ಎಸ್.ಎನ್ ಶಿವಪ್ಪ
ಭದ್ರಾವತಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ, ನಗರದ ಎಸ್.ಎನ್ ಶಿವಪ್ಪ ಅವರನ್ನು ಶಿವಮೊಗ್ಗ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳ ಚುನಾವಣಾ ಕಮಿಟಿ(ಇ.ಸಿ ಮೆಂಬರ್) ಸದಸ್ಯರನ್ನಾಗಿ ನೇಮಕಗೊಳಿಸಲಾಗಿದೆ.
ಶಿವಪ್ಪ ಅವರಿಗೆ ಎರಡು ಲೋಕಸಭಾ ಕ್ಷೇತ್ರಗಳ ಚುನಾವಣಾ ಕಮಿಟಿ(ಇ.ಸಿ ಮೆಂಬರ್) ಸದಸ್ಯರನ್ನಾಗಿ ನೇಮಕಗೊಳಿಸಿದ್ದು, ಈ ಕುರಿತು ಜ.24ರಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಧರ್ಮಸೇನ ಅವರು ಆದೇಶ ಹೊರಡಿಸಿದ್ದಾರೆ.
ಶಿವಪ್ಪ ಅವರು ರಾಜಕೀಯ ಹೆಚ್ಚಿನ ಅನುಭವ ಹೊಂದಿದ್ದು, ಈ ಹಿಂದಿನ ಚುನಾವಣೆ ಸಂದರ್ಭದಲ್ಲಿ ಲೋಕಸಭಾ ಕ್ಷೇತ್ರಗಳ ವೀಕ್ಷಕರನ್ನಾಗಿ ನೇಮಕಗೊಳಿಸಲಾಗಿತ್ತು.
No comments:
Post a Comment