ಅಖಿಲ ಭಾರತ ಮಾಧ್ವ ಮಹಾ ಮಂಡಳಿ ತಾಲೂಕು ಶಾಖೆ ವತಿಯಿಂದ ಬುಧವಾರ ಸುಳಾದಿದಾಸರೆಂದೇ ಖ್ಯಾತರಾದ ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಆರಾಧನಾ ಮಹೋತ್ಸವ ಅಂಗವಾಗಿ ನಗರಸಂಕೀರ್ತನೆ ನಡೆಯಿತು.
ಭದ್ರಾವತಿ : ಅಖಿಲ ಭಾರತ ಮಾಧ್ವ ಮಹಾ ಮಂಡಳಿ ತಾಲೂಕು ಶಾಖೆ ವತಿಯಿಂದ ಬುಧವಾರ ಸುಳಾದಿದಾಸರೆಂದೇ ಖ್ಯಾತರಾದ ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಆರಾಧನಾ ಮಹೋತ್ಸವ ಅಂಗವಾಗಿ ನಗರಸಂಕೀರ್ತನೆ ನಡೆಯಿತು. ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪಂಡಿತ್ ಮೃತ್ತಿಕಾ ಗುರುರಾಜಾಚಾರ್ ಅವರಿಂದ ವಿಜಯದಾಸರ ಕೃತಿಗಳ ಕುರಿತು ಪ್ರವಚನ ಜರುಗಿತು.
ಮಠದಲ್ಲಿರುವ ಬೃಂದಾವನಗಳಿಗೆ ವಿಶೇಷ ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಅಖಿಲ ಭಾರತ ಮಾಧ್ವ ಮಹಾ ಮಂಡಳಿ ತಾಲೂಕು ಅಧ್ಯಕ್ಷ ಜಯತೀರ್ಥ, ಪ್ರಮುಖರಾದ ವೆಂಕಟೇಶ ರಾವ್, ಗೋಪಾಲಾಚಾರ್, ಶ್ರೀನಿವಾಸಚಾರ್, ರಮಾಕಾಂತ್, ಕಲ್ಲಾಪುರ ರಾಮಚಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.