ಭದ್ರಾವತಿ : ಅಡಕೆ ಕಾಯಿ ತುಂಬಿದ ಬುಲೇರೊ ಪಿಕಪ್ ವಾಹನ ಪಲ್ಟಿಯಾಗಿ ಬಿದ್ದು ೩ ಜನ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ತಾಲೂಕಿನ ಹೊಳೆಹೊನ್ನೂರು ಪಟ್ಟಣ ಸಮೀಪದ ಚಂದನಕೆರೆಯ ನಿವಾಸಿಗಳಾದ ನಾಗರಾಜ (೪೭) ಮಂಜುನಾಥ (೪೦) ಗೌತಮ್ (೧೮) ಮೃತರು.
ಶಿಕಾರಿಪುರ ಸಮೀಪದ ಅರಿಶಿನಗೆರೆಯ ಅಡಿಕೆ ತೋಟದಲ್ಲಿ ಅಡಕೆ ಕೊಯ್ಲು ಮುಗಿಸಿಕೊಂಡು ಚಂದನಕೆರೆಗೆ ವಾಪ್ಪಾಸಾಗುವಾಗ ಚಿನ್ನಿಕಟ್ಟೆ ಜೋಗದ ಬಳಿ ಶನಿವಾರ ಸಂಜೆ ಕಾಯಿ ತುಂಬಿದ ಬುಲೇರೊ ವಾಹನಕ್ಕೆ ಆಕಳೊಂದು ಅಡ್ಡ ಬಂದಿದೆ ಆಕಳು ತಪ್ಪಿಸುವ ಭರದಲ್ಲಿ ವಾಹನದ ಟೈಯರ್ ಹೊಡೆದು ಹೋಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆಯಲ್ಲಿ ಪಲ್ಟಿಯಾಗಿದೆ.
ಅಡಕೆ ಕೆಲಸಕ್ಕೆಂದು ಹೋದ ಮಂಜುನಾಥ್, ನಾಗರಾಜ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ ಗೌತಮ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ೭ ಜನ ಅಡಕೆ ತೋಟಕ್ಕೆ ಕಾಯಿ ತರಲು ಹೋಗಿದ್ದರು. ಬುಲೆರೊದ ಒಳಗೆ ಕುಳಿತಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಮನೆ ಮುಂಭಾಗ ಮೃತ ಸಂಬಂದಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಶವಗಳ ಅಂತಿಮ ದರ್ಶನಕ್ಕೆ ಹೋದ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರಿಂದ ಗ್ರಾಮದಲ್ಲಿ ಜನ ಗಂಜುಳಿಯಿಂದ ತುಂಬಿಹೋಯಿತ್ತು.
No comments:
Post a Comment