Tuesday, November 28, 2023

ಕೋಟ್ಪಾ ಕಾಯ್ದೆ ಉಲ್ಲಂಘನೆ : ೨೦ ಪ್ರಕರಣ, ೨೦೦೦ ರು. ದಂಡ ವಸೂಲಿ

ಭದ್ರಾವತಿ ನಗರಸಭೆ ವಾರ್ಡ್ ೨೨ರ ಉಜ್ಜನಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ವತಿಯಿಂದ ಮಂಗಳವಾರ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರಿಗೆ ದಂಡ ವಿಧಿಸಿರುವ ಘಟನೆ ನಡೆದಿದೆ.
    ಭದ್ರಾವತಿ : ನಗರಸಭೆ ವಾರ್ಡ್ ೨೨ರ ಉಜ್ಜನಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ವತಿಯಿಂದ ಮಂಗಳವಾರ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರಿಗೆ ದಂಡ ವಿಧಿಸಿರುವ ಘಟನೆ ನಡೆದಿದೆ.
    ೨೦ ಪ್ರಕರಣ, ೨೦೦೦ ದಂಡವನ್ನು ವಿಧಿಸಲಾಯಿತು, ಸೆಕ್ಷನ್ ೪ರಲ್ಲಿ ೧೦, ೬ಎ ೫ ಮತ್ತು ೬ಬಿಯಲ್ಲಿ ೫ ಸೇರಿದಂತೆ ಒಟ್ಟು ೨೦ ಪ್ರಕರಣಗಳಿಂದ ಒಟ್ಟು ೨೦೦೦ ರು. ದಂಡ ವಿಧಿಸಲಾಗಿದೆ.
    ದಾಳಿಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆನಂದಮೂರ್ತಿ ಮತ್ತು ತಾಜ್ ಹಾಗೂ ಮನೋಹರ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿ.ಕೆ ರವಿರಾಜ್ ಹಾಗೂ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು. ತಂಬಾಕು ಮಾರಾಟಗಾರರಿಗೆ ತಂಬಾಕು ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.

ಶಿವಮೊಗ್ಗ-ಭದ್ರಾವತಿಯಲ್ಲಿ ಫಿಟ್ನೆಸ್ ಡ್ಯಾನ್ಸ್ ತರಬೇತಿ

    ಭದ್ರಾವತಿ: ಕೋರಿಯೋಗ್ರಫರ್ ಸಂತೋಷ್ ಭದ್ರಾವತಿ ಮಾರ್ಗದರ್ಶನದಲ್ಲಿ ಶಿವಮೊಗ್ಗ-ಭದ್ರಾವತಿಯಲ್ಲಿ ಫಿಟ್ನೆಸ್ ಡ್ಯಾನ್ಸ್ ತರಬೇತಿ ಆರಂಭಿಸಲಾಗುತ್ತಿದೆ.
    ವಾರಾಂತ್ಯ ತರಗತಿಗಳು ಮತ್ತು ಆಸಕ್ತ ಕುಟುಂಬಗಳಿಗೆ ಸ್ವಗೃಹಗಳಲ್ಲಿಯೂ ತರಬೇತಿ ನೀಡಲಾಗುವುದು. ಸದೃಢ ಆರೋಗ್ಯ ಮತ್ತು ಜಂಜಾಟಗಳಿಂದ ಮುಕ್ತರಾಗಲು ಸಹಾಕಾರಿಯಾಗಿರುವ ಫಿಟ್ನೆಸ್ ನೃತ್ಯವನ್ನು ೫ ರಿಂದ ೬೦ವರ್ಷದವರೆಗಿನ ಎಲ್ಲ ವಯೋಮಾನದವರು ಕಲಿಬಹುದಾಗಿದೆ.
    ಹೆಚ್ಚಿನ ಮಾಹಿತಿಗೆ ೯೪೮೨೦ ೫೧೧೨೦ ವಾಟ್ಸಪ್ ಸಂಖ್ಯೆಗೆ ಮೆಸೇಜ್ ಮಾಡುವ ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ ಎಂದು ಸಂತೋಷ್ ಫಿಟ್ನೆಸ್ ಸೆಂಟರ್ ಪ್ರಕಟಣೆ ಮೂಲಕ ಕೋರಿದೆ.

ಬಾಡಿಗೆಗೆ ಇದೆ




ಶ್ರೀ ಸಾಯಿ ದೃವಿ ಕಾಂಪ್ಲೆಕ್ಸ್, ಲಕ್ಷ್ಮೀ ಬೇಕರಿ ಎದುರು, ಮುಖ್ಯ ರಸ್ತೆ, ಸಿದ್ದಾಪುರ, ಭದ್ರಾವತಿ. ೩ನೇ ಮಹಡಿಯಲ್ಲಿ 34 x 68 ಚದುರ ಅಡಿ ವಿಸ್ತೀರ್ಣ ಹೊಂದಿರುವ ಹಾಲ್ ಬಾಡಿಗೆಗೆ ಇದೆ. ಲಿಫ್ಟ್ ಸೌಲಭ್ಯ ಹೊಂದಿದ್ದು, ಹೆಚ್ಚಿನ ಮಾಹಿತಿಗೆ ಮೊ:  9845070083 ಸಂಖ್ಯೆಗೆ ಕರೆ ಮಾಡಬಹುದಾಗಿದೆ. 


ತಮಿಳ್ ಸಂಗಮ್‌ವತಿಯಿಂದ ಕನ್ನಡ ರಾಜ್ಯೋತ್ಸವ

ಭದ್ರಾವತಿ ತರೀಕೆರೆ ರಸ್ತೆಯ ತಮಿಳ್ ಸಂಗಮ್ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಸಂಗಮ್ ಅಧ್ಯಕ್ಷ ಕೆ. ಚಂದ್ರಶೇಖರ್ ಧ್ವಜಾರೋಹಣ ನೆರವೇರಿಸಿದರು.
    ಭದ್ರಾವತಿ : ನಗರದ ತರೀಕೆರೆ ರಸ್ತೆಯ ತಮಿಳ್ ಸಂಗಮ್ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಸಂಗಮ್ ಅಧ್ಯಕ್ಷ ಕೆ. ಚಂದ್ರಶೇಖರ್ ಧ್ವಜಾರೋಹಣ ನೆರವೇರಿಸಿದರು.
    ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ, ಆಗಮುಡಿ ಮೊದಲಿಯಾರ್ ಸಂಘದ ಅಧ್ಯಕ್ಷ ಕೆ. ಮಂಜುನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ತಮಿಳ್ ಸಂಗಮ್ ಕಾರ್ಯದರ್ಶಿ ವಿ. ಮಣಿ, ಸಹ ಕಾಯದರ್ಶಿ ವಿ. ರಾಜ, ಖಜಾಂಚಿ ವೀರಭದ್ರನ್, ಸದಸ್ಯ ನಾರಾಯಣಸ್ವಾಮಿ ಸೇರಿದಂತೆ ಎಲ್ಲಾ ಸದಸ್ಯರು, ಸ್ಥಳೀಯರು ಪಾಲ್ಗೊಂಡಿದ್ದರು.