ಎಸ್.ಆರ್ ನಾಗರಾಜ್
ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ನಗರ ಘಟಕದ ಹಂಗಾಮಿ ಅಧ್ಯಕ್ಷರಾಗಿ ಎಸ್.ಆರ್ ನಾಗರಾಜ್ ಅವರನ್ನು ರಾಜ್ಯಾಧ್ಯಕ್ಷರ ನಿರ್ದೇಶನದ ಮೇರೆಗೆ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಹಂಗಾಮಿ ಅಧ್ಯಕ್ಷರ ಆಯ್ಕೆ ಸಂಬಂಧ ಸಿದ್ದಲಿಂಗಯ್ಯ ನೇತೃತ್ವದಲ್ಲಿ ಸಭೆ ನಡೆದಿದ್ದು, ಎಸ್.ಆರ್ ನಾಗರಾಜ್ ಆಯ್ಕೆಯಾಗಿದ್ದಾರೆ. ಸುಮಾರು ೨೫ ಸದಸ್ಯರು ಅಧ್ಯಕ್ಷರ ಆಯ್ಕೆ ಅನುಮೋದಿಸಿದ್ದು, ಈ ನಡುವೆ ಸಿದ್ದಲಿಂಗಯ್ಯ ಸೇರಿದಂತೆ ಪದಾಧಿಕಾರಿಗಳು ಹಂಗಾಮಿ ಅಧ್ಯಕ್ಷರನ್ನು ಅಭಿನಂದಿಸಿದ್ದಾರೆ.
No comments:
Post a Comment