ಭದ್ರಾವತಿ: ನಗರದ ಚನ್ನಗರಿ ರಸ್ತೆಯ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸರ್ವ ಸದಸ್ಯರ ಮಹಾಸಭೆ ಸೆ.25ರ ಬೆಳಿಗ್ಗೆ 11 ಗಂಟೆಗೆ ಶ್ರೀ ವೀರಶೈವ ಸಮುದಾಯ ಭವನದಲ್ಲಿ ನಡೆಯಲಿದೆ.
Thursday, September 21, 2023
ಸೆ.25ರಂದು ಸರ್ವ ಸದಸ್ಯರ ಮಹಾಸಭೆ
ಸೆ.23ರಂದು ಸರ್ವ ಸದಸ್ಯರ ಸಭೆ
ಭದ್ರಾವತಿ: ನಗರದ ಅಪ್ಪರ್ ಹುತ್ತಾ ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಸೆ.23ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ.
ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕರ ವರ್ಗಾವಣೆ ಖಂಡಿಸಿ 2 ದಿನಗಳಿಂದ ಪ್ರತಿಭಟನೆ
ಭದ್ರಾವತಿ: ತಾಲೂಕಿನ ಅರಳಿಹಳ್ಳಿ ಪ್ರೌಢ ಶಾಲೆ ಮುಖ್ಯಶಿಕ್ಷಕರ ವರ್ಗಾವಣೆ ವಿರೋಧಿಸಿ ಕಳೆದ ಎರಡು ದಿನಗಳಿಂದ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಶಾಲೆಯಲ್ಲಿ ಕಳೆದ ಸುಮಾರು ೮ ವರ್ಷದಿಂದ ಮೋತಿನಾಯ್ಕರವರು ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರನ್ನು ಲಕ್ಕವಳ್ಳಿ ಶಾಲೆಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಶಾಲೆಯ ಮುಂಭಾಗದಲ್ಲಿ ಪೋಷಕರು ಮತ್ತು ಮಕ್ಕಳು ಪ್ರತಿಭಟನೆ ಕೈಗೊಂಡಿದ್ದಾರೆ.
ಭದ್ರಾವತಿ ತಾಲೂಕಿನ ಅರಳಿಹಳ್ಳಿ ಪ್ರೌಢ ಶಾಲೆ ಮುಖ್ಯಶಿಕ್ಷಕರ ವರ್ಗಾವಣೆ ವಿರೋಧಿಸಿ ಕಳೆದ ಎರಡು ದಿನಗಳಿಂದ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಈ ಬಾರಿ ಶಾಲೆಗೆ ಕಡಿಮೆ ಫಲಿತಾಂಶ ಲಭಿಸಿದ್ದು, ಇದಕ್ಕೆ ಮೋತಿನಾಯ್ಕರವರು ಕಾರಣ ಎಂದು ಇಲಾಖೆ ಅವರನ್ನು ವರ್ಗಾವಣೆ ಮಾಡುತ್ತಿದೆ ಎಂಬುದು ಪೋಷಕರ ಆರೋಪವಾಗಿದೆ. ಮೋತಿನಾಯ್ಕರವರು ಕಳೆದ 8 ವರ್ಷಗಳಿಂದ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರನ್ನು ವರ್ಗಾವಣೆಗೊಳಿಸಿರುವುದು ಸರಿಯಲ್ಲ ಇದಕ್ಕೆ ಕ್ಷೇತ್ರ ಶಿಕ್ಷ ಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ಪಷ್ಟನೆ ನೀಡಬೇಕು. ತಕ್ಷಣ ಸ್ಥಳಕ್ಕೆ ಆಗಮಿಸಬೇಕು. ವರ್ಗಾವಣೆ ರದ್ದುಗೊಳಿಸಬೇಕೆಂದು ಪೋಷಕರು ಬುಧವಾರ ಆಗ್ರಹಿಸಿದ್ದರು.
ಈ ನಡುವೆ ಗುರುವಾರ ಶಾಲೆಯ ಮಕ್ಕಳು ವರ್ಗಾವಣೆ ವಿರೋಧಿಸಿ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ಕೈಗೊಂಡಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗಿದ್ದಾರೆ. ಶಾಲೆಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.