ಶ್ರೀಚೌಡೇಶ್ವರಿ ದೇವಾಲಯ ಪೂಜಾ ಸಮಿತಿ ಹಾಗು ಅನ್ನಪೂರ್ಣೇಶ್ವರಿ ಯುವಕರ ಸಂಘದ ಸಹಯೋಗದೊಂದಿಗೆ ಭದ್ರಾವತಿ ಕಾಗದನಗರ ಶ್ರೀಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ: ಶ್ರೀಚೌಡೇಶ್ವರಿ ದೇವಾಲಯ ಪೂಜಾ ಸಮಿತಿ ಹಾಗು ಅನ್ನಪೂರ್ಣೇಶ್ವರಿ ಯುವಕರ ಸಂಘದ ಸಹಯೋಗದೊಂದಿಗೆ ಕಾಗದನಗರ ಶ್ರೀಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಮುಂಜಾನೆಯಿಂದಲೇ ಧಾರ್ಮಿಕ ಆಚರಣೆಗಳು ಜರುಗಿದವು. ಉದ್ಯಮಿ ಬಿ.ಕೆ ಶಿವಕುಮಾರ್ ಸೇರಿದಂತೆ ಸಹಸ್ರಾರು ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು.
ಉತ್ಸವದ ಅಂಗವಾಗಿ ರಾತ್ರಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವಮುಖಂಡ ಬಿ.ಎಸ್ ಗಣೇಶ್, ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಸಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸದಸ್ಯರಾದ ವಿಜಯಮ್ಮ, ಚನ್ನಪ್ಪ, ಮಾಜಿ ಸದಸ್ಯರಾದ ಬದರಿ ನಾರಾಯಣ್, ಮಹೇಶ್, ಮೇರಿ, ಪ್ರವೀಣ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಕುಮಾರ್, ಮಣಿಶೇಖರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment