Wednesday, August 30, 2023

ಶ್ರೀ ಕೃಷ್ಣ ವೇಷ ಪ್ರದರ್ಶನ : 200ಕ್ಕೂ ಹೆಚ್ಚು ಮಕ್ಕಳು

ಭದ್ರಾವತಿಯಲ್ಲಿ ತರುಣಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ವೇಷ ಪ್ರದರ್ಶನ ಮಂಗಳವಾರ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
    ಭದ್ರಾವತಿ : ತರುಣಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ವೇಷ ಪ್ರದರ್ಶನ ಮಂಗಳವಾರ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎಸ್ ರಾಜೇಶ್ ಪ್ರದರ್ಶನಕ್ಕೆ ಚಾಲನೆ ನೀಡಿದರು. ತರುಣ ಭಾರತಿ ವಿದ್ಯಾ ಕೇಂದ್ರದ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು.
    ನಗರದ 35 ಶಾಲೆಗಳ 5 ವರ್ಷದೊಳಗಿನ ಸುಮಾರು 200ಕ್ಕೂ ಹೆಚ್ಚು ಮಕ್ಕಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು. ಭಾಗವಹಿಸಿದ್ದ ಎಲ್ಲಾ ಮಕ್ಕಳಿಗೂ ಬಹುಮಾನ ಹಾಗು ಸಿಹಿ ವಿತರಿಸಲಾಯಿತು.
    ಲಯನ್ಸ್ ಕ್ಲಬ್ ಖಜಾಂಚಿ ಎನ್. ಶ್ರೀನಿವಾಸ್, ತರುಣ ಭಾರತಿ ವಿದ್ಯಾ ಕೇಂದ್ರದ ಕಾರ್ಯದರ್ಶಿ ಗಿರೀಶ್, ತರುಣ ಭಾರತಿ ವಿಶ್ವಸ್ಥ ಮಂಡಳಿ ಪ್ರಮುಖರಾದ ಡಾ. ಡಾ. ಮಹಾಬಲೇಶ್ವರ, ಮಧುಕರ್ ಕಾನಿಟ್ಕರ್, ಎಸ್.ಎನ್ ಸುಭಾಷ್, ನಂದಿನಿ ಮಲ್ಲಿಕಾರ್ಜುನ, ಶಿಶುಮಂದಿರದ ಸಂಚಾಲಕಿ ಸರ್ವಮಂಗಳ, ಸುಜಾತ, ಸವಿತಾ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ಪೋಷಕರು ಪಾಲ್ಗೊಂಡಿದ್ದರು.

ʻಗೃಹ ಲಕ್ಷ್ಮೀʼ ಯೋಜನೆ ನೇರ ಸಂವಾದ ಯಶಸ್ವಿ

ನಗರಸಭೆಯಿಂದ ೯ ಸ್ಥಳಗಳಲ್ಲಿ ವ್ಯವಸ್ಥೆ

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ೨,೦೦೦ ರು. ನೀಡುವ ಮಹತ್ವಾಕಾಂಕ್ಷೆ  ʻಗೃಹ ಲಕ್ಷ್ಮೀ ʼ ಯೋಜನೆಗೆ ಬುಧವಾರ ಕಾಂಗ್ರೆಸ್‌ ಯುವ ನಾಯಕ ರಾಹುಲ್‌ ಗಾಂಧಿ ಅವರು ಮೈಸೂರಿನಲ್ಲಿ ಚಾಲನೆ ನೀಡಿದ್ದು, ಈ ಸಂಬಂಧ ಭದ್ರಾವತಿ ನಗರದ ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇರ  ಸಂವಾದ ಕಾರ್ಯಕ್ರಮ ನಗರಸಭೆ ಮಾಜಿ ಅಧ್ಯಕ್ಷ  ಬಿ.ಕೆ ಮೋಹನ್‌ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ಆ. ೩೦ :  ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ೨,೦೦೦ ರು. ನೀಡುವ ಮಹತ್ವಾಕಾಂಕ್ಷೆ  ʻಗೃಹ ಲಕ್ಷ್ಮೀ ʼ ಯೋಜನೆಗೆ ಬುಧವಾರ ಕಾಂಗ್ರೆಸ್‌ ಯುವ ನಾಯಕ ರಾಹುಲ್‌ ಗಾಂಧಿ ಅವರು ಮೈಸೂರಿನಲ್ಲಿ ಚಾಲನೆ ನೀಡಿದ್ದು, ಈ ಸಂಬಂಧ ನಗರದ ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇರ  ಸಂವಾದ ಕಾರ್ಯಕ್ರಮ ನಗರಸಭೆ ಮಾಜಿ ಅಧ್ಯಕ್ಷ  ಬಿ.ಕೆ ಮೋಹನ್‌ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ನಗರಸಭೆ ವತಿಯಿಂದ ನಗರ ವ್ಯಾಪ್ತಿಯಲ್ಲಿ ಒಟ್ಟು ೯ ಸ್ಥಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವ್ಯವಸ್ಥೆ ಕಲ್ಪಿಸಲಾಗಿತ್ತು.  ಆಯಾ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದರು.
    ಕಾರ್ಯಕ್ರಮದಲ್ಲಿ ʻಗೃಹಲಕ್ಷ್ಮೀʼ ಯೋಜನೆ ಫಲಾನುಭವಿಗಳು, ಮಹಿಳಾ ಸಂಘ-ಸಂಸ್ಥೆಗಳ ಪ್ರಮುಖರು, ಕಾಂಗ್ರೆಸ್‌ ಮಹಿಳಾ ಘಟಕದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
    ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇರ  ಸಂವಾದ ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ ನಾಗರಾಜಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್‌, ನಗರಸಭಾ ಸದಸ್ಯಾದ ಜಾರ್ಜ್‌, ಆರ್.‌ ಶ್ರೇಯಸ್‌, ಶಶಿಕಲಾ ಬಿ.ಎಸ್‌ ನಾರಾಯಣಪ್ಪ, ಅನುಪಮ ಚನ್ನೇಶ್‌, ಪೌರಾಯುಕ್ತ ಎಚ್.ಎಂ ಮನುಕುಮಾರ್‌, ಕಂದಾಯಾಧಿಕಾರಿ ರಾಜ್‌ಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ಎಸ್.‌ ಕುಮಾರ್‌  ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಐಎಸ್‌ಎಲ್‌ ನಿವೃತ್ತ ಉದ್ಯೋಗಿ ಮಂಜುನಾಥ್‌ ಯಲ್ಲೋಜಿ ನಿಧನ

ಮಂಜುನಾಥ್‌ ಯಲ್ಲೋಜಿ
    ಭದ್ರಾವತಿ, ಆ. ೩೦: ವಿಐಎಸ್‌ಎಲ್‌ ಕಾರ್ಖಾನೆ ನಿವೃತ್ತ ಉದ್ಯೋಗಿ, ಕಬಡ್ಡಿ ಕ್ರೀಡಾ ತರಬೇತಿದಾರ ಮಂಜುನಾಥ್‌ ಯಲ್ಲೋಜಿ(೬೬) ಮಂಗಳವಾರ ರಾತ್ರಿ ನಿಧನ ಹೊಂದಿದರು.
    ಇಬ್ಬರು ಗಂಡು ಇದ್ದಾರೆ. ವಿಐಎಸ್‌ಎಲ್‌ ಅತಿಥಿ ಗೃಹದಲ್ಲಿ ಪ್ರಭಾರ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಮಂಜುನಾಥ್‌ರವರು ಮೂಲತಃ ಕಬಡ್ಡಿ ಕ್ರೀಡಾಪಟು ಆಗಿದ್ದು, ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಅಲ್ಲದೆ ತರಬೇತಿದಾರರಾಗಿ  ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶಕರಾಗಿದ್ದರು.
    ಇವರ ನಿಧನಕ್ಕೆ ವಿಐಎಸ್‌ಎಲ್‌ ಕಾರ್ಖಾನೆ  ಕಾರ್ಯಪಾಲಕ ನಿರ್ದೇಶಕ ಬಿ.ಎಲ್‌ ಚಂದ್ವಾನಿ, ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್.‌ ಪ್ರವೀಣ್‌ಕುಮಾರ್‌, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್‌,  ಅಧಿಕಾರಿಗಳು, ಕಾರ್ಮಿಕರು ಹಾಗು ಗುತ್ತಿಗೆ ಕಾರ್ಮಿಕರು ಮತ್ತು ನಿವೃತ್ತ ಕಾರ್ಮಿಕರು, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.