ಪೊಲೀಸ್ ಉಪಾಧೀಕ್ಷಕರ ಕಛೇರಿ ಮುಂಭಾಗ ವಿವಿಧ ಸಂಘಟನೆಗಳ ಮುಖಂಡರ ಪ್ರತಿಭಟನೆ
ಭದ್ರಾವತಿ ಕ್ಷೇತ್ರದಲ್ಲಿ ಪೊಲೀಸ್ ಇಲಾಖೆ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ನಗರದ ನ್ಯೂಟೌನ್ ಪೊಲೀಸ್ ಉಪಾಧೀಕ್ಷಕರ ಕಛೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.
ಭದ್ರಾವತಿ: ಕ್ಷೇತ್ರದಲ್ಲಿ ಪೊಲೀಸ್ ಇಲಾಖೆ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ನಗರದ ನ್ಯೂಟೌನ್ ಪೊಲೀಸ್ ಉಪಾಧೀಕ್ಷಕರ ಕಛೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.
ಜಮೀನಿನ ಬೇಲಿ ವಿಷಯಕ್ಕೆ ಸಂಬಂಧಿಸಿದಂತೆ ವೀರಾಪುರ ಗ್ರಾಮದ ನಿವಾಸಿ ಸುನಿಲ್(೩೦) ಎಂಬಾತ ಮೇಲೆ ೧೦ ಜನರ ತಂಡ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿದೆ. ಹಲ್ಲೆ ಮಾಡಿರುವವರ ಪರವಾಗಿ ಶಾಸಕರ ಪುತ್ರರಾದ ಬಿ.ಎಸ್ ಬಸವೇಶ್, ಬಿ.ಎಸ್ ಗಣೇಶ್ ಹಾಗು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಕುಮಾರ್ ಬೆಂಬಲ ನೀಡಿದ್ದು ಹಲ್ಲೆಗೊಳಗಾದ ವ್ಯಕ್ತಿಗೆ ಪ್ರಾಣ ಬೆದರಿಕೆಯೊಡ್ಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಆಡಳಿತ ಏಕಪಕ್ಷೀಯವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಮುಖಂಡರುಗಳಾದ ಬಾಲಕೃಷ್ಣ, ಟಿ. ಚಂದ್ರೇಗೌಡ, ಎಂ.ಎ ಅಜಿತ್, ಸುರೇಶ್, ವೆಂಕಟೇಶ್, ಉಮೇಶ್, ಎ.ಟಿ ರವಿ, ಡಿ. ಆನಂದ, ಚಂದ್ರಣ್ಣ, ಕರೀಗೌಡ, ರಾಮಕೃಷ್ಣ ಮತ್ತು ಉಮೇಶ್(ವಕೀಲ) ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment