Thursday, June 22, 2023

ಜೂ.೨೫ರಂದು ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ-ಅಭಿನಂದನೆ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎನ್.ಎಸ್ ಮಲ್ಲಿಕಾರ್ಜುನಯ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
    ಭದ್ರಾವತಿ, ಜೂ. ೨೨ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ಶ್ರೀ ಬಸವೇಶ್ವರ ಧರ್ಮಸಂಸ್ಥೆ ಹಾಗು ತಾಲೂಕಿನ ವಿವಿಧ ಸಂಘ-ಸಂಸ್ಥೆಗಳು ಮತ್ತು ಬಸವಾಭಿಮಾನಿಗಳ ಸಹಯೋಗದೊಂದಿಗೆ ಜೂ. ೨೫ರಂದು ಸಂಜೆ ೬ ಗಂಟೆಗೆ ಹೊಸಸೇತುವೆ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ಸಭಾಭವನದಲ್ಲಿ ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಹಾಗು ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎನ್.ಎಸ್ ಮಲ್ಲಿಕಾರ್ಜುನಯ್ಯ ಹೇಳಿದರು.
    ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪರಿಷತ್ ವತಿಯಿಂದ ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ವಿಶೇಷವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಶ್ರೀ ಬಸವತತ್ವ ಪೀಠ, ಚಿಕ್ಕಮಗಳೂರು, ಬಸವಕೇಂದ್ರ, ಶಿವಮೊಗ್ಗ ಡಾ. ಶ್ರೀ ಬಸವ ಮರುಳಸಿದ್ದ ಸಾಮೀಜಿ ದಿವ್ಯ ಸಾನಿಧ್ಯವಹಿಸಲಿದ್ದು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ ಉದ್ಘಾಟಿಸಲಿದ್ದಾರೆ ಎಂದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಲಿದ್ದು, ತಹಸೀಲ್ದಾರ್ ಟಿ.ಜಿ ಸುರೇಶ್ ಆಚಾರ್ ಮತ್ತು ಶ್ರೀ ಬಸವೇಶ್ವರ ಧರ್ಮಸಂಸ್ಥೆ ಶಿವಕುಮಾರ್ ಉಪಸ್ಥಿತರಿರುವರು. ಮಾನವತೆಯ ಮಹಾಯಾನಿ ಬಸವಣ್ಣ ವಿಷಯ ಕುರಿತು ವಿಶ್ರಾಂತ ಪ್ರಾಧ್ಯಾಪಕ ಡಾ. ಗುರುಪಾದ ಎಸ್. ಮರಿಗುದ್ದಿ ಉಪನ್ಯಾಸ ನೀಡಲಿದ್ದು, ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾ ಡಾ. ಬಿ.ಜಿ ಧನಂಜಯ ಅಭಿನಂದನಾ ನುಡಿಗಳನ್ನಾಡಲಿದ್ದಾರೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಡಾ. ಬಿ.ಜಿ ಧನಂಜಯ, ಎಚ್.ಎನ್ ಮಹಾರುದ್ರ, ಬಾರಂದರೂ ಪ್ರಕಾಶ್, ನಂದಿನಿ, ಮಲ್ಲಿಕಾರ್ಜುನ್, ಎಂ. ವಿರುಪಾಕ್ಷಪ್ಪ, ಅರಳಿಹಳ್ಳಿ ಅಣ್ಣಪ್ಪ, ಮಲ್ಲಿಕಾಂಬ ವಿರುಪಾಕ್ಷಪ್ಪ, ರಾಜಶೇಖರ್, ಸದಾಶಿವಪ್ಪ, ಚಿಗಟೇರಪ್ಪ, ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾವತಿ ೩೯ ಗ್ರಾಮ ಪಂಚಾಯಿತಿಗೆ ೨ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ

    ಭದ್ರಾವತಿ, ಜೂ. ೨೨ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ತಾಲೂಕಿನ ೩೯ ಗ್ರಾಮ ಪಂಚಾಯಿತಿಗಳ ೩೦ ತಿಂಗಳ ೨ನೇ ಅವಧಿಗೆ  ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿಪಡಿಸಲಾಗಿದೆ.
    ನಗರದ ಚನ್ನಗಿರಿ ರಸ್ತೆಯ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಆಯೋಜಿಸಲಾಗಿದ್ದ ಮೀಸಲಾತಿ ನಿಗದಿ ಸಭೆಯಲ್ಲಿ ತಾಲೂಕಿನ ೩೯ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣಾ ಆಯೋಗ ರೂಪಿಸಿರುವ ತಂತ್ರಾಂಶ ಹಾಗು ಲಾಟರಿ ಪ್ರಕ್ರಿಯೆ ಬಳಸಿ ಮೀಸಲಾತಿ ನಿಗದಿಪಡಿಸಲಾಗಿದೆ.
    ೧. ಸೈದರಕಲ್ಲಹಳ್ಳಿ ಅಧ್ಯಕ್ಷ-ಪರಿಶಿಷ್ಟ ಜಾತಿ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ ೨. ನಿಂಬೆಗೊಂದಿ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ ೩. ಆನವೇರಿ ಅಧ್ಯಕ್ಷ-ಸಾಮಾನ್ಯ. ಉಪಾಧ್ಯಕ್ಷ-ಸಾಮಾನ್ಯ ಮಹಿಳೆ ೪. ಗುಡುಮಘಟ್ಟ ಅಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ ೫. ಮಂಗೋಟೆ ಅಧ್ಯಕ್ಷ-ಹಿಂದುಳಿದ ವರ್ಗ(ಎ), ಉಪಾಧ್ಯಕ್ಷ-ಸಾಮಾನ್ಯ ಮಹಿಳೆ ೬. ಸಿದ್ಲಿಪುರ ಅಧ್ಯಕ್ಷ-ಪರಿಶಿಷ್ಟ ಜಾತಿ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ ೭. ಸನ್ಯಾಸಿಕೊಡಮಗ್ಗೆ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಪರಿಶಿಷ್ಟ ಜಾತಿ ೮. ಅಗರದಹಳ್ಳಿ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ೯. ಯಡೇಹಳ್ಳಿ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ೧೦. ಅರಹತೊಳಲು ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ೧೧. ಹನುಮಂತಾಪುರ ಅಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ, ಉಪಾಧ್ಯಕ್ಷ-ಪರಿಶಿಷ್ಟ ಜಾತಿ ೧೨. ಕಲ್ಲಿಹಾಳ್ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ೧೩. ದಾಸರಕಲ್ಲಹಳ್ಳಿ ಅಧ್ಯಕ್ಷ-ಪರಿಶಿಷ್ಟ ಪಂಗಡ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಬಿ) ಮಹಿಳೆ ೧೪. ಮಾರಶೆಟ್ಟಿಹಳ್ಳಿ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ ೧೫. ಅರಕೆರೆ ಅಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ -ಹಿಂದುಳಿದ ವರ್ಗ(ಎ) ೧೬. ಅರಬಿಳಚಿ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ೧೭. ನಾಗತಿಬೆಳಗಲು ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ -ಸಾಮಾನ್ಯ ಮಹಿಳೆ ೧೮. ಕೂಡ್ಲಿಗೆರೆ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ ೧೯. ಅತ್ತಿಗುಂದ ಅಧ್ಯಕ್ಷ-ಹಿಂದುಳಿದ ವರ್ಗ(ಎ), ಉಪಾಧ್ಯಕ್ಷ-ಸಾಮಾನ್ಯ ಮಹಿಳೆ ೨೦. ಕೊಮಾರನಹಳ್ಳಿ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ ೨೧. ತಡಸ ಅಧ್ಯಕ್ಷ-ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಹಿಂದುಳಿದ ವರ್ಗ(ಎ) ಮಹಿಳೆ ೨೨. ದೊಣಬಘಟ್ಟ ಅಧ್ಯಕ್ಷ-ಹಿಂದುಳಿದ ವರ್ಗ(ಬಿ) ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ ೨೩. ಬಿಳಿಕಿ ಅಧ್ಯಕ್ಷ-ಹಿಂದುಳಿದ ವರ್ಗ(ಎ), ಉಪಾಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ ೨೪. ಕಾಗೆಕೊಡಮಗ್ಗಿ ಅಧ್ಯಕ್ಷ-ಹಿಂದುಳಿದ ವರ್ಗ(ಬಿ), ಉಪಾಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ ೨೫. ಅರಳಿಹಳ್ಳಿ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಪರಿಶಿಷ್ಟ ಪಂಗಡ(ಮಹಿಳೆ) ೨೬. ವೀರಾಪುರ ಅಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ೨೭. ಕಲ್ಲಹಳ್ಳಿ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ, ೨೮. ಅಂತರಗಂಗೆ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ ೨೯. ದೊಡ್ಡೇರಿ ಅಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ೩೦. ಯರೇಹಳ್ಳಿ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಎ) ೩೧. ಮಾವಿನಕೆರೆ ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ ೩೨. ಬಾರಂದೂರು ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಬಿ) ೩೩. ಕಂಬದಾಳ್ ಹೊಸೂರು ಅಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ(ಎ) ೩೪. ಕಾರೆಹಳ್ಳಿ ಅಧ್ಯಕ್ಷ-ಹಿಂದುಳಿದ ವರ್ಗ(ಎ), ಉಪಾಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ ೩೫. ಅರಳಿಕೊಪ್ಪ ಅಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ೩೬. ಸಿಂಗನಮನೆ ಅಧ್ಯಕ್ಷ-ಹಿಂದುಳಿದ ವರ್ಗ(ಎ) ಮಹಿಳೆ, ಉಪಾಧ್ಯಕ್ಷ-ಪರಿಶಿಷ್ಟ ಜಾತಿ ೩೭. ಹಿರಿಯೂರು ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ ೩೮. ಮೈದೊಳಲು ಅಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ(ಎ) ಮತ್ತು ೩೯. ತಾವರಘಟ್ಟ ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ ಮೀಸಲಾಗಿ ನಿಗದಿಪಡಿಸಲಾಗಿದೆ.
    ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಸ್ ಬಿರಾದಾರ್ ನಡೆಸಿಕೊಟ್ಟರು. ಆರಂಭದಲ್ಲಿ ಮೀಸಲಾತಿ ನಿಗದಿ ಸಂಬಂಧ ಚುನಾವಣಾ ಆಯೋಗ ನಿಗದಿಪಡಿಸಿರುವ ತಂತ್ರಾಂಶ ಕುರಿತು ಗ್ರಾಮ ಪಂಚಾಯಿತಿ ಸದಸ್ಯರಿಗೆ ಮಾಹಿತಿ ನೀಡಿದರು. ೩೯ ಗ್ರಾಮ ಪಂಚಾಯಿತಿಗಳ ಪೈಕಿ ತಂತ್ರಾಂಶಕ್ಕೆ ಒಳಪಡದ ೨ ಗ್ರಾಮ ಪಂಚಾಯಿತಿಗಳಿಗೆ ಲಾಟರಿ ಮೂಲಕ ಮೀಸಲಾತಿ ನಿಗದಿಪಡಿಸಲಾಯಿತು.  
    ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ, ತಹಸೀಲ್ದಾರ್ ಸುರೇಶ್ ಆಚಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.