ಭದ್ರಾವತಿ ತಾಲೂಕಿನ ಯರೇಹಳ್ಳಿ ಜ್ಞಾನದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ 2ನೇ ಬಾರಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಭದ್ರಾವತಿ : ತಾಲೂಕಿನ ಯರೇಹಳ್ಳಿ ಜ್ಞಾನದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ 2ನೇ ಬಾರಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹಿರಿಯ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಹೆಚ್ಚಿನ ಬಹುಮಾನಗಳನ್ನು ಪಡೆದುಕೊಂಡಿದ್ದು, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ಖೋ ಖೋ ತಂಡ ಪ್ರಥಮ, 100 ಮೀ. ಓಟ, ಸಿ. ಅರ್ಪಿತ ಪ್ರಥಮ, ಬಾಲಕರ ತಟ್ಟೆ ಎಸೆತ ಎಂ. ಅಯ್ಯಪ್ಪ ಪ್ರಥಮ, 4X100 ಮೀ. ರಿಲೆ ಓಟ ಬಾಲಕಿಯರು ದ್ವಿತೀಯ, 100 ಮೀಟರ್ ಹರ್ಡಲ್ಸ್ ಓಟ ಟಿ.ಡಿ ದಿಶಾ ದ್ವಿತೀಯ, 400 ಮೀಟರ್ ಮತ್ತು 600 ಮೀಟರ್ ಓಟದಲ್ಲಿ ಸಿ. ಅರ್ಪಿತ ತೃತೀಯ ಸ್ಥಾನ ಪಡೆದಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆ ಕಾರ್ಯದರ್ಶಿ ಮಂಜುಳ ರಾಜಶೇಖರ್ ಹಾಗು ಶಾಲಾ ಮುಖ್ಯೋಪಾಧ್ಯಾಯರು, ತರಬೇತಿದಾರರು, ಶಿಕ್ಷಕರು ಹಾಗು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.