Sunday, October 20, 2024

ಅಲ್ ಇಂಡಿಯಾ ಮೊದಲಿಯಾರ್ ಸಂಘದ ಅಧ್ಯಕ್ಷರಾಗಿ ನಗರದ ಹಿರಿಯ ಪತ್ರಕರ್ತ ಕಣ್ಣಪ್ಪ

ಕಣ್ಣಪ್ಪ 
    ಭದ್ರಾವತಿ: ಅಲ್ ಇಂಡಿಯಾ ಮೊದಲಿಯಾರ್ ಸಂಘದ ಅಧ್ಯಕ್ಷರಾಗಿ ನಗರದ ಹಿರಿಯ ಪತ್ರಕರ್ತ ಕಣ್ಣಪ್ಪ ಭಾನುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ಬೆಂಗಳೂರಿನ ಕರ್ನಾಟಕ ಬಿಲ್ಡರ್‍ಸ್ ಕ್ಲಬ್‌ನಲ್ಲಿ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪದೇಶ, ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಸಂಘದ ಪ್ರತಿನಿಧಿಗಳಿಂದ ೩ ವರ್ಷಗಳ ಅವಧಿಗೆ ಆಯ್ಕೆಯಾದರು. 
    ತಮಿಳುನಾಡಿನ ಪ್ರಸಿದ್ದ ವೈದ್ಯ ರಾಜ್‌ಕುಮಾರ್ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ದೇಶದ ವಿವಿಧೆಡೆಗಳಿಂದ ಆಲ್ ಇಂಡಿಯಾ ಮೊದಲಿಯಾರ್ ಸಂಘ ಪ್ರತಿನಿಧಿಸುವ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. 
    ಕಣ್ಣಪ್ಪರವರು ತಾಲೂಕು ತಮಿಳು ಸಂಘ ಹಾಗು ಮೊದಲಿಯಾರ್ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ತಾಲೂಕು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾಗಿ, ಲಾರಿ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮೊದಲಿಯಾರ್ ಸಂಘದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 
    ಇವರಿಗೆ ಶಾಸಕ ಬಿ.ಕೆ ಸಂಗಮೇಶ್ವರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಪತ್ರಿಕಾ ಭವನ ಟ್ರಸ್ಟ್, ತಾಲೂಕು ಮೊದಲಿಯಾರ್ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಅಭಿನಂದನೆ ಸಲ್ಲಿಸಿವೆ. 

No comments:

Post a Comment