ಎನ್. ಗಣೇಶ್ ರಾವ್ ಸಿಂಧ್ಯಾ
ಭದ್ರಾವತಿ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಹಿರಿಯ ಪತ್ರಕರ್ತ ಹಾಗೂ 48 ವರ್ಷಗಳಿಂದ ನಿರಂತರವಾಗಿ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್. ಗಣೇಶ್ ರಾವ್ ಸಿಂಧ್ಯಾ(75) ರವರು ಭಾನುವಾರ ಬೆಳಿಗ್ಗೆ ನಿಧನರಾದರು. ಪತ್ನಿ ಯಲ್ಲೂಬಾಯಿ, ಪತ್ರಕರ್ತ ಜಿ. ಸುಭಾಷ್ ರಾವ್ ಸಿಂಧ್ಯಾ, ತೇಜಸ್ ಪ್ರಿಂಟರ್ಸ್ ಮಾಲೀಕ ನವೀನ್ ಮತ್ತು ಪ್ರವೀಣ್ ಸೇರಿದಂತೆ ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಮೊಮ್ಮಕ್ಕಳಿದ್ದಾರೆ.
ಮೃತರ ಅಂತ್ಯಕ್ರಿಯೆ ನಗರದ ಹೊಳೆಹೊನ್ನೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ಭಾನುವಾರ ಸಂಜೆ ನೆರವೇರಿತು.
ಗಣೇಶ್ ರಾವ್ ಸಿಂಧ್ಯಾ ರವರು ಸ್ಥಳೀಯ ಮಟ್ಟದಲ್ಲಿ ಕನ್ನಡ ದಿನಪತ್ರಿಕೆ ಆರಂಭಿಸಿ ಅದರ ಸಂಪಾದಕರಾಗುವ ಜೊತೆಗೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಪತ್ರಿಕಾ ಭವನ ಟ್ರಸ್ಟ್ ನಿರ್ದೇಶಕರಾಗಿದ್ದರು.
ಇದರೊಂದಿಗೆ ನಗರದ ರೈಲ್ವೆ ನಿಲ್ದಾಣ ರಸ್ತೆಯ ನಾಗರಾಜ್ ಪ್ರಿಂಟರ್ಸ್ ಮಾಲೀಕರಾಗಿ ಮುದ್ರಣ ಮಾಲೀಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತಾಪ: ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಛತ್ರಪತಿ ಶಿವಾಜಿ ಕ್ಷತ್ರಿಯ ಮರಾಠ ಸೇವಾ ಸಂಘ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯಾ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment