Saturday, December 2, 2023

ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ

ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಿವಮೊಗ್ಗ ಪ್ರಾದೇಶಿಕ ಕಛೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಕ್ಪ ಯಾತ್ರೆಗೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು.
    ಭದ್ರಾವತಿ : ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಿವಮೊಗ್ಗ ಪ್ರಾದೇಶಿಕ ಕಛೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಕ್ಪ ಯಾತ್ರೆಗೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು.
ನಂತರ ಮಾತನಾಡಿದ ಸಂಸದರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನ ಸುರಕ್ಷಾ ಯೋಜನೆಗಳ ಮಹತ್ವ ತಿಳಿಸಿ ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು.
    ವೀರಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಮಂಜುನಾಥ್, ಯುವ ಮುಖಂಡ ಮಂಗೋಟೆ ರುದ್ರೇಶ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಛೇರಿ ಅಧಿಕಾರಿಗಳು  ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ದಶಮಾನೋತ್ಸವ ಪ್ರಯುಕ್ತ ಡಿ.೩ರಂದು ಜನಪದ ಜಾತ್ರೆ


    ಭದ್ರಾವತಿ: ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ದಶಮಾನೋತ್ಸವದ ಪ್ರಯುಕ್ತ ಡಿ.೩ರಂದು ಸಂಜೆ ೬ ಗಂಟೆಗೆ ಜನ್ನಾಪುರ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜನಪದ ಜಾತ್ರೆ ಹಮ್ಮಿಕೊಳ್ಳಲಾಗಿದೆ.
    ಡಾ. ಬಿ.ಆರ್ ಅಂಬೇಡ್ಕರ ಜಾನಪದ ಕಲಾ ಸಂಘದ ಕಲಾವಿದರಿಂದ ಜನಪದ ಹಾಡುಗಾರಿಕೆ, ತಾಲೂಕಿನ ಅತ್ತಿಗುಂದ ಗ್ರಾಮದ ಚಂದ್ರಮ್ಮ ಮತ್ತು ತಂಡದವರಿಂದ ಸೋಬಾನೆ ಪದ, ಎಮ್ಮೆಹಟ್ಟಿ ಗ್ರಾಮದ ಗಜಾನನ ಡೊಳ್ಳು ಯುವಕರ ಸಂಘದಿಂದ ಡೊಳ್ಳು ಕುಣಿತ, ಡಿ.ಬಿ ಹಳ್ಳಿ ಶ್ರೀ ಮುಗ್ದ ಸಂಗಮೇಶ್ವರ ವೀರಗಾಸೆ ಕಲಾತಂಡದಿಂದ ಪುರುಷರ ವೀರಗಾಸೆ, ಶಿವಮೊಗ್ಗ ಬೆಳಲಕಟ್ಟೆ ಸರಸ್ವತಿ ಕಲಾ ತಂಡದಿಂದ ಲಂಬಾಣಿ ನೃತ್ಯ, ಸಾಗರ ಬಂದಗದ್ದೆ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಕೋಲಾಟ ಕಲಾ ತಂಡದಿಂದ ಕೋಲಾಟ, ತರೀಕೆರೆ ಲಿಂಗದಹಳ್ಳಿ ಶ್ರೀ ಗುರುವೀರ ಮಹಿಳಾ ವೀರಗಾಸೆ ಕಲಾ ತಂಡದಿಂದ ಮಹಿಳಾ ವೀರಗಾಸೆ, ಉತ್ತರ ಕನ್ನಡ ಜಿಲ್ಲೆಯ ಅಂಚೊ ಮೂಳ ಸಿದ್ಧಿ ಸಾಂಸ್ಕೃತಿಕ ಕಲಾ ತಂಡದಿಂದ ಡಮಾಮಿ ನೃತ್ಯ, ಮಂಡ್ಯ ಅರೇಚಾಕನಹಳ್ಳಿ ಸುಂದರೇಶ್ ಮತ್ತು ತಂಡದವರಿಂದ ಪೂಜಾ ಕುಣಿತ ಹಾಗು ಮೈಸೂರು ಪಿರಿಯಾಪಟ್ಟಣ ಕುಮಾರನಾಯ್ಕ ಮತ್ತು ತಂಡದವರಿಂದ ಕಂಸಾಳೆ ನಡೆಯಲಿದೆ.


    ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘ ೨೦೧೩ರಲ್ಲಿ ಜನ್ನಾಪುರದಲ್ಲಿ ತಮಟೆ ಮೇಳದ ತಂಡವಾಗಿ ಹುಟ್ಟಿ ಕೊಂಡಿದ್ದು, ತದನಂತರ ಜನಪದ ಕಲೆಗಳ ಪ್ರದರ್ಶನ, ಜನಪದ ಗೀತೆಗಳ ಹಾಡುಗಾರಿಕೆ ಹಾಗು ಬೀದಿನಾಟಕ ಪ್ರದರ್ಶನಗಳನ್ನು ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ.
    ಸಂಘದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಶಿಬಿರಗಳು ಹಾಗು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹಲವಾರು ಬೀದಿ ನಾಟಕಗಳನ್ನು ಪ್ರದರ್ಶಿಸಲಾಗಿದೆ. ಸಂಘಕ್ಕೆ ಹಲವಾರು ಪ್ರಶಸ್ತಿ, ಪುರಸ್ಕಾರಗಳು ಲಭಿಸಿವೆ. ಸಂಘದ ಕಾರ್ಯ ಚಟುವಟಿಕೆ ಮತ್ತಷ್ಟು ವಿಸ್ತಾರಗೊಳ್ಳಲಿ, ಸಮಾಜಕ್ಕೆ ಇನ್ನಷ್ಟು ಕೊಡುಗೆ ನೀಡುವಂತಾಗಲಿ ಎಂಬ ಆಶಯದೊಂದಿಗೆ ದಶಮಾನೋತ್ಸವ ಆಚರಿಸುತ್ತಿದ್ದು, ಕಲಾವಿದರು, ಕಲಾಭಿಮಾನಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.  

ಪ್ರಥಮ ವರ್ಷದ ಪುಣ್ಯ ಸ್ಮರಣೆ : ಸಾಮಾಜಿಕ ಸೇವಾ ಕಾರ್ಯಗಳು

ಮಾದರಿಯಾದ ಕುಟುಂಬ ವರ್ಗದವರು, ಸ್ನೇಹಿತರು

ಭದ್ರಾವತಿ ನಗರಸಭೆ ವಾರ್ಡ್ ನಂ.೩೧ರ ವ್ಯಾಪ್ತಿಯ ಜಿಂಕ್‌ಲೈನ್ ನಿವಾಸಿ, ಯುವ ಮುಖಂಡ ಮಹೇಶ್‌ರವರು ಕಳೆದ ೧ ವರ್ಷದ ಹಿಂದೆ ನಿಧನ ಹೊಂದಿದ್ದು, ಇವರ ಮೊದಲ ವರ್ಷದ ಪುಣ್ಯ ಸ್ಮರಣೆಯನ್ನು ಕುಟುಂಬ ವರ್ಗದವರು ಹಾಗು ಸ್ನೇಹಿತರು ಸಾಮಾಜಿಕ ಕಾರ್ಯಗಳನ್ನು ಆಯೋಜಿಸುವ ಮೂಲಕ ಮಾದರಿ ಯಾಗಿದ್ದಾರೆ.
    ಭದ್ರಾವತಿ : ಕಳೆದ ೧ ವರ್ಷದ ಹಿಂದೆ ನಿಧನ ಹೊಂದಿದ ವ್ಯಕ್ತಿಯೊಬ್ಬರ ಪುಣ್ಯಸ್ಮರಣೆಯನ್ನು ಕುಟುಂಬ ವರ್ಗದವರು ಹಾಗು ಸ್ನೇಹಿತರು ವಿಶಿಷ್ಟವಾಗಿ ಆಚರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
    ನಗರಸಭೆ ವಾರ್ಡ್ ನಂ.೩೧ರ ವ್ಯಾಪ್ತಿಯ ಜಿಂಕ್‌ಲೈನ್ ನಿವಾಸಿ, ಯುವ ಮುಖಂಡ ಮಹೇಶ್‌ರವರು ಕಳೆದ ೧ ವರ್ಷದ ಹಿಂದೆ ನಿಧನ ಹೊಂದಿದ್ದು, ಇವರ ಮೊದಲ ವರ್ಷದ ಪುಣ್ಯ ಸ್ಮರಣೆಯನ್ನು ಕುಟುಂಬ ವರ್ಗದವರು ಹಾಗು ಸ್ನೇಹಿತರು ಸಾಮಾಜಿಕ ಕಾರ್ಯಗಳನ್ನು ಆಯೋಜಿಸುವ ಮೂಲಕ ಮಾದರಿ ಯಾಗಿದ್ದಾರೆ.
    ಹುತ್ತಾಕಾಲೋನಿ ಜಿಂಕ್‌ಲೈನ್ ರಂಗಮಂಟಪದ ಬಳಿ ಶುಕ್ರವಾರ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ಹಾಗು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಶಿವಮೊಗ್ಗ ಪ್ರಿಯಾಂಕ ಆಸ್ಪತ್ರೆ ವೈದ್ಯ ಡಾ. ನಿತೀನ್ ನೇತೃತ್ವದ ತಂಡ ಆರೋಗ್ಯ ತಪಾಸಣೆ ಹಾಗು ಐ ದೃಷ್ಠಿ ಆಸ್ಪತ್ರೆ ಮುರಳಿ ಪಿ.ಆರ್.ಓ ನೇತೃತ್ವದ ತಂಡದಿಂದ ಕಣ್ಣಿನ ತಪಾಸಣೆ ಹಾಗು ರೋಟರಿ ರಕ್ತನಿಧಿವತಿಯಿಂದ ರಕ್ತದಾನ ಶಿಬಿರ ನಡೆಯಿತು.
    ಭಂಡಾರಹಳ್ಳಿ, ಜಿಂಕ್‌ಲೈನ್, ಹುತ್ತಾಕಾಲೋನಿ, ವೇಲೂರುಶೆಡ್, ಜನ್ನಾಪುರ ಸೇರಿದಂತೆ ಸುತ್ತಮುತ್ತಲ ನೂರಾರು ಮಂದಿ ಶಿಬಿರದಲ್ಲಿ ಪಾಲ್ಗೊಂಡಿದ್ದರು.
    ಪ್ರಮುಖರಾದ ವಿ. ಶ್ರೀನಿವಾಸ್, ಎಂ. ದಿಲೀಪ್, ಪ್ರವೀಣ್, ವಿಲ್ಸನ್, ಎಚ್. ರವಿಕುಮಾರ್, ಅನಂತರಾಮು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.