Friday, July 14, 2023

ಎ.ಸಿ ಸದಾನಂದ ನಿಧನ

ಎ.ಸಿ ಸದಾನಂದ
    ಭದ್ರಾವತಿ:  ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿ ಎ.ಸಿ ಸದಾನಂದ(೫೫) ಶುಕ್ರವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಪುತ್ರರು ಇದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಂತ್ಯಕ್ರಿಯೆ ಶನಿವಾರ ಗ್ರಾಮದಲ್ಲಿರುವ ಇವರ ತೋಟದಲ್ಲಿ ನೆರವೇರಲಿದೆ. ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.

ಸಾಧು ವೀರಶೈವ ಸಮಾಜದ ಅಧ್ಯಕ್ಷರಾಗಿ ಕೆ.ಜಿ ರವಿಕುಮಾರ್‌

ಸಿರೆಗೆರೆ ಶ್ರೀ ತರಳಬಾಳು ನ್ಯಾಯಪೀಠದಲ್ಲಿ ನಡೆದ ಆಯ್ಕೆ ಸಭೆಯಲ್ಲಿ ರೈತ ಮುಖಂಡ ಎಚ್.ಆರ್‌ ಬಸವರಾಜಪ್ಪ ಭದ್ರಾವತಿ ತಾಲೂಕಿನ ಸಾಧು ವೀರಶೈವ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಆದೇಶ ಪತ್ರ ನೂತನ ಅಧ್ಯಕ್ಷ ಕೆ.ಜಿ ರವಿಕುಮಾರ್‌ಗೆ ವಿತರಿಸಿದರು.
    ಭದ್ರಾವತಿ, ಜು. ೧೪ : ತಾಲೂಕಿನ ಸಾಧು ವೀರಶೈವ ಸಮಾಜದ ಅಧ್ಯಕ್ಷರಾಗಿ ಕಡದಕಟ್ಟೆ ಕೆ.ಜಿ ರವಿಕುಮಾರ್‌ ಆಯ್ಕೆಯಾಗಿದ್ದಾರೆ.
    ಉಪಾಧ್ಯಕ್ಷರಾಗಿ ಪರಮೇಶ್ವರಪ್ಪ, ಕಾರ್ಯದರ್ಶಿಯಾಗಿ ಸಿ.ಎಸ್‌ ಭರಣೇಶ್‌, ಸಹ ಕಾರ್ಯದರ್ಶಿಯಾಗಿ ಬಿ.ಎಸ್‌ ಪರಮೇಶ್ವರಪ್ಪ, ಖಜಾಂಚಿಯಾಗಿ ನವೀನ್‌, ಸದಸ್ಯರಾಗಿ ಎಚ್.ಇ ಮಲ್ಲಿಕಾರ್ಜುನ್‌, ವಸಂತಕುಮಾರ್‌, ನಾಗರಾಜ, ಮಮತ ನರೇಂದ್ರ, ಕೆ.ಜಿ ಮಹೇಶ್ವರಪ್ಪ, ಡಿ.ಬಿ ದಿನೇಶ್‌, ಆಶಾರಾಣಿ ನಟರಾಜ್‌, ಸಿ.ವಿ ಮಹದೇವಪ್ಪ, ಎ.ಎಸ್‌ ರವಿಕುಮಾರ್‌, ತೇಜಸ್ವಿನಿ ರವಿಕುಮಾರ್‌, ಕೆ.ಎಚ್‌ ರಾಜ್‌ಕುಮಾರ್‌, ಸತೀಶ್‌ಗೌಡ, ಮಂಜುಳ ರಂಗಪ್ಪ, ಎಚ್. ರುದ್ರಪ್ಪ, ಶಿವಕುಮಾರ್‌ ಗಂಗಮ್ಮ ಮಲ್ಲೇಶಪ್ಪ ಅವರನ್ನು ಆಯ್ಕೆ ಮಾಡಿ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ.
    ಸಿರೆಗೆರೆ ಶ್ರೀ ತರಳಬಾಳು ನ್ಯಾಯಪೀಠದಲ್ಲಿ ನಡೆದ ಆಯ್ಕೆ ಸಭೆಯಲ್ಲಿ ರೈತ ಮುಖಂಡ ಎಚ್.ಆರ್‌ ಬಸವರಾಜಪ್ಪ ನೂತನ ಪದಾಧಿಕಾರಿಗಳ ಆಯ್ಕೆ ಆದೇಶ ಪತ್ರ ನೂತನ ಅಧ್ಯಕ್ಷ ಕೆ.ಜಿ ರವಿಕುಮಾರ್‌ಗೆ ವಿತರಿಸಿದರು.


ನಗರಸಭೆಯಿಂದ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಚಾಲನೆ

ಭದ್ರಾವತಿ  ನಗರಸಭೆ ವ್ಯಾಪ್ತಿಯಲ್ಲಿ ಪುನಃ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಶುಕ್ರವಾರ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಚಾಲನೆ ನೀಡಲಾಯಿತು.
    ಭದ್ರಾವತಿ, ಜು. ೧೪ : ನಗರಸಭೆ ವ್ಯಾಪ್ತಿಯಲ್ಲಿ ಪುನಃ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಶುಕ್ರವಾರ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಚಾಲನೆ ನೀಡಲಾಯಿತು.
    ೩೫ ವಾರ್ಡ್‌ಗಳನ್ನು  ಹೊಂದಿರುವ ನಗರಸಭೆಯ ಬಹುತೇಕ ವಾರ್ಡ್‌ಗಳಲ್ಲಿ  ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ನಾಯಿಗಳನ್ನು ನಿಯಂತ್ರಿಸಲು ನಗರಸಭೆ ಸಾಕಷ್ಟು ಶ್ರಮಿಸುತ್ತಿದೆ. ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಮೊರೆ ಹೋಗಿದ್ದು, ಪ್ರತಿ ವರ್ಷ ಸಂತಾನಹರಣ ಚಿಕಿತ್ಸೆ ನಡೆಸಲಾಗುತ್ತಿದೆ. ಆದರೂ ಸಹ ಬೀದಿ ನಾಯಿಗಳ ನಿಯಂತ್ರಣ ಸಾಧ್ಯವಾಗುತ್ತಿಲ್ಲ.
    ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೫ ಸಾವಿರ ಬೀದಿಗಳಿದ್ದು, ಈ ಪೈಕಿ ಕಳೆದ ವರ್ಷ ಸುಮಾರು ೧ ಸಾವಿರ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಲಾಗಿತ್ತು. ಈ ಬಾರಿ ಸುಮಾರು ೧,೫೦೦ ಬೀದಿನಾಯಿಗಳಿಗೆ  ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲು ಗುರಿ ಹೊಂದಲಾಗಿದೆ.
    ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲು ಗುತ್ತಿಗೆ ನೀಡಲಾಗಿದ್ದು, ಓರ್ವ ವೈದ್ಯರು ಪ್ರತಿ ದಿನ ಸುಮಾರು ೨೦ ರಿಂದ ೨೫ ಬೀದಿ ನಾಯಿಗಳಿಗೆ ಶಸ್ತ್ರಚಿಕಿತ್ಸೆ ಕೈಗೊಳ್ಳುತ್ತಿದ್ದಾರೆ. ಸುಮಾರು ೩ ತಿಂಗಳವರೆಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಯಲಿದೆ.
    ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್‌, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಪರಿಸರ ಅಭಿಯಂತರ ಪ್ರಭಾಕರ್‌, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.