ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಶಾಲಾ ಆವರಣದಲ್ಲಿ ಬುಧವಾರ ವಿಜೃಂಭಣೆಯಿಂದ ಜರುಗಿತು. ರಾಮಾಯಣ ರೂಪಕ ಗಮನ ಸೆಳೆಯಿತು. ನಿರ್ದೇಶಕ ಕಿರುತೆರೆ ನಟ, ರಂಗಕರ್ಮಿ ಅಪರಂಜಿ ಶಿವರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ: ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಶಾಲಾ ಆವರಣದಲ್ಲಿ ಬುಧವಾರ ವಿಜೃಂಭಣೆಯಿಂದ ಜರುಗಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ಶಾಲಾ ಮಕ್ಕಳು ಹಾಗು ಅವರ ಪೋಷಕರು ಜ್ಯೋತಿ ಬೆಳಗಿಸುವ ಮೂಲಕ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದರು. ವಿಧಾನಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ಬಾರಿ ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಸೇಂಟ್ ಜೋಸೆಫ್ ಶಾಲೆ ಕಾರ್ಯದರ್ಶಿ ಲತಾ ರಾಬರ್ಟ್ ಮತ್ತು ಅರದೊಟ್ಲು ಭುವನೇಶ್ವರಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಲೋಲಾಕ್ಷಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಅಧ್ಯಕ್ಷತೆ ವಹಿಸಿದ್ದರು. ಪ್ರಶಾಂತಿ ಸೇವಾ ಟ್ರಸ್ಟ್ ಅಧ್ಯಕ್ಷ ಎಂ. ದೇವೇಂದ್ರಪ್ಪ, ಟ್ರಸ್ಟ್ ಸದಸ್ಯರಾದ ಬಿ. ಚೀಲೂರಪ್ಪ, ಎಚ್.ಪಿ ಶಿವಪ್ಪ, ಕೆ. ಸೌಮ್ಯರೂಪ, ರಾಮಕೃಷ್ಣಯ್ಯ, ದಾಮೋದರ್ ಜಿ. ಶೇಟ್, ಕೆ. ಗೊಪಾಲ್, ಆರ್. ವಿನಯ್, ಸಂತೋಷ್ ಜಿ. ವರ್ಣೇಕರ್, ಸಿ.ಆರ್ ಚೇತನ್, ಶಾಲಾ ಮುಖ್ಯಸ್ಥರುಗಳಾದ ಶಾಮರಾಯ ಆಚಾರ್, ಮೃತ್ಯುಂಜಯ ಕಾನಿಟ್ಕರ್, ಎಚ್.ಪಿ ಪ್ರಸನ್ನ, ಟಿ.ವಿ ಸುಜಾತ, ಜಿ. ವಿಜಯಲಕ್ಷ್ಮಿ ಮತ್ತು ಜಿ.ಪಿ ಪರಮೇಶ್ವರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿಶೇಷವಾಗಿ ಮಕ್ಕಳು ಅವರು ಅಪೇಕ್ಷಿಸುವ ವಸ್ತುಗಳನ್ನು ಬಹುಮಾನವಾಗಿ ವಿತರಿಸಲಾಯಿತು. ಕಿರುತೆರೆ ನಟ, ರಂಗಕರ್ಮಿ ಅಪರಂಜಿ ಶಿವರಾಜ್ ನಿರ್ದೇಶನದ ರಾಮಾಯಣ ರೂಪಕ ಗಮನ ಸೆಳೆಯಿತು.