Sunday, October 29, 2023

ಡಾ. ಪುನೀತ್ ರಾಜ್‌ಕುಮಾರ್ ೨ನೇ ವರ್ಷದ ಪುಣ್ಯಸ್ಮರಣೆ

ಕರ್ನಾಟಕ ರತ್ನ, ಪವರ್‌ಸ್ಟಾರ್ ಡಾ. ಪುನೀತ್‌ರಾಜ್‌ಕುಮಾರ್‌ರವರ ೨ನೇ ವರ್ಷದ ಪುಣ್ಯಸ್ಮರಣೆ ಭದ್ರಾವತಿ ನಗರದ ವಿವಿಧೆಡೆ ಅಭಿಮಾನಿಗಳಿಂದ ನಡೆಯಿತು.
    ಭದ್ರಾವತಿ : ಕರ್ನಾಟಕ ರತ್ನ, ಪವರ್‌ಸ್ಟಾರ್ ಡಾ. ಪುನೀತ್‌ರಾಜ್‌ಕುಮಾರ್‌ರವರ ೨ನೇ ವರ್ಷದ ಪುಣ್ಯಸ್ಮರಣೆ ನಗರದ ವಿವಿಧೆಡೆ ಅಭಿಮಾನಿಗಳಿಂದ ನಡೆಯಿತು.
    ತಾಲೂಕು ಕಛೇರಿ ರಸ್ತೆ, ನಿರ್ಮಲ ಆಸ್ಪತ್ರೆ ಸಮೀಪ ಶ್ರೀ ಕನಕ ಆಟೋ ನಿಲ್ದಾಣದಲ್ಲಿ ಈ ಬಾರಿ ಸಹ ಪುನೀತ್‌ರಾಜ್‌ಕುಮಾರ ಪುಣ್ಯಸ್ಮರಣೆ ಅದ್ದೂರಿಯಾಗಿ ಜರುಗಿತು. ಆಟೋ ಮಾಲೀಕರು, ಚಾಲಕರು, ಸ್ಥಳೀಯರು ಹಾಗು ಅಭಿಮಾನಿಗಳು ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ಮರಿಸಿದರು.
    ಸಂಘದ ಅಧ್ಯಕ್ಷ ಸುರೇಶ್ ನೇತೃತ್ವ ವಹಿಸಿದ್ದರು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
    ಬಿ.ಎಚ್ ರಸ್ತೆ ಚಾಮೇಗೌಡ ಏರಿಯಾ ಡಾ. ರಾಜ್‌ಕುಮಾರ್ ಅಭಿಮಾನಿಗಳು, ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ನಗರಸಭೆ ಮಾರುಕಟ್ಟೆ ಸಮೀಪ ೨ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು.
    ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಅಭಿಮಾನಿಗಳು, ನೃಪತುಂಗ ಆಟೋ ನಿಲ್ದಾಣದ ಆಟೋ ಮಾಲೀಕರು, ಚಾಲಕರು, ಸ್ಥಳೀಯ ವರ್ತಕರು, ವ್ಯಾಪಾರಸ್ಥರು ಪಾಲ್ಗೊಂಡಿದ್ದರು.

ಭಾರ ಎತ್ತುವ ಸ್ಪರ್ಧೆ : ಡಾ. ಎಸ್. ವರದರಾಜ್ ಚಿನ್ನದ ಪದಕ


 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭದ್ರಾವತಿ ಉಪನ್ಯಾಸಕ ಡಾ. ಎಸ್. ವರದರಾಜ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
    ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಉಪನ್ಯಾಸಕ ಡಾ. ಎಸ್. ವರದರಾಜ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
    ಪುರುಷರ ವಿಭಾಗದ(೮೯ ಕೆ.ಜಿ) ಭಾರ ಎತ್ತುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಕಾಯ್ದುಕೊಂಡು ರಾಜಸ್ಥಾನದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
    ವರದರಾಜ್‌ರವರು ಉಪನ್ಯಾಸಕ ವೃತ್ತಿಯೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಹಲವಾರು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ. ಇವರಿಗೆ ಕ್ರೀಡಾಭಿಮಾನಿಗಳು, ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿವೆ.

ವಿಐಎಸ್‌ಎಲ್ ಶತಮಾನೋತ್ಸವ ವೇದಿಕೆ ನಿರ್ಮಾಣಕ್ಕೆ ಚಾಲನೆ

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವ ನ.೪ ಮತ್ತು ೫ರಂದು ಹಿರಿಯ ಚಲನಚಿತ್ರ ನಟ, ಮಾಜಿ ಉದ್ಯೋಗಿ ಎಸ್. ದೊಡ್ಡಣ್ಣನವರ ನೇತೃತ್ವದಲ್ಲಿ ನಡೆಯಲಿದ್ದು, ಈ ಹಿನ್ನಲೆಯಲ್ಲಿ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣಕ್ಕೆ ಭಾನುವಾರ ಚಾಲನೆ ನೀಡಲಾಯಿತು.
    ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವ ನ.೪ ಮತ್ತು ೫ರಂದು ಹಿರಿಯ ಚಲನಚಿತ್ರ ನಟ, ಮಾಜಿ ಉದ್ಯೋಗಿ ಎಸ್. ದೊಡ್ಡಣ್ಣನವರ ನೇತೃತ್ವದಲ್ಲಿ ನಡೆಯಲಿದ್ದು, ಈ ಹಿನ್ನಲೆಯಲ್ಲಿ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣಕ್ಕೆ ಭಾನುವಾರ ಚಾಲನೆ ನೀಡಲಾಯಿತು.
    ಈ ಸಂಬಂಧ ಧಾರ್ಮಿಕ ಆಚರಣೆಗಳೊಂದಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ಅಮೃತ್ ಸೇರಿದಂತೆ ಇನ್ನಿತರರು ಮಾತನಾಡಿ, ಕಾರ್ಖಾನೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರದ ಗಮನ ಸೆಳೆಯಲು ಶತಮಾನೋತ್ಸವ ಅದ್ದೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕೆಂದರು.
ಬೃಹತ್ ವೇದಿಕೆ ನಿರ್ಮಾಣದಲ್ಲಿ ಹೆಚ್ಚಿನ ಅನುಭವ ಹೊಂದಿರುವ ಹೊಸಮನೆ ಭವಾನಿ ಶಾಮಿಯಾನ ವತಿಯಿಂದ ವೇದಿಕೆ ನಿರ್ಮಾಣ ಮಾಡಲಾಗುತ್ತಿದ್ದು, ಶತಮಾನೋತ್ಸವದಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚಿನ ಜನರು ಪಾಲ್ಗೊಳ್ಳುವ ವಿಶ್ವಾಸ ಸಮಿತಿ ಹೊಂದಿದೆ.
    ಶಾಮಿಯಾನ ಮಾಲೀಕ ಭವಾನಿ, ನಿವೃತ್ತ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ನಗರಸಭೆ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಸಮಾಜ ಸೇವಕರಾದ ಸಿದ್ದಲಿಂಗಯ್ಯ, ಕೃಷ್ಣೇಗೌಡ, ಶಂಕರ್, ಕೆಂಪಯ್ಯ, ಹನುಮಂತರಾವ್, ಬಸವರಾಜ್, ಡಾಕಪ್ಪ, ನಾಗರಾಜ್, ತ್ರಿವೇಣಿ, ಶೈಲೇಶ್ರೀ, ಮಹೇಶ್ವರಪ್ಪ, ವೆಂಕಟೇಶ್ ಪ್ರಸಾದ್, ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನರಸಿಂಹಚಾರ್ ನಿರೂಪಿಸಿದರು.