Thursday, August 24, 2023

ಚಂದ್ರಯಾನ-೩ ಯಶಸ್ವಿ : ಬಿಜೆಪಿ ಸಂಭ್ರಮಾಚರಣೆ

ಚಂದ್ರಯಾನ -3  ಯಶಸ್ವಿಯಾದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷ ಭದ್ರಾವತಿ ತಾಲೂಕು ಮಂಡಲ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.
ಭದ್ರಾವತಿ, ಆ. ೨೪ :  ಚಂದ್ರಯಾನ -3  ಯಶಸ್ವಿಯಾದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.
  ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಗರದ ರಂಗಪ್ಪವೃತ್ತದಿಂದ ತಿರಂಗಾ ಯಾತ್ರೆ ಮೂಲಕ ಅಂಬೇಡ್ಕರ್ ವೃತ್ತದ ವರೆಗೆ ಪಕ್ಷದ ಕಾರ್ಯಕರ್ತರು ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ದೇಶದ ಹೆಮ್ಮೆಯ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಪ್ರಶಂಸಿಸಿದರು.
    ಚಂದಿರನ ದಕ್ಷಿಣ ಧ್ರುವದ ಮಾಹಿತಿಗಾಗಿ ಪ್ರಪಂಚದ ಎಲ್ಲಾ ದೇಶಗಳು ಭಾರತವನ್ನೇ ಅವಲಂಬನೆ ಯಾಗುವ ರೀತಿ ಸಾಧನೆಗೈದ ನಮ್ಮ ವಿಜ್ಞಾನಿಗಳ ಕಾರ್ಯ ಅಭಿನಂದನಾರ್ಹ ಎಂದರು.  ಸಿಹಿ ಹಂಚಲಾಯಿತು.

ಚಂದ್ರಯಾನ-೩ ಯಶಸ್ವಿ : ನೋಟು ಮೂಲಕ ಇಸ್ರೋ ಸಾಧನಗೆ ಅಭಿನಂದನೆ

ಚಂದ್ರಯಾನ-೦೩
ಭದ್ರಾವತಿ, ಆ. ೨೪:  ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ  ಸಂಗ್ರಹಗಾರ ಗಣೇಶ್‌ರವರು ಚಂದ್ರಯಾನ-೦೩ ಯಶಸ್ವಿಯಾದ ಹಿನ್ನಲೆಯಲ್ಲಿ ಇಸ್ರೋ ಸಾಧನೆಯನ್ನು ನೋಟು  ಸಮರ್ಪಿಸಿ ಅಭಿನಂದಿಸಿದ್ದಾರೆ.
    ಐತಿಹಾಸಿಕ ಸಾಧನೆಯ ದಿನಾಂಕ ಹೊಂದಿರುವ ರು.೧೦ ಮುಖ ಬೆಲೆಯ ನೋಟು ಸಮರ್ಪಿಸಿದ್ದಾರೆ.  

ಐತಿಹಾಸಿಕ ಸಾಧನೆಯ ದಿನಾಂಕ ಹೊಂದಿರುವ ನೋಟು.
ರಾಜಕಾರಣಿಗಳು, ಮಠಾಧೀಶರು, ಚಲನಚಿತ್ರ ನಟರು, ಸಾಹಿತಿಗಳು, ಕವಿ, ಕ್ರೀಡಾಪಟು ಸೇರಿದಂತೆ ಗಣ್ಯ ವ್ಯಕ್ತಿಗಳಿಗೆ ಸಭೆ ಸಮಾರಂಭಗಳಲ್ಲಿ ಅವರ ಜನ್ಮದಿನಾಂಕ ಹೊಂದಿರುವ ನೋಟು ಉಡುಗೊರೆಯಾಗಿ ನೀಡುವ ಮೂಲಕ ಶುಭ ಹಾರೈಸುವ ಹಾಗು ನಿಧನರಾದ ಸಂದರ್ಭದಲ್ಲಿ ಮರಣ ದಿನಾಂಕ ಹೊಂದಿರುವ ನೋಟಿನ ಮೂಲಕ ಸಂತಾಪ ಸೂಚಿಸುವ ಹವ್ಯಾಸ ಬೆಳೆಸಿಕೊಂಡು ಬಂದಿದ್ದಾರೆ.


ಹಿರಿಯ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ  ಸಂಗ್ರಹಗಾರ ಗಣೇಶ್‌