Saturday, September 28, 2024

೧೮೬೧ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ

ಭದ್ರಾವತಿ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದ ಏಕದಂತ ಕಲ್ಯಾಣ ಮಂಟದಲ್ಲಿ ೧೮೬೧ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ ನೀಡಲಾಯಿತು. 
    ಭದ್ರಾವತಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮತ್ತು ಮದ್ಯವರ್ಜನ ವ್ಯವಸ್ಥಾಪನ ಸಮಿತಿ, ಜನ್ನಾಪುರ ಹಾಗೂ ಸ್ಥಳಿಯ ಸಂಘ-ಸಂಸ್ಥೆಗಳ ಸಹಾಕಾರದೊಂದಿಗೆ ೧೮೬೧ನೇ ಮದ್ಯವರ್ಜನ ಶಿಬಿರ ಅ.೩ರ ವರೆಗೆ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದ ಏಕದಂತ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದು, ಹಲವು ಮಂದಿ ಶಿಬಿರದಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. 
    ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕಾರತರಾಜು ಅಧ್ಯಕ್ಷತೆಯಲ್ಲಿ ಶಿಬಿರಕ್ಕೆ ಚಾಲನೆ ನೀಡಲಾಗಿದ್ದು, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ನಗರಸಭಾ ಸದಸ್ಯರಾದ ಲತಾಚಂದ್ರಶೇಖರ್, ಸವಿತಾ ಉಮೇಶ್, ಜಿಲ್ಲಾ ಜನ ಜಾಗೃತಿ ವೇದಿಕೆ  ಉಪಾಧ್ಯಕ್ಷ ಪಾಲಾಕ್ಷಪ್ಪ, ಸದಸ್ಯರಾದ ಆರ್. ಕರುಣಾಮೂರ್ತಿ, ಜಯರಾಂ ಗೊಂದಿ, ಯೋಜನಾಧಿಕಾರಿ ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಮೇಲ್ವಿಚಾರಕರು ಮತ್ತು ಸೇವಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು. 
    ಶಿಬಿರದ ಸಮಾರೋಪ ಸಮಾರಂಭ ಅ.೩ರಂದು ಮಧ್ಯಾಹ್ನ ೧೨ ಗಂಟೆಗೆ ನಡೆಯಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸಮಾರಂಭ ಉದ್ಘಾಟಿಸುವರು. ತಹಸೀಲ್ದಾರ್ ಕೆ.ಆರ್ ನಾಗರಾಜು, ಬೆಳ್ತಂಗಡಿ ಜನಜಾಗೃತಿ ವೇದಿಕೆ ಕೇಂದ್ರ ಕಛೇರಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಮೂ ಕೊರವಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 

No comments:

Post a Comment