ ಉಚಿತ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.
    ಭದ್ರಾವತಿ, ಮೇ. ೧೮ : ನಗರದ ಸಿ.ಎನ್ ರಸ್ತೆಯಲ್ಲಿರುವ ನೇತ್ರಾವತಿ ಚಿತ್ರಮಂದಿರದಲ್ಲಿ ಕೇರಳ ಸ್ಟೋರಿ ಚಲನಚಿತ್ರ ಪ್ರದರ್ಶನಗೊಳ್ಳುತ್ತಿದ್ದು, ಕಾಲೇಜುವಿದ್ಯಾರ್ಥಿನಿಯರಿಗೆ ಉಚಿತ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.
    ಕೇರಳ ಸ್ಟೋರಿ ಚಲನಚಿತ್ರ ವೀಕ್ಷಣೆಗೆ ಹೆಚ್ಚಿನ ಜನರು ಆಗಮಿಸುತ್ತಿದ್ದು, ಬಜರಂಗದಳ ವತಿಯಿಂದ ಗುರುವಾರ ಮೊದಲ ಪ್ರದರ್ಶನದಲ್ಲಿ ವಿವಿಧ ಕಾಲೇಜುಗಳ ಸುಮಾರು ೧೫೦ ವಿದ್ಯಾರ್ಥಿನಿಯರಿಗೆ ಉಚಿತ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಯಿತು.
    ಮೇ.೧೨ರಿಂದ ಪ್ರತಿದಿನ ಚಲನಚಿತ್ರ ೪ ಪ್ರದರ್ಶನಗೊಳ್ಳುತ್ತಿದ್ದು, ಬಜರಂಗದಳ ವಿದ್ಯಾರ್ಥಿನಿಯರಿಗೆ ಚಲನಚಿತ್ರ ಮೂಲಕ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.

ಸಿದ್ದರಾಮಯ್ಯ ೨ನೇ ಬಾರಿಗೆ ಮುಖ್ಯಮಂತ್ರಿ : ವೈ. ನಟರಾಜ್ ಸಂತಸ

ಶಾಸಕ ಬಿ.ಕೆ ಸಂಗಮೇಶ್ವರ್ ಸಚಿವರಾಗಲಿ ಶಬರಿಮಲೆಯಲ್ಲಿ ಪ್ರಾರ್ಥನೆ

ಭದ್ರಾವತಿ ಶ್ರೀ ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೈ. ನಟರಾಜ್ ವೈ. ನಟರಾಜ್‌ರವರು ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ  ಶಬರಿಮಲೆ ಪ್ರವಾಸ ಕೈಗೊಂಡು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲಿ ಹಾಗು ಕ್ಷೇತ್ರದ ಶಾಸಕರಾಗಿ ೪ನೇ ಬಾರಿಗೆ ಆಯ್ಕೆಯಾಗಿರುವ ಬಿ.ಕೆ ಸಂಗಮೇಶ್ವರ್‌ರವರು ಸಚಿವರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
    ಭದ್ರಾವತಿ, ಮೇ. ೧೮ : ರಾಜ್ಯದ ಮುಖ್ಯಮಂತ್ರಿಯಾಗಿ ೨ನೇ ಬಾರಿಗೆ ಪದಗ್ರಹಣ ಸ್ವೀಕರಿಸುತ್ತಿರುವ ಹಿರಿಯ ರಾಜಕೀಯ ಮುತ್ಸದ್ದಿ ಸಿದ್ದರಾಮಯ್ಯನವರಿಗೆ ಶ್ರೀ ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೈ. ನಟರಾಜ್ ಸಂತಸ ವ್ಯಕ್ತಪಡಿಸಿದ್ದಾರೆ.
    ಸಿದ್ದರಾಮಯ್ಯನವರು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ಪ್ರಮುಖ ಕಾರಣಕರ್ತರಲ್ಲಿ ಒಬ್ಬರಾಗಿದ್ದು, ಮೊದಲ ಬಾರಿಗೆ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಈ ಬಾರಿ ಸಹ ಉತ್ತಮ ಆಡಳಿತ ನೀಡುವ ಮೂಲಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
    ವೈ. ನಟರಾಜ್‌ರವರು ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ  ಶಬರಿಮಲೆ ಪ್ರವಾಸ ಕೈಗೊಂಡು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲಿ ಹಾಗು ಕ್ಷೇತ್ರದ ಶಾಸಕರಾಗಿ ೪ನೇ ಬಾರಿಗೆ ಆಯ್ಕೆಯಾಗಿರುವ ಬಿ.ಕೆ ಸಂಗಮೇಶ್ವರ್‌ರವರು ಸಚಿವರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
    ಸಿದ್ದರಾಮಯ್ಯನವರು ಮೇ.೨೦ರಂದು ಪದಗ್ರಹಣ ಸ್ವೀಕರಿಸುತ್ತಿದ್ದು, ಬಿ.ಕೆ ಸಂಗಮೇಶ್ವರ್‌ರವರು ಸಹ ಅಂದು ಸಚಿವರಾಗಿ ಪದಗ್ರಹಣ ಸ್ವೀಕರಿಸುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಅಂತರಾಷ್ಟ್ರೀಯ ಯೋಗ ಸ್ಪರ್ಧೆ : ಡಿ. ನಾಗರಾಜ್ ಚಿನ್ನದ ಪದಕ

ದುಬೈ, ಇಂಟರ್ ನ್ಯಾಷನಲ್ ಯೂತ್ ಯೋಗ ಫೆಡರೇಷನ್ ಅಂಡ್ ಸುಬ್ರ ಸ್ಕೂಲ್ ಆಫ್ ಯೋಗ ಸಹಯೋಗದೊಂದಿಗೆ ಹೋಟೆಲ್ ಅಡ್ಮಿರಲ್ ಪ್ಲಾಸದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಭದ್ರಾವತಿ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಡಿ. ನಾಗರಾಜ್ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ಮೇ. ೧೮ : ದುಬೈ, ಇಂಟರ್ ನ್ಯಾಷನಲ್ ಯೂತ್ ಯೋಗ ಫೆಡರೇಷನ್ ಅಂಡ್ ಸುಬ್ರ ಸ್ಕೂಲ್ ಆಫ್ ಯೋಗ ಸಹಯೋಗದೊಂದಿಗೆ ಹೋಟೆಲ್ ಅಡ್ಮಿರಲ್ ಪ್ಲಾಸದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ನಗರದ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಡಿ. ನಾಗರಾಜ್ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ೬೦ ಮರ್ಷ ಮೇಲ್ಪಟ್ಟ ವಿಭಾಗದಲ್ಲಿ ಚಿನ್ನದ ಪದಕ ಹಾಗು ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸುಬ್ರ ಸ್ಕೂಲ್ ಆಫ್ ಯೋಗ ಅಧ್ಯಕ್ಷ ಮುತ್ತುರಾಮಲಿಂಗಂ ಪ್ರಶಸ್ತಿ ವಿತರಿಸಿದರು.
    ಮೆಕ್ಸಿಕೋ ಪವರ್ ಯೋಗ ಸೆಂಟರ್ ಕೆ. ನಾರಾಯಣಸ್ವಾಮಿ, ಕೊಯಂಬತ್ತೂರಿನ ಪ್ರಾಣ ಯೋಗ ಕೇಂದ್ರದ ಬಾಲಕೃಷ್ಣ ಹಾಗು ಇಂಟರ್ ನ್ಯಾಷನಲ್ ಯೂತ್ ಯೋಗ ಫೆಡರೇಷನ್ ಅಧ್ಯಕ್ಷ ಎಸ್. ಆರ‍್ಮುಗಂ, ಕಾರ್ಯದರ್ಶಿ ಧನರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಯೋಗ ಸ್ಪರ್ಧೆಯಲ್ಲಿ ಮೆಕ್ಸಿಕೋ, ಸಿಂಗಪೂರ್, ಥೈರ್ಲ್ಯಾಂಡ್, ಮಲೇಷಿಯಾ, ಶ್ರೀಲಂಕಾ, ಇಂಡಿಯಾ ಮತ್ತು ಮಸ್ಕತ್ ದೇಶಗಳ ಒಟ್ಟು ೩೬೦ ಯೋಗ ಪಟುಗಳು ಭಾಗವಹಿಸಿದ್ದರು.
    ಕರ್ನಾಟಕ ಯೋಗ ಸಂಸ್ಥೆ ಅಧ್ಯಕ್ಷ ಡಾ. ರಾಮಮೂರ್ತಿ ಮತ್ತು ಕಾರ್ಯದರ್ಶಿ ಡಿ. ಪುಟ್ಟೇಗೌಡ ಸೇರಿದಂತೆ ಇನ್ನಿತರರು ಡಿ. ನಾಗರಾಜ್‌ರವರನ್ನು ಅಭಿನಂದಿಸಿದ್ದಾರೆ.