Wednesday, November 8, 2023

ಪ್ರೊ. ಬಿ. ಕೃಷ್ಣಪ್ಪನವರ ೮೬ನೇ ಜನ್ಮದಿನ

ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆ ವತಿಯಿಂದ ದಲಿತ ಚಳುವಳಿಯ ರೂವಾರಿ, ಸಮಿತಿ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪನವರ ೮೬ನೇ ಜನ್ಮದಿನ ಭದ್ರಾವತಿ ಹಳೇನಗರದ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಪರಿಶಿಷ್ಟ ಜಾತಿ/ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆ ವತಿಯಿಂದ ದಲಿತ ಚಳುವಳಿಯ ರೂವಾರಿ, ಸಮಿತಿ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪನವರ ೮೬ನೇ ಜನ್ಮದಿನ ಹಳೇನಗರದ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಆಚರಿಸಲಾಯಿತು.
    ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಎಚ್ ಹಾಲೇಶಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಹಿರಿಯ ಸದಸ್ಯ ಬಿ.ಕೆ ಮೋಹನ್, ಪ್ರಗತಿಪರ ಹೋರಾಟಗಾರ ಸುರೇಶ್, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಮತ್ತು ದಲಿತ ಮುಖಂಡ ಹನುಮಂತಪ್ಪ ಕಲ್ಲಿಹಾಳ್, . ಸಮಿತಿ ಜಿಲ್ಲಾ ದಲಿತ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ಎಸ್. ಗೋವಿಂದರಾಜು, ಸಮಿತಿ ರಾಜ್ಯ ಮಹಿಳಾ ಸಂಘಟನಾ ಸಂಚಾಲಕಿ ರುದ್ರಮ್ಮ, ಸಮಿತಿ ಹಿರಿಯೂರು ಹೋಬಳಿ ಸಂಚಾಲಕ ಅಣ್ಣಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಆರ್. ಹರೀಶ್, ಶಿವಮೊಗ್ಗ ತಾಲೂಕು ಪ್ರಧಾನ ಸಂಚಾಲಕರಾದ  ಶೇಷಪ್ಪ ಹುಣುಸೂಡು, ಪರಮೇಶ್ ಸೂಗೂರು, ಮಂಜಣ್ಣ, ಸಂತೋಷ್ ಹಿರಿಯೂರು, ಗೋವಿಂದ್ ಕಾಶಿಪುರ, ಟಿ. ಮಹೇಶ್ ಅತ್ತಿಗುಂದ, ಡಿ. ನರಸಿಂಹಮೂರ್ತಿ, ರಾಮನಾಯ್ಕ, ಪ್ರಭು, ಹನುಮಂತು, ದುರ್ಗಪ್ಪ, ನವೀನ, ಈಶ್ವರಪ್ಪ, ರಾಜು, ರಮೇಶ್, ನಿಂಗಣ್ಣ, ಬಸವರಾಜ್, ಮನು  ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಸಮಿತಿ ತಾಲೂಕು ಪ್ರಧಾನ ಸಂಚಾಲಕ ಎಸ್. ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು. ತಾಲೂಕಿನ ಪರಿಶಿಷ್ಟ ಜಾತಿ/ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಇದಕ್ಕೂ ಮೊದಲು ನಗರದ ಅಂಬೇಡ್ಕರ್ ವೃತ್ತದಿಂದ ಅಕ್ಕಮಹಾದೇವಿ ಸಮುದಾಯ ಭವನದವರೆಗೂ ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು.

ನ.೯ರಂದು ಮ್ಯಾಮೊಗ್ರಫಿ ಸ್ತನ ಕ್ಯಾನ್ಸರ್ ತಪಾಸಣೆ ಶಿಬಿರ

    ಭದ್ರಾವತಿ: ನಗರದ ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ಶಿವಮೊಗ್ಗ ನಾರಾಯಣ ಹೆಲ್ತ್‌ಕೇರ್, ನಾರಾಯಣ ಹೃದಯಾಲಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ನ.೯ರಂದು ಬೆಳಿಗ್ಗೆ ೧೦ ಗಂಟೆಗೆ ಉಚಿತ ಮ್ಯಾಮೊಗ್ರಫಿ-ಸ್ತನಕ್ಯಾನ್ಸರ್ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.
    ಜನ್ನಾಪುರ ಜಯಶ್ರೀ ವೃತ್ತದ ಸಮೀಪದ ಲೇಡಿಸ್ ಕ್ಲಬ್ ಮುಂಭಾಗದಲ್ಲಿರುವ ಟ್ರಸ್ಟ್ ಕಛೇರಿಯಲ್ಲಿ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಟ್ರಸ್ಟ್ ಅಧ್ಯಕ್ಷ ಲಾಜರ್ ಕೋರಿದ್ದಾರೆ.

ಪಿ. ಈಶ್ವರ್‌ರಾವ್ ನಿಧನ

ಪಿ. ಈಶ್ವರ್‌ರಾವ್
    ಭದ್ರಾವತಿ : ಹಿಂದೂ ಮಹಾಸಭಾ ಹಾಗು ಬಿಜೆಪಿ ಮುಖಂಡ, ಹೊಸಮನೆ ನಿವಾಸಿ ಪಿ. ಈಶ್ವರರಾವ್(೬೦) ಬುಧವಾರ ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ ಹಾಗು ಇಬ್ಬರು ಪುತ್ರಿಯರು ಇದ್ದರು. ಈಶ್ವರರಾವ್ ಮೂಲತಃ ಹಿಂದೂ ಮಹಾಸಭಾ ಕಾರ್ಯಕರ್ತರಾಗಿದ್ದು, ಬಿಜೆಪಿ ಪಕ್ಷದಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಇವರ ನಿಧನಕ್ಕೆ ಹಿಂದೂ ಮಹಾಸಭಾ ಪ್ರಮುಖರು ಹಾಗು ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಸಹೋದರ ಪಿ. ಗಣೇಶ್‌ರಾವ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

ನ.೯ರಂದು ಶುದ್ಧ, ಸುರಕ್ಷಿತ ಕುಡಿಯುವ ನೀರು ಪೂರೈಕೆ ಕುರಿತು ಅರಿವು

    ಭದ್ರಾವತಿ: ನಗರಸಭೆ ವತಿಯಿಂದ `ವುಮೆನ್ ಆಫ್ ವಾಟರ್, ವಾಟರ್ ಆಫ್ ವುಮೆನ್ ಕ್ಯಾಂಪೇನ್' ಜಲ್ ದಿವಾಳಿ ಅಭಿಯಾನದ ಅಂಗವಾಗಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರುಗಳಿಗೆ ನ. ೯ರಂದು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಬೈಪಾಸ್ ರಸ್ತೆ, ಆನೇಕೊಪ್ಪದಲ್ಲಿರುವ ನಗರಸಭೆ ಜಲ ಶುದ್ಧೀಕರಣ ಘಟಕದಲ್ಲಿ ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ನಗರಸಭೆ ವ್ಯಾಪ್ತಿಯ ೩೦ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರುಗಳಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಪೂರೈಕೆಯ ಪ್ರಕ್ರಿಯೆ ಹಾಗು ಮಾಲೀಕತ್ವದ ಭಾವನೆ ಕುರಿತು ಅರಿವು ಮೂಡಿಸಲಾಗುವುದು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಎಚ್.ಎಂ ಮನುಕುಮಾರ್ ಕೋರಿದ್ದಾರೆ.