Friday, October 18, 2024

ಅ.೧೯ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ: ಮೆಸ್ಕಾಂ ನಗರ ಮತ್ತು ಗ್ರಾಮೀಣ ಉಪವಿಭಾಗಗಳ ವಾಪ್ತಿಯ ಮಾರ್ಗಗಳ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಅ.೧೯ರ ಶನಿವಾರ ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.  
    ಕಾಗದ ನಗರದ ೧ನೇ ವಾರ್ಡ್ ನಿಂದ ೧೦ನೇ ವಾರ್ಡ್‌ವರೆಗೆ ಎಂ.ಪಿ.ಎಂ. ವಸತಿ, ಎಂ.ಪಿ.ಎಂ ಬಡಾವಣೆ, ಆನೆಕೊಪ್ಪ, ಜೆಪಿಎಸ್ ಕಾಲೋನಿ, ಉಜ್ಜನಿಪುರ, ದೊಡ್ಡಗೊಪ್ಪೇನಹಳ್ಳಿ, ಬಾರಂದೂರು, ಮಸರಹಳ್ಳಿ, ಕಾರೇಹಳ್ಳಿ, ಹಡ್ಲಘಟ್ಟ, ಶಿವಪುರ, ಕೆಂಚೇನಹಳ್ಳಿ, ಮಾವಿನಕೆರೆ, ಮಾವಿನಿಕೆರೆ ಕಾಲೋನಿ, ಭೋವಿ ಕಾಲೋನಿ, ಗಂಗೂರು, ದೊಡ್ಡೇರಿ, ಉಕ್ಕುಂದ, ಕೆಂಚಮ್ಮನಹಳ್ಳಿ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.  ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ. 

No comments:

Post a Comment