Thursday, July 13, 2023

ಆ.೧೨, ೧೩ ರಂದು ಮೈಸೂರಿನಲ್ಲಿ ರಾಜ್ಯ ವಕೀಲರ ಸಮ್ಮೇಳನ

ಕರ್ನಾಟಕ ರಾಜ್ಯ ವಕೀಲರ ಪರಿಷತ್ ರಾಜ್ಯಾಧ್ಯಕ್ಷ ಎಚ್.ಎಲ್‌ ವಿಶಾಲ್‌ ರಘು ಗುರುವಾರ ಭದ್ರಾವತಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.
    ಭದ್ರಾವತಿ, ಜು. ೧೩: ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಆ. 12 ಮತ್ತು 13 ಎರಡು ದಿನಗಳ 10 ನೇ ರಾಜ್ಯ ವಕೀಲರ ಸಮ್ಮೇಳ ಆಯೋಜಿಸಲಾಗಿದೆ ಎಂದು ಪರಿಷತ್ ರಾಜ್ಯಾಧ್ಯಕ್ಷ ಎಚ್.ಎಲ್. ವಿಶಾಲ್ ರಘು ಹೇಳಿದರು.
    ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಸುಮಾರು 14 ವರ್ಷಗಳ ನಂತರ ಸಾಂಸ್ಕೃತಿಕ ನಗರ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಸಮ್ಮೇಳನ ನಡೆಸಲಾಗುತ್ತಿದೆ.  ಸಮ್ಮೇಳನದಲ್ಲಿ ರಾಜ್ಯದ ವಿವಿಧೆಡೆಗಳಿಂದ ಸುಮಾರು 10 ರಿಂದ 12
ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
    ಸಮ್ಮೇಳನದ ಪ್ರತಿನಿಧಿ ಶುಲ್ಕ ರು. 1000 ನಿಗದಿಪಡಿಸಲಾಗಿದೆ. ಭಾಗವಹಿಸಿದವರಿಗೆ ನೆನೆಪಿನ ಕಾಣಿಕೆ ನೀಡಲಾಗುವುದು. ಸಮ್ಮೇಳನದ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚಿಸಿದ್ದು,  ಭಾಗವಹಿಸುವವರು ಜು. 25 ರೊಳಗೆ ನೊಂದಾಯಿಸಿಕೊಳ್ಳಬೇಕು. ನಂತರ ಬರುವವರು ಅಧ್ಯಕ್ಷರು, ಕಾರ್ಯದರ್ಶಿಗಳ ಗುರುತು ಪತ್ರದೊಂದಿಗೆ ಭಾಗವಹಿಸಬಹುದಾಗಿದೆ. ಸಮ್ಮೇಳನದಲ್ಲಿ ವಕೀಲರು ಎದುರಿಸುತ್ತಿರುವ ಸಂಕಷ್ಟ ಸವಾಲುಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
    ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ಬೋಪಣ್ಣ, ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಲೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ,  ಹಾಗು ಕಾನೂನು ಸಚಿವರು  ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭ
ದಲ್ಲಿ ಮುಖ್ಯ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಭಾಗವಹಿಸಿ ಮಹಿಳೆಯರ ಹಕ್ಕುಗಳು ಮತ್ತು ಸವಾಲುಗಳ ಬಗ್ಗೆ ಮಾತನಾಡಲಿದ್ದಾರೆ ಎಂದರು.
    ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಎಲ್. ಶ್ರೀನಿವಾಸ್ ಬಾಬು, ಜಿಲ್ಲಾಧ್ಯಕ್ಷ ಬಿ.ಜಿ ಶಿವಮೂರ್ತಿ, ತಾಲ್ಲೂಕು ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಕಾರ್ಯದರ್ಶಿ ವಿ. ಉದಯ ಕುಮಾರ್,  ಕಾರ್ಯಕಾರಿ ಸಮಿತಿ ಸದಸ್ಯರಾದ  ಮಗೇಶ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಾಲಬಾಧೆಯಿಂದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಭದ್ರಾವತಿಯಲ್ಲಿ ಸಾಲಬಾಧೆಯಿಂದ ಮಧು-ಮೋನಿಕಾ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
    ಭದ್ರಾವತಿ, ಜು. ೧೩ : ಸಾಲಬಾಧೆಯಿಂದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
    ಮಧು(೨೭) ಮತ್ತು ಮೋನಿಕಾ(೨೧) ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಗಾರೆ ಕೆಲಸ ಮಾಡಿಕೊಂಡಿಕೊಂಡು ಜೀವನ ನಿರ್ವಹಿಸುತ್ತಿದ್ದರು. ಬೈತುಂಬ ಸಾಲ ಮಾಡಿಕೊಂಡಿದ್ದು, ಸಾಲಬಾಧೆ ಹೆಚ್ಚಾದ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
    ಇಬ್ಬರು ಮನೆಯಿಂದ ಹೊರಬಾರದ ಹಿನ್ನಲೆಯಲ್ಲಿ ಅಕ್ಕಪಕ್ಕದ ನಿವಾಸಿಗಳಿಗೆ ಅನುಮಾನ ಬಂದಿದ್ದು, ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ನ್ಯೂಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜು.೧೪ರಂದು ಪದಗ್ರಹಣ ಸಮಾರಂಭ

    ಭದ್ರಾವತಿ, ಜು. ೧೩ : ಲಯನ್ಸ್ಅಂತರಾಷ್ಟ್ರೀಯ ಸಂಸ್ಥೆ, ಲಯನ್ಸ್ಕ್ಲಬ್ಸುಗರ್ಟೌನ್ನೂತನ ಪದಾಧಿಕಾರಿಗಳ ಪದಗ್ರಹಣ ಜು.೧೪ರಂದು ಸಂಜೆ ಗಂಟೆಗೆ ನ್ಯೂಟೌನ್ಜೆಟಿಎಸ್ಶಾಲೆ ಸಮೀಪದಲ್ಲಿರುವ ಲಯನ್ಸ್ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ನಡೆಯಲಿದೆ.

          ಲಯನ್ಸ್ಎಂಜೆಎಫ್ರಾಜೀವ್ಕೋಟ್ಯಾನ್ಪದಗ್ರಹಣ ಬೋಧಿಸಲಿದ್ದು, ಆರ್.‌ ಮದಿಯಲಗನ್ಅಧ್ಯಕ್ಷತೆ ವಹಿಸಲಿದ್ದಾರೆ. ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಟಿ. ಶ್ರೀನಿವಾಸ್, ಕಾರ್ಯದರ್ಶಿಯಾಗಿ ಮಂಜುನಾಥ್ಹಾಗು ಖಜಾಂಚಿಯಾಗಿ ಎಚ್.ಡಿ ಕೃಷ್ಣ ಪದಗ್ರಹಣ ಸ್ವೀಕರಿಸಲಿದ್ದಾರೆ.