Thursday, January 4, 2024

ಸರ್ಕಾರಿ ಶಾಲೆಯ ಶೌಚಾಲಯ ಸ್ವಚ್ಛತೆಗೆ ದಲಿತ ವಿದ್ಯಾರ್ಥಿಗಳ ದುರ್ಬಳಕೆ

ಸೂಕ್ತ ಕ್ರಮಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಆಗ್ರಹ

ಭದ್ರಾವತಿ ತಾಲೂಕಿನ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಅತ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛಗೊಳಿಸಲು ದುರ್ಬಳಕೆ ಮಾಡಿಕೊಂಡು ಶಾಲೆಯ ಮುಖ್ಯೋಪಾಧ್ಯಾಯ ಹಾಗು ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸಿ ಪರಿಶಿಷ್ಟ ಜಾತಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಶಿಕ್ಷೆ ವಿಧಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆ ಆಗ್ರಹಿಸಿ ದೂರು ಸಲ್ಲಿಸಿದೆ.
    ಭದ್ರಾವತಿ : ತಾಲೂಕಿನ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಅತ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛಗೊಳಿಸಲು ದುರ್ಬಳಕೆ ಮಾಡಿಕೊಂಡು ಶಾಲೆಯ ಮುಖ್ಯೋಪಾಧ್ಯಾಯ ಹಾಗು ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸಿ ಪರಿಶಿಷ್ಟ ಜಾತಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಶಿಕ್ಷೆ ವಿಧಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆ ಆಗ್ರಹಿಸಿದೆ.
    ಶಾಲೆಯಲ್ಲಿ ೧ ರಿಂದ ೭ನೇ ತರಗತಿವರೆಗೆ ಪರಿಶಿಷ್ಟ ಜಾತಿ ದಲಿತ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈ ವಿದ್ಯಾರ್ಥಿಗಳನ್ನು ದುರ್ಬಳಕೆ ಮಾಡಿಕೊಂಡು ಶಾಲೆಯ ಮುಖ್ಯೋಪಾಧ್ಯಾಯ ಶಂಕರಪ್ಪ ಮತ್ತು ಸಿಬ್ಬಂದಿಗಳು ಶೌಚಾಲಯ ಸ್ವಚ್ಛಗೊಳಿಸಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಪ್ರಜ್ಞಾವಂತ ಶಿಕ್ಷಕರು ಈ ಕೃತ್ಯವೆಸಗುವ ಮೂಲಕ ದಲಿತ ಸಮುದಾಯಕ್ಕೆ ಅವಮಾನಗೊಳಿಸಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಮಿತಿ ವತಿಯಿಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ಗೋಪಾಲಪ್ಪ ಹಾಗು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.
    ಸಮಿತಿ ತಾಲೂಕು ಪ್ರಧಾನ ಸಂಚಾಲಕ ಎಸ್. ಪುಟ್ಟರಾಜು, ಜಿಲ್ಲಾ ಸಂಘಟನಾ ಸಂಚಾಲಕ ಆರ್. ಹರೀಶ್, ಜಿಲ್ಲಾ ಸಂಚಾಲಕ ಎಸ್. ಗೋವಿಂದರಾಜು, ತಾಲೂಕು ವಿದ್ಯಾರ್ಥಿ ಒಕ್ಕೂಟದ ಟಿ. ಮಹೇಶ್ ಕುಮಾರ್(ಅತ್ತಿಗುಂದ), ಎಚ್.ಎಲ್ ಅಣ್ಣಪ್ಪ, ಮಂಜಣ್ಣ, ಸಂತೋಷ್, ಡಿ. ನರಸಿಂಹಮೂರ್ತಿ, ನವೀನ್, ರಾಜು, ವರದರಾಜು, ಷಣ್ಮುಗಂ, ಜಯಪ್ಪ, ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment