Friday, January 19, 2024

ವಿಐಎಸ್‌ಎಲ್ ೧೦೬ನೇ ಸಂಸ್ಥಾಪಕರ ದಿನಾಚರಣೆ : ಸರ್.ಎಂ.ವಿ ಪ್ರತಿಮೆಗೆ ಮಾಲಾರ್ಪಣೆ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೬ನೇ ಸ್ಥಾಪನೆ ವರ್ಷದ ಅಂಗವಾಗಿ ಅತ್ಯುತ್ತಮ ಇಂಜಿನಿಯರ್, ರಾಜನೀತಿಜ್ಞ ಸರ್. ಮೋಕ್ಷ ಗುಂಡಂ ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಖಾನೆ ವತಿಯಿಂದ ಗೌರವ ಸಲ್ಲಿಸಲಾಯಿತು.
    ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೬ನೇ ಸ್ಥಾಪನೆ ವರ್ಷದ ಅಂಗವಾಗಿ ಅತ್ಯುತ್ತಮ ಇಂಜಿನಿಯರ್, ರಾಜನೀತಿಜ್ಞ ಸರ್. ಮೋಕ್ಷ ಗುಂಡಂ ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಖಾನೆ ವತಿಯಿಂದ ಗೌರವ ಸಲ್ಲಿಸಲಾಯಿತು.
    ಕಾರ್ಖಾನೆ ಆವರಣದಲ್ಲಿರುವ ಪ್ರತಿಮೆಗೆ ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕ ಕೆ.ಎಸ್ ಸುರೇಶ್ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಲಾಯಿತು.  
    ಕಾರ್ಮಿಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ, ಪ್ರಭಾರಿ ಅಧ್ಯಕ್ಷ ಎಂ.ಎಲ್ ಯೋಗೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಮಿಶ್ರ, ಉಪಪ್ರಬಂಧಕ(ಸಿಬ್ಬಂದಿ) ಕೆ.ಎಸ್ ಶೋಭ ಸೇರಿದಂತೆ ಕಾರ್ಖಾನೆ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು.

No comments:

Post a Comment