Monday, September 18, 2023

ಸಂಕ್ಲೀಪುರದಲ್ಲಿ ಕತ್ತು ಹಿಸುಕಿ ಮಹಿಳೆ ಕೊಲೆ

 


   ಭದ್ರಾವತಿ:  ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಮಹಿಳೆಯೋರ್ವಳು ಕೊಲೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. 

ಜೊತೆಗಿದ್ದವನೆ ಕುತ್ತಿಗೆ ಹಿಸುಕಿ ಹಾಗೂ ಹೊಟ್ಟೆಗೆ ಬಲವಾಗಿ ಒದ್ದು  ಕೊಲೆ ಮಾಡಿರುವುದು ಪೊಲೀಸರ ವಿಚಾರಣೆ ವೇಳೆ ತಿಳಿದು ಬಂದಿದೆ. .

  ತಾಲೂಕಿನ ಸಂಕ್ಲೀಪುರ ಗ್ರಾಮದಲ್ಲಿ ಎಂಪಿಎಂ ನೀಲಗಿರಿ ಮರ ಕಟಾವು ಕೆಲಸ ಮಾಡುತ್ತಿದ್ದ ರೂಪ(30) ಎಂಬಾಕೆ ಕೊಲೆಯಾಗಿರುವ ಮಹಿಳೆ

    ಈಕೆ ಸಿಂಗಾರಿ(35) ಎಂಬಾತನ ಜತೆ ಕಳೆದ ಎರಡು ವರ್ಷದಿಂದ ಜೊತೆಯಲ್ಲಿ ವಾಸವಾಗಿದ್ದು, ಈ ಇಬ್ವರು ನೀಲಿಗಿರಿ ಕಟಾವು ಕೆಲಸಕ್ಕೆ ಹೋಗುತ್ತಿದ್ದರು. ನಿನ್ನೆ ಸಂಜೆ ಮೇಸ್ತ್ರಿಯಿಂದ ಸಂಬಳವಾಗಿದ್ದು, ಇಬ್ಬರು ಮದ್ಯ ಸೇವಿಸಿ ಪರಸ್ಪರ ಗಲಾಟೆಗೆ ಬಿದ್ದಿದ್ದಾರೆ. ಗಲಾಟೆಯಿಂದಾಗಿ ಸಿಂಗಾರಿ ರೂಪಳ ಕುತ್ತಿಗೆ ಹಿಸುಕಿ ಹಾಗೂ ಕಾಲಿನಲ್ಲಿ ಒದ್ದು ಕೊಲೆ ಮಾಡಿರುವುದಾಗಿ ತಿಳಿದುಬಂದಿದ್ದು, ರೂಪ ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ನಿವಾಸಿ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸಿಂಗಾರಿಯನ್ನ ಬಂಧಿಸಲಾಗಿದೆ.


ಭದ್ರಾ ಜಲಾಶಯದಲ್ಲಿ ನೀರು ನಿಲ್ಲಿಸುವಂತೆ ಆಗ್ರಹಿಸಿ ಸೆ.19ರಂದು ಹೋರಾಟ 

 


ಭದ್ರಾವತಿ: ಭದ್ರಾ ಜಲಾಶಯದಿಂದ ನಾಲೆಗಳಿಗೆ ಹರಿಸುತ್ತಿರುವ ನೀರು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಶಾಖೆ ವತಿಯಿಂದ ಸೆ.19ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

   ಭದ್ರಾ ಕಾಡಾ ಸಭೆಯಲ್ಲಿ ನೀರು ಹರಿಸಲು ಆಫ್ ಅಂಡ್ ಆನ್ ಪದ್ದತಿ ಅನುಸರಿಸಲು ತೀರ್ಮಾನಿಸಲಾಗಿತ್ತು. ಈ ತೀರ್ಮಾನದ ಪ್ರಕಾರ ಸೆ. 16ರಂದು  ನೀರು ನಿಲ್ಲಿಸಬೇಕಾಗಿತ್ತು. ಆದರೆ ಇಲ್ಲಿಯವರೆಗೂ ನೀರು ನಿಲ್ಲಿಸಿಲ್ಲ. ಈಗ ನೀರು ನಿಲ್ಲಿಸದ್ದಿದ್ದಲ್ಲಿ ಬೇಸಿಗೆಯಲ್ಲಿ ಅಡಕೆ ತೋಟಗಳು ಒಣಗಿಹೋಗುತ್ತವೆ. ಈ ಹಿನ್ನೆಲೆಯಿಂದ ತಕ್ಷಣವೇ ನೀರು ಹರಿಸುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಬೆಳ್ಳಿಗ್ಗೆ 11-30ಕ್ಕೆ  ಮಿಲ್ಟ್ರಿಕ್ಯಾಂಪ್ ನೀರಾವರಿ ಎಕ್ಸಿಕ್ಯುಟಿವ್ ಇಂಜಿನಿಯರ್ ಕಛೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 

ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸುವಂತೆ ಕೋರಲಾಗಿದೆ.


ಶಾಂತಿ ಸಾಮಿಲ್ ಮಾಲೀಕ ರಾಮಣ್ಣ ನಿಧನ

 


ರಾಮಣ್ಣ

   ಭದ್ರಾವತಿ: ನಗರದ ಹೊಳೆಹೊನ್ನೂರು ರಸ್ತೆಯ ಶಾಂತಿ ಸಾಮಿಲ್ ಮಾಲೀಕರಾದ ಜಿ.ರಾಮಣ್ಣ(69) ಸೋಮವಾರ ನಿಧನ ಹೊಂದಿದರು.

   ಪತ್ನಿ, ಪುತ್ರಿ ಹಾಗು ಇಬ್ಬರು ಪುತ್ರರು ಇದ್ದಾರೆ. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

   ಇವರ ಅಂತ್ಯಸಂಸ್ಕಾರ ಮಂಗಳವಾರ ನಗರದ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ.

  ಇವರ ನಿಧನಕ್ಕೆ ತಮಿಳು ಸಮಾಜದ ಮುಖಂಡರು, ಗಣ್ಯರು, ಸಂತಾಪ ಸೂಚಿಸಿದ್ದಾರೆ.

 


ಅಲ್ ಖಸ್ವ ಟ್ರಸ್ಟ್ ಉದ್ಘಾಟನೆ

 


ಭದ್ರಾವತಿ ತಾಲೂಕಿನ ಹೊಳೆ ನೇರಲಕೆರೆ ಗ್ರಾಮದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಲ್ ಖಸ್ವ ಟ್ರಸ್ಟ್ ಶಾಸಕ ಬಿಕೆ ಸಂಗಮೇಶ್ವರ ಉದ್ಘಾಟಿಸಿದರು. ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.

   ಭದ್ರಾವತಿ: ತಾಲೂಕಿನ ಹೊಳೆ ನೇರಲಕೆರೆ ಗ್ರಾಮದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಲ್ ಖಸ್ವ ಟ್ರಸ್ಟ್ ಶಾಸಕ ಬಿಕೆ ಸಂಗಮೇಶ್ವರ ಉದ್ಘಾಟಿಸಿದರು. 

    ಉದ್ಘಾಟನೆ ಅಂಗವಾಗಿ ಮಕ್ಕಳಿಗೆ ನೋಟ್ ಬುಕ್ ಮತ್ತು ಪೆನ್ನು ವಿತರಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.

    ಟ್ರಸ್ಟ್ ಅಧ್ಯಕ್ಷ ಮಹಮದ್ ರಿಯಾಜ್, ಉಪಾಧ್ಯಕ್ಷ ಮಹಮದ್ ಪಸೀಉಲ್ಲಾ, ಕಾರ್ಯದರ್ಶಿ ಮಹಮದ್ ಇರ್ಫಾನ್ ಖದಂಜಿ, ಪೈರೋಜ್ ಖಾನ್, ಮಹಮದ್ ಸಲೀಂ, ಮಹಮದ್ ಸುಹೇಲ್, ಮುಜಾಮಿಲ್,  ಪೀರ್ ಸಾಬ್, ಮಹಮದ್ ಫಪಿ, ಮಹಮದ್ ಶಬೀರ್, ಹಯಾತ್ ಖಾನ್, ಸೈಯದ್ ಸಲಾಂ, ಸೈಯದ್ ಅಸ್ಲಾಂ, ಹಫೀಜ್ ಇಂತೆಜಾರ್, ಹಫೀಜ್ ಇಸಾಬ್, ಮಹಮದ್ ಸೈಪುಲ್ಲ, ಉಬೇದ್ ಉಲ್ಲಾ, ಅಯೂಬ್ ಖಾನ್,  ಸೈಯದ್ ಅಹಮದ್, ನಜೀರ್ ಸಾಬ್ ಯುವ ಮುಖಂಡ ಬಿ ಎಸ್ ಗಣೇಶ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.