ಭದ್ರಾವತಿ: ಜೆ.ಎಸ್ ಫೈನ್ ಆರ್ಟ್ಸ್ ಅಕಾಡೆಮಿ ವತಿಯಿಂದ ತಮಿಳುನಾಡಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗ-ಭದ್ರಾವತಿ ಪುಷ್ಪಾಪರ್ಫಾರ್ಮಿಂಗ್ ಆರ್ಟ್ಸ್ಸೆಂಟರ್ ಭರತನಾಟ್ಯ ನೃತ್ಯ ಕಲಾವಿದರು ಭರತನಾಟ್ಯ ಪ್ರಸ್ತುತಪಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಭದ್ರಾವತಿ: ಜೆ.ಎಸ್ ಫೈನ್ ಆರ್ಟ್ಸ್ ಅಕಾಡೆಮಿ ವತಿಯಿಂದ ತಮಿಳುನಾಡಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗ-ಭದ್ರಾವತಿ ಭರತನಾಟ್ಯ ನೃತ್ಯ ಕಲಾವಿದರು ಭರತನಾಟ್ಯ ಪ್ರಸ್ತುತಪಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ತಮಿಳುನಾಡಿನ ವೆಲ್ಲೂರಿನ ಶ್ರೀ ಲಕ್ಷ್ಮೀನಾರಾಯಣಿ ಗೋಲ್ಡನ್ ಟೆಂಪಲ್ನಲ್ಲಿ ಜ.೧ರಂದು ಆಯೋಜಿಸಲಾಗಿದ್ದ ನೃತ್ಯ ವೈಭವ ಕಾರ್ಯಕ್ರಮದಲ್ಲಿ ಶಿವಮೊಗ್ಗ-ಭದ್ರಾವತಿ ಪುಷ್ಪಾಪರ್ಫಾರ್ಮಿಂಗ್ ಆರ್ಟ್ಸ್ಸೆಂಟರ್ ಭರತನಾಟ್ಯ ಕಲಾವಿದರು ತಮ್ಮ ಪ್ರತಿಭೆ ಅನಾವರಣಗೊಳಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ವಿದೂಷಿ ಪುಷ್ಪಾಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಈ ಕಲಾವಿದರು ಭರತನಾಟ್ಯ ತರಬೇತಿ ಪಡೆಯುತ್ತಿದ್ದಾರೆ. ಇವರನ್ನು ಪುಷ್ಪಾಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರ್ ಹಾಗು ವಿವಿಧ ಸಂಘ-ಸಂಸ್ಥೆಗಳು, ಭರತನಾಟ್ಯ ಕಲಾವಿದರು ಅಭಿನಂದಿಸಿದ್ದಾರೆ.
No comments:
Post a Comment