Monday, October 21, 2024

ಶ್ರೀ ಅಂಗಾಳ ಪರಮೇಶ್ವರಿ, ಮುನೇಶ್ವರ ಸ್ವಾಮಿ ವಿಗ್ರಹಗಳ ಪ್ರತಿಷ್ಠಾಪನೆ

ಭದ್ರಾವತಿ ನಗರದ ಜನ್ನಾಪುರ ಗಣೇಶ್ ಕಾಲೋನಿ, ಹಾಲಪ್ಪ ಶೆಡ್‌ನಲ್ಲಿ ಶ್ರೀ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ಅಮ್ಮನವರ ಹಾಗು ಮುನೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ ಸೋಮವಾರ ವಿಜೃಂಭಣೆಯಿಂದ ಜರುಗಿತು.  
    ಭದ್ರಾವತಿ: ನಗರದ ಜನ್ನಾಪುರ ಗಣೇಶ್ ಕಾಲೋನಿ, ಹಾಲಪ್ಪ ಶೆಡ್‌ನಲ್ಲಿ ಶ್ರೀ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ಅಮ್ಮನವರ ಹಾಗು ಮುನೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ ಸೋಮವಾರ ವಿಜೃಂಭಣೆಯಿಂದ ಜರುಗಿತು.  
ಬೆಳಗಿನ ಜಾವ ಗಣಹೋಮ, ಆದಿವಾಸಿ ಹೋಮ, ಕಲಾ ಹೋಮ ನಡೆಯಲಿದ್ದು, ನಂತರ ಮಲ್ಲೇಶ್ವರ ಸಭಾಭವನ ಪಕ್ಕದ ಶ್ರೀ ಈಶ್ವರ ದೇವಾಲಯದಿಂದ ಗಂಗೆ ಪೂಜೆಯನ್ನು ೧೦೧ ಗಂಗೆ ತುಂಬಿದ ಕಲಶಗಳನ್ನು ಹೊತ್ತು ತಂದು ಅಮ್ಮನವರ ಹಾಗು ಮುನೇಶ್ವರ ಸ್ವಾಮಿಯವರ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ನಂತರ ಕಲಶದ ನೀರಿನಿಂದ ಅಭಿಷೇಕ ನಡೆಸಲಾಯಿತು.  ಅಮ್ಮನವರಿಗೂ ಹಾಗು ಮುನೇಶ್ವರ ಸ್ವಾಮಿಯವರಿಗೂ ಅಲಂಕಾರ ಮಾಡಿ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗದೊಂದಿಗೆ ದೇವಾಲಯ ಲೋಕಾರ್ಪಣೆಗೊಳಿಸಲಾಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು. 
ಕ್ರೇನ್ ಮೂಲಕ ಬೃಹತ್ ಹೂವಿನ ಹಾರ ಅರ್ಪಣೆ :
ವಿಗ್ರಹ ಪ್ರತಿಷ್ಠಾಪನೆ ನಂತರ ಬೃಹತ್ ಹೂವಿನ ಹಾರ ವ್ಯಾದಗಳೊಂದಿಗೆ ಕ್ರೇನ್ ಮೂಲಕ ಮೆರವಣಿಗೆಯಲ್ಲಿ ತಂದು ಅಮ್ಮನವರಿಗೆ ಮತ್ತು ಮುನೇಶ್ವರ ಸ್ವಾಮಿಯವರಿಗೆ ಅರ್ಪಿಸಲಾಯಿತು. ಮೆರವಣಿಗೆಯಲ್ಲಿ ವಯೋವೃದ್ಧರು, ಮಹಿಳೆಯರು, ಯುವಕರು, ಯುವತಿಯರು, ಮಕ್ಕಳು ಕುಣಿದು ಸಂಭ್ರಮಿಸಿದರು. 
ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನದ ಪ್ರಮುಖರಾದ ಅಧ್ಯಕ್ಷ ವಿಕಾಸ್ ರಾಜ್, ಖಜಾಂಚಿ ಮೋಹನ್ ಕುಮಾರ್, ಕಾರ್ಯದರ್ಶಿ ಆಕಾಶ್, ಸಾಗರ್, ಕೇಶವ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಜನ್ನಾಪುರ, ಗಣೇಶ್ ಕಾಲೋನಿ, ಹಾಲಪ್ಪ ಶೆಡ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.  
 

ಭದ್ರಾವತಿ ನಗರದ ಜನ್ನಾಪುರ ಗಣೇಶ್ ಕಾಲೋನಿ, ಹಾಲಪ್ಪ ಶೆಡ್‌ನಲ್ಲಿ ಶ್ರೀ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ಅಮ್ಮನವರ ಹಾಗು ಮುನೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ ಸೋಮವಾರ ವಿಜೃಂಭಣೆಯಿಂದ ಜರುಗಿತು.  ವಿಗ್ರಹ ಪ್ರತಿಷ್ಠಾಪನೆ ನಂತರ ಬೃಹತ್ ಹೂವಿನ ಹಾರ ವ್ಯಾದಗಳೊಂದಿಗೆ ಕ್ರೇನ್ ಮೂಲಕ ಮೆರವಣಿಗೆಯಲ್ಲಿ ತಂದು ಅಮ್ಮನವರಿಗೆ ಮತ್ತು ಮುನೇಶ್ವರ ಸ್ವಾಮಿಯವರಿಗೆ ಅರ್ಪಿಸಲಾಯಿತು.

No comments:

Post a Comment