Monday, October 14, 2024

೨ನೇ ಹಂತದ ಕಾಮಗಾರಿಗೆ ಸಂಸದರ ನಿಧಿಯಿಂದ ೩೦ ಲಕ್ಷ ರು. ಅನುದಾನ : ಬಿವೈಆರ್

ಭದ್ರಾವತಿ ಹಳೇನಗರದ ವೀರಶೈವ ಸೇವಾ ಸಮಿತಿವತಿಯಿಂದ ಶ್ರೀ ಬನಶಂಕರಿ ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದುರ್ಗಾಸಪ್ತಶತಿ ಪಾರಾಯಣ ಹೋಮ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ ಪಾಲ್ಗೊಂಡಿದ್ದರು. 
    ಭದ್ರಾವತಿ : ಹಳೆನಗರದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದ ಶ್ರೀಮಾತಾ ಬನಶಂಕರಿ ದೇವಿ ಸಭಾಂಗಣದ ೨ನೇ ಹಂತದ ಕಾಮಗಾರಿಗೆ ಮುಂದಿನ ದಿನಗಳಲ್ಲಿ ೫೦ ಲಕ್ಷ ರು. ಸಂಸದರ ಅನುದಾನದಿಂದ ನೀಡಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ಭರವಸೆ ನೀಡಿದರು. 
    ಅವರು ಹಳೇ ನಗರದ ವೀರಶೈವ ಸೇವಾ ಸಮಿತಿವತಿಯಿಂದ  ಶ್ರೀ ಬನಶಂಕರಿ ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದುರ್ಗಾಸಪ್ತಶತಿ ಪಾರಾಯಣ ಹೋಮ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಶ್ರೀ ವೀರಭದ್ರೇಶ್ವರಿ ಸ್ವಾಮಿ ಸಮುದಾಯ ಭವನ ಸುಸಜ್ಜಿತವಾಗಿ ನಿರ್ಮಿಸಿರುವುದು ಹೆಮ್ಮೆಯ ವಿಚಾರವಾಗಿದ್ದು, ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳುವ ನಿಟ್ಟಿನಲ್ಲಿ ಸಹಕಾರ ನೀಡುತ್ತೇನೆ ಎಂದರು. 
       ಸಮಿತಿ ಪ್ರಮುಖರಾದ ಅಧ್ಯಕ್ಷ ಆರ್. ಮಹೇಶ್ ಕುಮಾರ್, ಎಂ. ವಾಗೀಶ್ ಕುಮಾರ್ ಕೋಠಿ, ಮಲ್ಲಿಕಾರ್ಜುನ್, ನಂಜಪ್ಪ, ಷಣ್ಮುಖಪ್ಪ, ಉದಯ್ ಕುಮಾರ್, ನಾಗಾನಂದ, ಶೋಭಾ ಮತ್ತು ನಾಗರತ್ನ ಹಾಗು ಮುಖಂಡರಾದ ಎಚ್. ತೀರ್ಥಯ್ಯ, ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment