Tuesday, October 31, 2023

೬೮ನೇ ಸುವರ್ಣ ಕನ್ನಡ ರಾಜ್ಯೋತ್ಸವ


ಭದ್ರಾವತಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.೧ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ೬೮ನೇ ಸುವರ್ಣ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ. 
ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ಬೆಳಿಗ್ಗೆ ೮ ಗಂಟೆಗೆ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಹಾಗು ಮೆರವಣಿಗೆ ನಡೆಯದ್ದು,  ೯ ಗಂಟೆಗೆ ಕನಕಮಂಟಪ ಮೈದಾನದಲ್ಲಿ ಧ್ವಜಾರೋಹಣ, ಪಥಸಂಚಲನ, ಸಾಂಸ್ಕೃತಿ ಹಾಗು ವೇದಿಕೆ ಕಾರ್ಯಕ್ರಮಗಳು ಜರುಗಲಿವೆ. 
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದ ಪೂರ್‍ಯನಾಯ್ಕ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ, ಉಪಾಧ್ಯಕ್ಷೆ ಬಿ.ಪಿ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ತಹಸೀಲ್ದಾರ್ ಕೆ.ಆರ್ ನಾಗರಾಜ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ನಗರಸಭೆ ಪೌರಾಯುಕ್ತ ಮನುಕುಮಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. 

ಅಧ್ಯಕ್ಷರಾಗಿ ಆರ್. ನಾಗರಾಜ್ ರಾವ್ ಸಿಂಘಾಡೆ

ಭದ್ರಾವತಿ ತಾಲೂಕು ಭತ್ತ ಮತ್ತು ಅಕ್ಕಿ ವರ್ತಕರ ಸಂಘದ ಅಧ್ಯಕ್ಷರಾಗಿ ಆರ್.ಎನ್.ಟಿ ಟ್ರೇಡರ್ಸ್ ಮಾಲೀಕ ಆರ್. ನಾಗರಾಜ್ ರಾವ್ ಸಿಂಘಾಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
    ಭದ್ರಾವತಿ: ತಾಲೂಕು ಭತ್ತ ಮತ್ತು ಅಕ್ಕಿ ವರ್ತಕರ ಸಂಘದ ಅಧ್ಯಕ್ಷರಾಗಿ ಆರ್.ಎನ್.ಟಿ ಟ್ರೇಡರ್ಸ್ ಮಾಲೀಕ ಆರ್. ನಾಗರಾಜ್ ರಾವ್ ಸಿಂಘಾಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ತಾಲೂಕು ಭತ್ತ ಮತ್ತು ಅಕ್ಕಿ ವರ್ತಕರ ಸಂಘದ ಪದಾಧಿಕಾರಿಗಳಿಗೆ ನಾಗರಾಜ್ ರಾವ್ ಸಿಂಘಾಡೆ ಕೃತಜ್ಞತೆ ಸಲ್ಲಿಸಿದ್ದಾರೆ.

ಎಸ್. ಬಂಗಾರಪ್ಪ ಜನ್ಮ ದಿನಾಚರಣೆ, ಉಸ್ತುವಾರಿ ಜಿಲ್ಲಾ ಸಚಿವರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನಾ ಧರಣಿ ಸತ್ಯಾಗ್ರಹ

ದೀನದಲಿತರ, ಶೋಷಿತರ, ರೈತರ, ಕಾರ್ಮಿಕರ, ಎಲ್ಲಾ ವರ್ಗದ, ಎಲ್ಲಾ ಧರ್ಮದವರ ಹಿತ ಚಿಂತಕರಾದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ೯೦ನೇ ಜನ್ಮ ದಿನಾಚರಣೆ ಹಾಗು ಜಿಲ್ಲಾ ಉಸ್ತುವಾರಿ ಸಚಿವರಿಂದ ಕ್ಷೇತ್ರದ ನಿರ್ಲಕ್ಷ್ಯ ಖಂಡಿಸಿ ಮಂಗಳವಾರ ಭದ್ರಾವತಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು. 
    ಭದ್ರಾವತಿ: ದೀನದಲಿತರ, ಶೋಷಿತರ, ರೈತರ, ಕಾರ್ಮಿಕರ, ಎಲ್ಲಾ ವರ್ಗದ, ಎಲ್ಲಾ ಧರ್ಮದವರ ಹಿತ ಚಿಂತಕರಾದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ೯೦ನೇ ಜನ್ಮ ದಿನಾಚರಣೆ ಹಾಗು  ಜಿಲ್ಲಾ ಉಸ್ತುವಾರಿ ಸಚಿವರಿಂದ ಕ್ಷೇತ್ರದ ನಿರ್ಲಕ್ಷ್ಯ ಖಂಡಿಸಿ ಮಂಗಳವಾರ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು.
    ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮಾತನಾಡಿ, ಎಸ್. ಬಂಗಾರಪ್ಪನವರ ಪುತ್ರರಾದ ಜಿಲ್ಲಾ ಉಸ್ತುವಾರಿ ಹಾಗು ಪ್ರಾಥಮಿಕ ಪ್ರೌಢ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರು ಕೇವಲ ಶಿವಮೊಗ್ಗ, ಸಾಗರ, ಸೊರಬ ಕ್ಷೇತ್ರಗಳಿಗೆ ಮಾತ್ರ ಪದೇ ಪದೇ ಭೇಟಿ ನೀಡುತ್ತಿದ್ದು, ಆದರೆ ಈ ಕ್ಷೇತ್ರಕ್ಕೆ ಇದುವರೆಗೂ ಭೇಟಿ ನೀಡದೆ ನಿರ್ಲಕ್ಷಿಸುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
    ಕ್ಷೇತ್ರದ ಸರ್ಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಕಳಪೆ ಕಾಮಗಾರಿಗಳು ಹೆಚ್ಚಾಗಿ ಅವ್ಯವಸ್ಥೆ ಉಂಟಾಗಿದೆ. ಇದುವರೆಗೂ ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿ ಬಗೆಹರಿಸದಿರುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ೨೦೧೭ರಲ್ಲಿ ಪ್ರಾರಂಭವಾದ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಪದೇ ಪದೇ ಹೋರಾಟಗಳ ಮೂಲಕ ಮನವಿ ಸಲ್ಲಿಸಿದ್ದರೂ ಸಹ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಹೆಸರಿಗೆ ಅವಮಾನವಾಗುತ್ತಿದ್ದರು ಸಹ ಇದುವರೆಗೂ ಪೂರ್ಣಗೊಳಿಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ತಕ್ಷಣ ಜಿಲ್ಲಾ ಉಸ್ತುವಾರಿ ಸಚಿವರು ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ಸಮಸ್ಯೆ ಬಗಹರಿಸಬೇಕು. ಇಲ್ಲವಾದಲ್ಲಿ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.
    ಸಮಿತಿ ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಅಕ್ರಂ ಖಾನ್, ಉಪಾಧ್ಯಕ್ಷರಾದ ಬ್ರಹ್ಮಲಿಂಗಯ್ಯ, ರಂಗಪ್ಪ, ಶೌಕತ್, ಎಂ.ವಿ ಚಂದ್ರಣ್ಣ, ಕಾರ್ಯದರ್ಶಿಗಳಾದ ರಾಕೇಶ್ ಕುಮಾರ್, ವೀರೇಶ್, ಪ್ರಧಾನ ಸಂಚಾಲಕರಾದ ಶ್ರೀನಿವಾಸ್, ಬಸವರಾಜ್, ಸಂಚಾಲಕರಾದ ಅಜಿತ್, ಅಜಯ್, ಕೆ. ಶಿವಕುಮಾರ್, ಟಿ.ಎನ್ ನಾಗರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.