Friday, September 27, 2024

ಉಕ್ಕಿನ ನಗರದ ವಿವಿಧ ಕ್ಷೇತ್ರಗಳ ಗಣ್ಯರಿಗೆ ಡಾ. ವಿಷ್ಣುವರ್ಧನ್ ರಾಜ್ಯ ಪ್ರಶಸ್ತಿ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು ಮತ್ತು ಬೆಂಗಳೂರಿನ ನಿಸರ್ಗ ಚಾರಿಟೇಬಲ್ ಟ್ರಸ್ಟ್, ನಿರಾಶ್ರಿತರ ವೃದ್ಧಾಶ್ರಮ ಹಾಗೂ ಮೈಸೂರು ಶ್ರೀ ಅನಂತೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನ, ಹೂಟಗಳ್ಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ. ವಿಷ್ಣುವರ್ಧನ್‌ರವರ ೭೪ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ನಗರದ ವಿವಿಧ ಕ್ಷೇತ್ರಗಳ ಗಣ್ಯರಿಗೆ ಡಾ. ವಿಷ್ಣುವರ್ಧನ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 
    ಭದ್ರಾವತಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು ಮತ್ತು ಬೆಂಗಳೂರಿನ ನಿಸರ್ಗ ಚಾರಿಟೇಬಲ್ ಟ್ರಸ್ಟ್, ನಿರಾಶ್ರಿತರ ವೃದ್ಧಾಶ್ರಮ ಹಾಗೂ ಮೈಸೂರು ಶ್ರೀ ಅನಂತೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನ, ಹೂಟಗಳ್ಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ. ವಿಷ್ಣುವರ್ಧನ್‌ರವರ ೭೪ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ನಗರದ ವಿವಿಧ ಕ್ಷೇತ್ರಗಳ ಗಣ್ಯರಿಗೆ ಡಾ. ವಿಷ್ಣುವರ್ಧನ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 
    ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ನೌಕರ, ಹಿರಿಯ ರಂಗಭೂಮಿ ಕಲಾವಿದ ವೈ.ಕೆ ಹನುಮಂತಯ್ಯ, ಹಲವಾರು ವರ್ಷಗಳಿಂದ ರೈಫಲ್ ಅಸೋಸಿಯೇಷನ್ (ಸಿಆರ್‌ಟಿಸಿ) ಮೂಲಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಎಂ.ಎಸ್ ರವಿ, ಅಡುಗೆ ಅನಿಲ ವಿತರಕರಾಗಿ ಕರ್ತವ್ಯ ಸಲ್ಲಿಸುವ ಜೊತೆಗೆ ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಸೆಲ್ವರಾಜ್ ಹಾಗು ಉದ್ಯಮಿ ಹಾಗು ಸಮಾಜ ಸೇವಕ ಜಿ.ಎನ್ ಸತ್ಯಮೂರ್ತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 
    ಪ್ರಶಸ್ತಿ ಪಡೆದುಕೊಂಡಿರುವ ಗಣ್ಯರಿಗೆ ನಗರದ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗು ಜನಪ್ರತಿನಿಧಿಗಳು ಅಭಿನಂದಿಸಿದ್ದಾರೆ.

No comments:

Post a Comment