Sunday, January 7, 2024

ಅಪರಚಿತ ಶವ ಪತ್ತೆ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾದ ಬ್ಯಾಡಗಿ ಪೊಲೀಸರು

ಹಳೇನಗರ ಠಾಣೆ ಪೊಲೀಸರಿಂದ ಯುಡಿಆರ್ ದಾಖಲು, ಪತ್ನಿ, ಪುತ್ರನಿಂದಲೇ ಕೊಲೆ

ಮೌನೇಶಪ್ಪ
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಹೊಳೆಹೊನ್ನೂರು ರಸ್ತೆಯ ಹಳೇಸೀಗೆಬಾಗಿ ಈಶ್ವರ ದೇವಸ್ಥಾನದ ಬಳಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯೊಬ್ಬರ ಮೃತ ದೇಹವೊಂದರ ಪ್ರಕರಣ ಬೇಧಿಸುವಲ್ಲಿ ಬ್ಯಾಡಗಿ ಪೊಲೀಸರು ಯಶಸ್ವಿಯಾಗಿದ್ದು, ಅಪರಿಚಿತ ವ್ಯಕ್ತಿಯನ್ನು ಆತನ ಪತ್ನಿ ಹಾಗು ಪುತ್ರ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.
    ಸೊರಬ ತಾಲೂಕಿನ ಯಲವಾಲ ಗ್ರಾಮದ ನಿವಾಸಿ ಮೌನೇಶಪ್ಪ(೫೦) ಎಂಬುವರ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಹಳೇನಗರ ಠಾಣೆ ಪೊಲೀಸರು ಅಪರಚಿತ ಮೃತದೇಹದ ಯುಡಿಆರ್ ದಾಖಸಿಕೊಂಡಿದ್ದರು. ಈ ನಡುವೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಮೌನೇಶಪ್ಪ ಕಾಣೆಯಾಗಿರುವ ಕುರಿತು ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ತನಿಖೆ ಕೈಗೊಂಡಿದ್ದ ಪೊಲೀಸರು ಪ್ರಕರಣ ಬೇಧಿಸುವ ಮೂಲಕ ಪತ್ನಿ ಮಂಜುಳ, ಪುತ್ರ ಶಂಭು ಹಾಗು ಕೃತ್ಯಕ್ಕೆ ಸಹಕರಿಸಿದ ಶಿವರಾಜ್ ಎಂಬುವರನ್ನು ಬಂಧಿಸಿದ್ದಾರೆ.
    ಪ್ರಕರಣ ವಿವರ :
    ಮೌನೇಶಪ್ಪ ಎರಡು ಮದುವೆಯಾಗಿದ್ದರು. ಮೊದಲನೇ ಪತ್ನಿ ಮಂಜುಳಾರವರ ಜೊತೆಗಿದ್ದ ಮೌನೇಶಪ್ಪ ಬ್ಯಾಡಗಿ ತಾಲೂಕಿನ ಮಸಣಗಿಯಲ್ಲಿ ವಾಸವಾಗಿದ್ದರು. ಎರಡನೇ ಪತ್ನಿಗೆ ಎರಡು ಮಕ್ಕಳು ಮತ್ತು ಮೊದಲನೇ ಹೆಂಡತಿ ಮಂಜುಳಾರಿಗೆ ಶಂಭು ಎಂಬ ಮಗನಿದ್ದನು.
    ಪತ್ನಿ ಮಂಜುಳ ಮತ್ತು ಮೌನೇಶಪ್ಪ ನಡುವೆ ಜಗಳ ನಡೆಯುತ್ತಿತ್ತು ಎಂದು ದೂರಿನಲ್ಲಿ ದಾಖಲಾಗಿದೆ. ಮೌನೇಶಪ್ಪ ಜಗಳವಾದಾಗ ಮನೆಬಿಟ್ಟು ಹೋಗುವುದು ಮತ್ತು ವಾಪಾಸಾಗುವುದು ಮಾಮೂಲಿಯಾಗಿತ್ತು. ಜಗಳ ಕುರಿತು ಮೌನೇಶಪ್ಪ ತನ್ನ ಅಳಿಯ ರಾಜಶೇಖರ್ ಮಲ್ಲಪ್ಪ ಕಬ್ಬೂರು ಬಳಿ ಹೇಳಿಕೊಂಡಿದ್ದರು.
    ಮನೆ ಬಿಟ್ಟು ಹೋಗಿದ್ದ ಮೌನೇಶಪ್ಪ ಬಹಳ ದಿನಗಳವರೆಗೆ ಹಿಂದಿರುಗಿ ಮನೆಗೆ ಬಾರದ ಹಿನ್ನಲೆಯಲ್ಲಿ ಅಳಿಯ ರಾಜಶೇಖರ್ ಮತ್ತೋರ್ವ ಮಾವನಿಗೆ ಕರೆ ಮಾಡಿ ಕೇಳಿದಾಗ ಮಂಜುಳಮ್ಮ ಏರು ಧ್ವನಿಯಲ್ಲಿ ಪದೇ ಪದೇ ಕರೆ ಮಾಡಬೇಡಿ ಎಂದು ತಿಳಿಸಿರುತ್ತಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಅನುಮಾನಗೊಂಡ ರಾಜಶೇಖರ್ ದೂರು ದಾಖಲಿಸಿದ್ದು, ಈ ದೂರಿನ ಅನ್ವಯ ಬ್ಯಾಡಗಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.
    ಯುಡಿಆರ್ ದಾಖಲಿಸಿಕೊಂಡಿದ್ದ ಹಳೇನಗರ ಠಾಣೆ ಪೊಲೀಸರು ಪ್ರಕರಣ ಬೇಧಿಸಲು ನೆರವಾಗಿದ್ದಾರೆ.  ಪತ್ನಿ ಮಂಜುಳ ಹಾಗು ಪುತ್ರ ಶಂಭು ಇಬ್ಬರ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೌನೇಶಪ್ಪ ಕೊಲೆಯಾಗಿರುವುದು ತಿಳಿದುಬಂದಿದ್ದು, ಈ ಸಂಬಂಧ ಮಂಜುಳ, ಶಂಭು ಹಾಗು ಕೃತ್ಯಕ್ಕೆ ಸಹಕರಿಸಿದ ಶಿವರಾಜ್ ಒಟ್ಟು ೩ ಜನರನ್ನು ಬಂಧಿಸಿರುವುದು ತಿಳಿದು ಬಂದಿದೆ.

No comments:

Post a Comment