Sunday, August 6, 2023

ಪುರಸಭೆ ಮಾಜಿ ಸದಸ್ಯ ಟಿ.ವಿ ಗೋವಿಂದಸ್ವಾಮಿ ನಿಧನ

ಟಿ.ವಿ ಗೋವಿಂದಸ್ವಾಮಿ
    ಭದ್ರಾವತಿ, ಆ. 6 : ಹಳೇನಗರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ ರಥ ಬೀದಿ ರಸ್ತೆ ನಿವಾಸಿ, ಪುರಸಭೆ ಮಾಜಿ ಸದಸ್ಯ ಟಿ.ವಿ ಗೋವಿಂದಸ್ವಾಮಿ(70) ಭಾನುವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಪುತ್ರಿ ಹಾಗು ಇಬ್ಬರು ಪುತ್ರರು ಇದ್ದಾರೆ. ಗೋವಿಂದಸ್ವಾಮಿ ಬೆಂಗಳೂರಿನಲ್ಲಿ ನಿಧನ ಹೊಂದಿದ್ದು, ಸೋಮವಾರ ಇವರ ಅಂತ್ಯಕ್ರಿಯೆ ನಡೆಯಲಿದೆ.
    ಗೋವಿಂದಸ್ವಾಮಿ ಹಿರಿಯ ಕಾಂಗ್ರೆಸ್‌ ಮುಖಂಡರಾಗಿದ್ದು, 2 ಬಾರಿ ಪುರಸಭೆ ಸದಸ್ಯರಾಗಿ, ಒಂದು ಬಾರಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಬಲಿಜ ಸಮಾಜದ ಮುಖಂಡರಾಗಿ ಸಹ ಗುರುತಿಸಿಕೊಂಡಿದ್ದರು.
    ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್‌, ಕಾಂಗ್ರೆಸ್‌ ಪಕ್ಷದ ಮುಖಂಡರು, ಜಲಿಜ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ಪಾರ್ವತಿ ಇಂಜಿನಿಯರಿಂಗ್‌ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

ಕಾಂಗ್ರೆಸ್‌ ಪಕ್ಷದಿಂದ ಸನ್ಮಾನ, ಅಭಿನಂದನೆ

ಭದ್ರಾವತಿ ಜನ್ನಾಪುರ ನಿವಾಸಿ ಜ್ಯೋತಿ ಎಸ್ ಸಾಲೇರ-ಐಶ್ವರ್ಯ ದಂಪತಿ ಪುತ್ರಿ  ಪಾರ್ವತಿ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಭದ್ರಾವತಿಗೆ ಕೀರ್ತಿ ತಂದಿದ್ದು, ಇವರನ್ನು ಭಾನುವಾರ ಕಾಂಗ್ರೆಸ್‌ ಪಕ್ಷದ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಆ. ೬: ಜನ್ನಾಪುರ ನಿವಾಸಿ ಜ್ಯೋತಿ ಎಸ್ ಸಾಲೇರ-ಐಶ್ವರ್ಯ ದಂಪತಿ ಪುತ್ರಿ  ಪಾರ್ವತಿ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಭದ್ರಾವತಿಗೆ ಕೀರ್ತಿ ತಂದಿದ್ದು, ಇವರನ್ನು ಭಾನುವಾರ ಕಾಂಗ್ರೆಸ್‌ ಪಕ್ಷದ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
    ಬ್ಲಾಕ್‌ ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್‌ ನೇತೃತ್ವದಲ್ಲಿ ಪಾರ್ವತಿಯವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಂತೋನಿ ವಿಲ್ಸನ್, ಮುಖಂಡರಾದ ದೇವು, ನಾಗರಾಜ್‌, ಸೈಯದ್‌  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ವಿಶೇಷ ಎಂದರೆ ಪಾರ್ವತಿಯವರು ಕ್ಷೇತ್ರದ ಮಾಜಿ ಶಾಸಕ ದಿವಂಗತ ಸಾಲೇರ ಸಿದ್ದಪ್ಪನವರ ಮೊಮ್ಮಗಳು. ಇವರಿಗೆ ವಿವಿಧ ಸಂಘ-ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗಣ್ಯರು ಅಭಿನಂದಿಸಿದ್ದಾರೆ.