Wednesday, September 25, 2024

ಬಿಜೆಪಿ ಒಬಿಸಿ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನ

ಭದ್ರಾವತಿ ತಾಲೂಕು ಬಿಜೆಪಿ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಅಪ್ರತಿಮ ಸಂಘಟಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನ ಆಚರಿಸಲಾಯಿತು. 
    ಭದ್ರಾವತಿ: ತಾಲೂಕು ಬಿಜೆಪಿ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಅಪ್ರತಿಮ ಸಂಘಟಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನ ಆಚರಿಸಲಾಯಿತು. 
    ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸುವ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನ ಸಭೆ ನಡೆಸಲಾಯಿತು. ಮಂಡಲ ಒಬಿಸಿ ಅಧ್ಯಕ್ಷ ರಾಜಶೇಖರ್ ಉಪ್ಪಾರ ಅಧ್ಯಕ್ಷತೆ ವಹಿಸಿದ್ದರು.
    ಮಂಡಲ ಅಧ್ಯಕ್ಷರಾದ ಧರ್ಮ ಪ್ರಸಾದ್ ಅವರು ಮಾತನಾಡಿ ದೀನ್ ದಯಾಳ್ ಉಪಾಧ್ಯಾಯ ಅವರ ಮಹತ್ವದ ಸಂದೇಶಗಳಾದ ಏಕಾತ್ಮ ಮಾನವದರ್ಶನ, ಅಂತ್ಯೋದಯದ ಅದ್ಭುತ ಪರಿಕಲ್ಪನೆ, ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸಮಸ್ತ ಎಂಬ ತತ್ವಗಳ ದೃಷ್ಟಿಕೋನವನ್ನು ಬೆಳೆಸಿಕೊಂಡು ಈ ತತ್ವಗಳನ್ನು ಉಸಿರಾಗಿಸಿಕೊಂಡ ಮಹಾತ್ಮರಿಗೆ ನಮಿಸಿದರು.   
    ಒಬಿಸಿ ಜಿಲ್ಲಾಧ್ಯಕ್ಷ ಎಂ.ಎನ್ ಸುಧಾಕರ್, ಅಭಿಯಾನದ ಜಿಲ್ಲಾ ಪ್ರಭಾರಿ ಭವಾನಿರಾವ್ ಮೋರೆ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತ ಗರಿಷ್ಠ ೧೦೦ ಸದಸ್ಯತ್ವದ ಗುರಿ ಹೊಂದಬೇಕೆಂದು ವಿನಂತಿಸಿಕೊಂಡರು. 
    ಜಿಲ್ಲಾ ಒಬಿಸಿ ಉಪಾಧ್ಯಕ್ಷ ಪ್ರದೀಪ್ ಹೊನ್ನಪ್ಪ, ಕೆ.ಎನ್ ವಿಕಾಸ್, ಎಂ. ಪ್ರಭಾಕರ್, ಎನ್. ರಂಗನಾಥ್ ಹಾಗು ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

No comments:

Post a Comment